Advertisement

Tag: ಕಾದಂಬರಿ

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಸುಪ್ರೀತ್ ಕೆ.ಎನ್. ಅವರ ‘ಉತ್ತರ’ ಕಾದಂಬರಿಯ ಪುಟಗಳು

ಈ ಬಾರಿಯ ಸಾಕ್ಷಾತ್ಕಾರ ಕಾರ್ಯಕ್ರಮಕ್ಕೆ ಈಗಾಗಲೇ ಅಭ್ಯರ್ಥಿಗಳು ಬಂದಾಗಿದೆ, ಹೊಸದಾಗಿ ಇನ್ಯಾರು ಬರುವುದಿದೆ ಎಂದು ಯೋಚಿಸಿದಾಗ, ಗುರುದೇವರು ಇನ್ನಿಬ್ಬರು ಬರುತ್ತಾರೆ ಎಂದು ಹೇಳಿದ್ದು ನೆನಪಾಯಿತು. ಜಯಕ್ಕನ ಸಮಾಧಿಯಿಂದ ಗುರುದೇವರ ನಿವಾಸಕ್ಕೆ ಮಾತಾಜೀಯವರು ಹೋಗಿ ತಮ್ಮ ಮನಸ್ಸಿನಲ್ಲಿದದ್ದನ್ನು ಹೇಳುವ ಮೊದಲೇ, ‘ದಕ್ಷಿಣ ಕಡೆಯಿಂದ ಒಬ್ಬ ಬರ್ತಾನೆ. ಅವನಿಗೆ ಸಾಧನೆಗಳನ್ನ ಮಾಡಿಸಿ, ಮೌನ ಕಾರ್ಯಕ್ರಮಕ್ಕೆ ತಯಾರು ಮಾಡಬೇಕು. ಅವನ ಬಗ್ಗೆ ನೀವು ವಿಶೇಷವಾಗಿ ಗಮನವಿಡಿ’ ಎಂದು ಹೇಳಿದರು.
ಸುಪ್ರೀತ್ ಕೆ.ಎನ್. ಅವರ ಹೊಸ ಕಾದಂಬರಿ ‘ಉತ್ತರ’ ಬಿಡುಗಡೆಗೆ ಸಿದ್ಧಗೊಳ್ಳುತ್ತಿದ್ದು ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಮಾಸ್ತಿಯವರ ಐತಿಹಾಸಿಕ ಕಾದಂಬರಿಗಳ ಕಥಾವಿಸ್ತಾರ

ಮಾಸ್ತಿಯವರು ಐತಿಹಾಸಿಕ ಕಾದಂಬರಿಗಳನ್ನು ಬರೆಯುವ ಕಾಲಕ್ಕೆ ಆದರ್ಶಪ್ರಾಯ ಚಾರಿತ್ರಿಕ ಕಥಾನಾಯಕರನ್ನು ಚಿತ್ರಿಸುವ ಮಾದರಿ ಒಂದು ಕಡೆ ಇತ್ತು. ಇನ್ನೊಂದು ಕಡೆ ಬಂಗಾಳದ ‘ಆನಂದಮಠ’ದಂಥ ಕಾದಂಬರಿ, ಶಿವಾಜಿ, ರಾಜಸಿಂಹರಂಥ ದೇಶಭಕ್ತರ ಜೀವನವನ್ನು ವೈಭವೀಕರಿಸಿ ಬರೆಯುವ ಮಾದರಿ ಇತ್ತು. ಇವರಿಗೆ ಹೋಲಿಸಿದರೆ ಮಾಸ್ತಿಯವರ ಎರಡೂ ಕಾದಂಬರಿಗಳ ಕಥಾನಾಯಕರು ಇಂಥ ಅದರ್ಶಪೂರ್ಣ ಮಾದರಿಗಳಿಗೆ ಹೊರತಾಗಿದ್ದಾರೆ.

Read More

ಕಂಬಾರರಿಗೆ ಒದಗಿ ಬಂದ ಮತ್ತೊಂದು ಕತೆ ಚಾಂದಬೀ ಸರ್ಕಾರ

ದೇಶಪಾಂಡೆ ಅವರ ಮನೆಯಿಂದ ಖಾನ್ ಇದ್ದ ಸ್ಥಳಕ್ಕೆ ತಲುಪುವತನಕ ಚಾಂದಬೀ ಭೂಮಿಯ ಮೇಲೆ ಕಾಲೂರಲೇ ಇಲ್ಲ. ಕ್ಷಣಕ್ಕೊಮ್ಮೆ ಗರ್ಭವ ಮುಟ್ಟಿ ನೋಡಿಕೊಳ್ಳುತ್ತ ಪ್ರತಿಸಲವೂ ಹೊಸ ಹೊಸದಾಗಿ ಕೃಷ್ಣನ ತಾಯಿ ಯಶೋಧೆಯಾಗಿ ಕನಸು ಕಾಣತೊಡಗಿದಳು. ಖಾನನ ಬಳಿಗೆ ಹೋದೊಡನೆ ದೇಶಪಾಂಡೆ ದಂಪತಿಗಳ ಪ್ರೀತಿ, ಗೌರವಾದರಗಳನ್ನು ಹತ್ತು ಸಲ ಹೇಳಿದಳು. ಬಸಿರಾದ ವಿಷಯವನ್ನು ಹತ್ತು ಬಾರಿ ಹೇಳಿದಳು. ಪ್ರತಿಯೊಂದು ಸಲವೂ ಇದೇ ಮೊದಲನೇ ಸಲವೆಂಬಂತೆ ಪ್ರತಿಸಲವೂ ಹೊಸ ಹೊಸ ವಿವರಗಳೊಂದಿಗೆ ಹೇಳಿದಳು.
ಡಾ. ಚಂದ್ರಶೇಖರ ಕಂಬಾರರ ಹೊಸ ಕಾದಂಬರಿ ‘ಚಾಂದಬೀ ಸರ್ಕಾರ’ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ವಸುಧೇಂದ್ರರ ‘ತೇಜೋ=ತುಂಗಭದ್ರಾ’ ಕುರಿತು ಎಚ್.ಆರ್. ರಮೇಶ್ ಲೇಖನ

“ಹಂಪಕ್ಕಳನ್ನು ಇವರ ಸುಪರ್ದಿಗೆ ಬಿಟ್ಟು ಹೊರಟಾಗ ಹಂಪಕ್ಕಳಿಗೆ ಇವನ ಮೇಲೆ ಆಸೆ ಹುಟ್ಟುತ್ತದೆ. ಆದರೆ ಅವನು ‘ನಾನೊಂದು ದೇಶದವನು, ನೀನು ಮತ್ತೊಂದು ದೇಶದವಳು. ಒಂದಕ್ಕೊಂದು ಸಂಬಂಧವಿಲ್ಲದ ಸಂಸ್ಕೃತಿಯಲ್ಲಿ ಬೆಳೆದವರು. ಇಬ್ಬರಿಗೂ ಹೊಂದಾಣಿಕೆಯಾಗುವುದಿಲ್ಲ ಹಂಪಮ್ಮ’ ಎನ್ನುತ್ತಾನೆ. ಅದಕ್ಕೆ ಅವಳು ‘ಕಣ್ಣಾ, ಹಲವಾರು ಬಗೆಯ ಕುಲಾವಿಗಳನ್ನು ಹೊಲಿದವಳು ನಾನು… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ