Advertisement

Tag: ಕೃತಿ ಆರ್ ಪುರಪ್ಪೇಮನೆ

ಯಕ್ಷಗಾನ ಸಂಘಟಕರ ಸಂದರ್ಶನ…

ನಿಜವಾಗಿ ಹೇಳೊದಂದ್ರೆ ನಮಗೆ ಯಕ್ಷಗಾನದ ಮೇಲಿರೊ ಪ್ರೀತಿನೆ ಯಕ್ಷಗಾನ ಮಾಡಿಸೋಕೆ ಇರೊ ಕಾರಣ. ಇಲ್ಲಿ ಪ್ರತಿ ದಿನ ಒಂದಿಪ್ಪತ್ತು ಜನ ಇಲ್ಲಿ ಸೇರ್ತೇವಲ್ಲ, 365 ದಿನನೂ ಯಕ್ಷಗಾನದ ಏನಾದ್ರು ಒಂದು ಸುದ್ದಿ ಮಾತಾಡೇ ಆಡ್ತಿವಿ. ಮಳೆಗಾಲದಲ್ಲಿ ತಾಳಮದ್ದಲೆ ನೋಡ್ತಿವಿ. ಇಲ್ಲಿ ಈ ತರ ಅರ್ಥ ಹೇಳಿದರು. ಅಲ್ಲೊಂದು ಆಟ ನೋಡಿಕೊಂಡು ಬಂದೆ, ಹಿಂಗಾಯಿತು, ಹಂಗಾಯಿತು ಅಂತ ಏನೊ ಒಂದು ಮಾತು ಇರತ್ತೆ.
“ಯಕ್ಷಾರ್ಥ ಚಿಂತಾಮಣಿ” ಅಂಕಣದಲ್ಲಿ ಕೃತಿ ಆರ್ ಪುರಪ್ಪೇಮನೆ ಬರಹ

Read More

ಸ್ತ್ರೀ ವೇಷ: ಕೆಲವು ಬಿಡಿ ಆಲೋಚನೆಗಳು

ಶೈಲೀಕೃತ ಮಾಧ್ಯಮವಾದ ಯಕ್ಷಗಾನದಲ್ಲಿನ ಸ್ತ್ರಿ ಪಾತ್ರದ ಅತೀ ನಾಟಕೀಯತೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳುವುದಕ್ಕೆ, ಅದು ನನಗೆ ಪ್ರತಿರೋಧದ ಮಾದರಿಯಾಗಿ ಕಾಣುವುದಕ್ಕೆ ಅಥವಾ ಹಲವು ಸಾಧ್ಯತೆಗಳಿವೆ ಎಂದು ಅನ್ನಿಸುವುದಕ್ಕೆ ಸ್ವಲ್ಪ ವಿವರಣೆ ಬೇಕಾಗಬಹುದು. ಪ್ರಸಂಗಗಳನ್ನು ನೋಡುವಾಗ ಸ್ತ್ರೀ ಪಾತ್ರಗಳ ಆಯಾಮ ಹೆಚ್ಚಾಗಿ ಹೇಗಿರುತ್ತದೆ ಎಂದರೆ ಮೇಲೆ ಹೇಳಿದ ಮೌಲ್ಯಗಳ ಪ್ರಸಾರ ಅಥವಾ ಬೋಧನೆ ರೂಪದಲ್ಲಿರುತ್ತದೆ. ಅಂದರೆ ಹೆಣ್ಣು ಹೇಗಿರಬೇಕೆಂದು ಉಪದೇಶ ಮುಗಿಸಿ, ಈಗ ಮುಂದಿನ ಕತೆಯೊ, ದೃಶ್ಯಕ್ಕೊ ಹೋಗುವುದು ಅನ್ನುವ ಹಾಗಿರುತ್ತದೆ.
ಕೃತಿ ಆರ್ ಪುರಪ್ಪೇಮನೆ ಬರೆಯುವ ಅಂಕಣ “ಯಕ್ಷಾರ್ಥ ಚಿಂತಾಮಣಿ”

Read More

ಇದು ಪ್ರೇಕ್ಷಕಾನುಸಂಧಾನ

ಒಂದು ಪ್ರಸಂಗದಲ್ಲಿ ಭೀಷ್ಮ, ಸತ್ಯವತಿಯನ್ನು ತುಂಬಾ ವರ್ಣನೆ ಮಾಡಿದ್ದನ್ನುಸರೋಜಕ್ಕ ನೋಡಿದರು. ತಂದೆ ಇಷ್ಟ ಪಟ್ಟ ಹೆಣ್ಣನ್ನು ತಾಯಿ ಅಂತನೇ ನೋಡಬೇಕಿತ್ತು. ಹಾಗೆಲ್ಲಾ ತುಂಬಾ ವರ್ಣನೆ ಮಾಡಿದ್ದು ಆಭಾಸವಾಯಿತು ಅಂದರು. ಕರ್ಣಪರ್ವದಲ್ಲಿ ಕರ್ಣ ಪಾಪ, ಪಾಂಡವರಾಗಿ ಹುಟ್ಟಿದರೂ ಏನು ಇಲ್ಲ. ತಾಯಿ ಇದಾರೆ, ತಮ್ಮಂದಿರಿದಾರೆ. ಆದರೂ ಯಾರೂ ಇಲ್ಲ. ಇಡೀ ಮಹಾಭಾರತದಲ್ಲಿ ಕರ್ಣ ಅಂದ್ರೆ ಬಹಳ ಪ್ರೀತಿ. ಕುಂತಿ ನೋಡಿದ್ರೆ ಸಿಟ್ಟು ಬರತ್ತೆ ಒಂದೊಂದ್ಸಲ. ಆದರೆ ಕೀಲಿ ಕೈ ಇರೋದು ಕೃಷ್ಣನ ಹತ್ರನೇ. ಕಪಟ ನಾಟಕ ಅಂತನೇ ಇದೆಯಲ್ಲ.
ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯ‌ ಬರಹ

Read More

‘ಯಕ್ಷಗಾನೀಯವಲ್ಲದ್ದು ಔಚಿತ್ಯವೂ ಅಲ್ಲ’

ಯಕ್ಷಗಾನದ ಆವರಣದಲ್ಲೇ ಹುಟ್ಟಿ ಬೆಳೆದ ಜಿ ಎಸ್ ಭಟ್ಟರು, ಗುಂಡುಬಾಳದ ಆಟ ನೋಡುತ್ತಲೇ ಬೆಳೆದವರು. ಅವರ ಯೌವನ ಕಾಲದಲ್ಲಿ ನಾಟಕದ ಬಗ್ಗೆಯು ಆಸಕ್ತಿ ವಹಿಸಿದ್ದರು. ಗುಂಡುಬಾಳದ ಹರಕೆ ಆಟವು ಯಕ್ಷಗಾನ ಕಲಾ ಪ್ರಕಾರದಲ್ಲೇ ವಿಶಿಷ್ಟವಾದ ಮಾದರಿ. ಅಲ್ಲಿ ದೇವರೇ ಪ್ರೇಕ್ಷಕರು. ಹಾಗಾದ್ದರಿಂದಲೇ ಅದು ಹೊಸ ನಡೆಯ ಪ್ರಯೋಗಗಳಿಗೆ…
“ಯಕ್ಷಾರ್ಥ ಚಿಂತಾಮಣಿ”ಯಲ್ಲಿ ಜಿ ಎಸ್ ಭಟ್ಟರ ಜೊತೆಗೆ ತಾವು ನಡೆಸಿದ ಸಂದರ್ಶನವನ್ನು ಬರೆದಿದ್ದಾರೆ ಕೃತಿ ಆರ್‌ ಪುರಪ್ಪೇಮನೆ

Read More

‘ಸಮಷ್ಟಿ ನೀತಿ’ ಒಪ್ಪುವ ಔಚಿತ್ಯದ ಚರ್ಚೆ

ಯಕ್ಷಗಾನಕ್ಕೆ ಲಕ್ಷಣಗ್ರಂಥವಿಲ್ಲ, ಪ್ರಪಂಚದ ಹಲವು ಪ್ರದರ್ಶನ ಕಲೆಗಳಿಗೂ ಶಾಸ್ತ್ರ ಹೇಳುವ ‘ಪಠ್ಯ’ಗಳಿಲ್ಲ. ನಾಟ್ಯಶಾಸ್ತ್ರ, 11 ನೇ ಶತಮಾನದಲ್ಲಿ ಕ್ಷೇಮೆಂದ್ರ ಬರೆದ ‘ಔಚಿತ್ಯ ವಿಚಾರ ಚರ್ಚಾ’ ಇತ್ಯಾದಿ ಗ್ರಂಥಗಳಿದ್ದರೂ ಆ ಕಾಲದಲ್ಲೇ ಕಲಾಪ್ರಕಾರಗಳು ಅವುಗಳನ್ನು ಎಷ್ಟು ಅನುಸರಿಸುತ್ತಿದ್ದವೊ ಗೊತ್ತಿಲ್ಲ. ಆದರೆ ಪಠ್ಯಗಳು ಒಂದಕ್ಕೊಂದು ಪ್ರತಿಕ್ರಿಯಿಸುತ್ತಾ, ಒಂದನ್ನೊಂದು ವ್ಯಾಖ್ಯಾನಿಸುತ್ತಾ ತಮ್ಮದನ್ನು ಸೇರಿಸುವ ‘ಅಂತರ್ ಪಠ್ಯೀಯತೆ’ಯು ಪಠ್ಯ ಮತ್ತು ಪ್ರಯೋಗಕ್ಕೂ ಅನ್ವಯಿಸುತ್ತದೆ.  ಕೃತಿ ಆರ್. ಪುರಪ್ಪೇಮನೆ ಬರೆಯುವ ‘ಯಕ್ಷಾರ್ಥ  ಚಿಂತಾಮಣಿ’ ಸರಣಿಯಲ್ಲಿ ಯಕ್ಷಗಾನ ಔಚಿತ್ಯದ ಕುರಿತ ಲೇಖನ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ