Advertisement

Tag: ಕೆಂಡಸಂಪಿಗೆ

ತಾವಾಗೇ ಬಿದ್ದವರು ನನ್ನ ಬೈದಿದ್ದರು!: ಎಚ್. ಗೋಪಾಲಕೃಷ್ಣ ಸರಣಿ

ಬರ್ತಾ ಬರ್ತಾ ಅಜ್ಜಿ ಒಂದು ಗುಂಡಿಯಲ್ಲಿ ನೋಡದೆ ಕಾಲು ಇಟ್ಟಿತು. ಮೊಗಚಿಕೊಂಡು ಹಳ್ಳದಲ್ಲಿ ಮುಖಾಡೆ ಬಿದ್ದು ಬಿಡ್ತು. ಎಪ್ಪತ್ತು ವರ್ಷದ ಕೆಂಪು ಸೀರೆ ಉಟ್ಟ ಮಡಿ ಹೆಂಗಸು ಅಜ್ಜಿ ಆಗ. ತೆಳು ದೇಹ, ಮುಟ್ಟಿದ ಕಡೆ ಎಲ್ಲಾ ಮೂಳೆಗಳೇ, ಬೊಚ್ಚು ಬಾಯಿ ವಟ ವಟ ವಟ ನಾನ್ ಸ್ಟಾಪ್ ಮಾತು. ಅದು ಹೇಗೋ ಅವರನ್ನು ಮೇಲೆ ಎಬ್ಬಿಸಿದೆ. ದಾರಿ ಉದ್ದಕ್ಕೂ ಅದರ ಕೈಲಿ ಸಹಸ್ರ ನಾಮ ಮಾಡಿಸಿಕೊಂಡೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಬೆಳೆದ ಅಕ್ಕಿಯ ಉಣ್ಣುವ ತವಕ…: ಗುರುಪ್ರಸಾದ ಕುರ್ತಕೋಟಿ ಅಂಕಣ

ಇದೊಂಥರ ವೈರುಧ್ಯ. ಚೆನ್ನಾಗಿದೆ ಆದರೂ ತಿನ್ನೋಲ್ಲ! ಯಾಕಿರಬಹುದು? ಬಹುಶಃ ಬೆಳ್ಳಗೆ ಪಾಲಿಶ್ ಮಾಡಿದ ರೇಷನ್ ಅಕ್ಕಿಯನ್ನು ತಿಂದು ತಿಂದು ಅವರಿಗೆ ರೂಡಿ ಆಗಿಬಿಟ್ಟಿದೆಯೋ ಏನೋ. ತವಡನ್ನು ತೆಗೆದು ಅದರಲ್ಲಿ ಏನೂ ಇರದಂತೆ ಮಾಡಿ ಪಾಲಿಶ್ ಮಾಡಿ ಕೊಡುವ ಅಕ್ಕಿಯೇ ಎಲ್ಲರಿಗೂ ಪ್ರಿಯ. ಶ್ರೀಮಂತರು ಅಷ್ಟೇ ಯಾಕೆ ತಿನ್ನಬೇಕು ಎಲ್ಲರೂ ತಿನ್ನೋಣ ಅಂತ ಇವರೂ ಪಾಲಿಶ್ ಅಕ್ಕಿಯ ಮೊರೆ ಹೋದರೆ? ಇದೆ ಕಾರಣಕ್ಕೆ ಶ್ರೀಮಂತರಿಗೆ ಬರುವ ಸಕ್ಕರೆ ಕಾಯಿಲೆ, ಹೃದಯ ರೋಗ ಈಗ ಎಲ್ಲರಿಗೂ ಬರುತ್ತಿದೆ.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ನೋವಿನಲ್ಲೂ ನಗುವುದ ಕಲೀಬೇಕು: ನಾಗಶ್ರೀ ಅಜಯ್‌ ಅಂಕಣ

“ಕೆಲವೊಮ್ಮೆ ಈ ಗಂಡ, ಮಗು, ಸಂಸಾರ, ದುಡಿಮೆ, ಸಂಪಾದನೆ, ಕೊಂಕು ಮಾತು, ಅನಾರೋಗ್ಯ ಎಲ್ಲದರಿಂದ ಬಹಳ ದೂರ ಹೋಗಿ, ನಾನೊಬ್ಬಳೇ ಪ್ರಶಾಂತವಾಗಿ ಕೆಲಕಾಲ ಕಳೆಯಬೇಕನ್ನಿಸುತ್ತೆ. ಆದರೆ ಎಲ್ಲಿ ಹೋಗುವುದು? ಹೀಗೆ ವಾಸ್ತವ ಹಿಂಸೆಯೆನಿಸಿದಾಗೆಲ್ಲ, ಬೇಸರದಲ್ಲೇ ಕತ್ತಲಕೋಣೆಯಲ್ಲಿ ಉಳಿಯುವುದರ ಬದಲು, ಮನೆತುಂಬ ಬೆಳಕಾಗುವಂತೆ ಝಗಮಗಿಸಿ, ಸ್ನಾನ ಮಾಡಿ, ನಾನು ಹೊಸದಾಗಿ ಕೊಂಡ ಬಟ್ಟೆ ತೊಟ್ಟು, ನನಗೇ ಹೆಮ್ಮೆಯಾಗುವಷ್ಟು ಚೆಂದಕ್ಕೆ ಅಲಂಕರಿಸಿಕೊಂಡು ಅರ್ಧಗಂಟೆ ಕನ್ನಡಿಯ ಮುಂದೆ ನಗುಮುಖದಲ್ಲಿ ಕೂತಿರುತ್ತೇನೆ.”
ಎಸ್. ನಾಗಶ್ರೀ ಅಜಯ್‌ ಬರೆಯುವ ಲೋಕ ಏಕಾಂತ ಅಂಕಣದಲ್ಲಿ ಹೊಸ ಬರಹ

Read More

ಬಚ್ಚಲಿನ ಬಗೆಗೊಂದು ಭಾವಸ್ಫುರಣ: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ!
ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್‌ ನೇರಳಕಟ್ಟೆ

Read More

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್‌ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್‌ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್‌ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ