Advertisement

Tag: ಕೆಂಡಸಂಪಿಗೆ

ಅಬ್ದುಲ್‌ ರಶೀದ್‌ ಬರೆದ ಈ ಭಾನುವಾರದ ಕಥೆ

ಕಾಣೆಯಾಗಿದ್ದ ಟಿಬೆಟನ್ ಕ್ಯಾಂಪಿನ ಮೂವರು ಹಸುಳೆಗಳು ಇದೇ ಬಿಡಾರದ ಬಾಗಿಲು ತಟ್ಟಿ ಆಹಾರ ಕೋರಿದ್ದರು. ಕುಡಿದು ಬಿದ್ದಿದ್ದ ಈ ಆಸಾಮಿ ಕಣ್ಣೇ ಬಿಟ್ಟಿರಲಿಲ್ಲ. ಆತ ಕಣ್ಣು ಬಿಟ್ಟಾಗ ಆತನ ಮಡದಿ ಅದಾಗಲೇ ಲಾಮಾ ಮಕ್ಕಳ ಬಟ್ಟೆ ಬದಲಾಯಿಸಿ, ಬಿಸಿ ನೀರಲ್ಲಿ ಸ್ನಾನ ಮಾಡಿಸಿ, ಹೊಟ್ಟೆಗೆ ತಿನ್ನಲು ಕೊಟ್ಟು, ಅವರ ಕಾಷಾಯ ವಸ್ತ್ರಗಳನ್ನು ಒಗೆದು ಬಿಸಿಲಿಗೆ ಒಣಗಲು ಹಾಕಿ, ಅವರಿಗೆ ಕಂಬಳಿ ಹೊದೆಸಿ ಬೆಚ್ಚಗೆ ಮಲಗಿಸಿ ಅವರನ್ನು ಕಾದು ಕುಳಿತಿದ್ದಳು.
ಅಬ್ದುಲ್‌ ರಶೀದ್‌ ಬರೆದ ಕಥೆ “ಅಂತಾರಾಷ್ಟ್ರೀಯ ಕುಂಬಳಕಾಯಿ”

Read More

ಕ್ರಿಕೆಟ್‌ ಜಗತ್ತಿನ ಕೆಚ್ಚೆದೆಯ ಸರ್ದಾರರು

ಸ್ಟುವರ್ಟ್ ವಿರುದ್ಧ ಸಿಟ್ಟಿನಲ್ಲಿದ್ದ ಯುವ್‌ರಾಜ್‌ ಸ್ಟುವರ್ಟ್ ಬ್ರಾಡ್‌ನ ಬೋಲಿಂಗ್ ಎದುರಿಸಲು ಮುಂದಾದರು. ಅವರ ಸಿಟ್ಟು ಎಷ್ಟರಮಟ್ಟಿಗೆ ಇತ್ತು ಅಂದರೆ ಮುಂದೆ ಅವರು ಆಡಿದ ಪ್ರತಿ ಬಾಲನ್ನೂ ಸಿಕ್ಸರ್‌ಗೆ ಕಳಿಸಿದರು. ಒಂದೊಂದು ಸಿಕ್ಸರ್ ಹೊಡೆದಮೇಲೂ ಫ್ಲಿಂಟಾಫ್ ಕಡೆಗೆ ನೋಡಿ ಬ್ಯಾಟ್ ತಿರುಗಿಸುತ್ತಿದ್ದರು ಯುವ್‌ರಾಜ್‌! ಬ್ರಾಡ್ ಪಾಪ! ಅವರು ಬಹಳ ದೊಡ್ಡ ಬೆಲೆ ತೆರಬೇಕಾಯಿತು. 6 ಬಾಲುಗಳಲ್ಲಿ 36! ಇ ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಯುವ್‌ರಾಜ್‌ ಸಿಂಘ್‌ ಹಾಗೂ ಹರ್ಭಜನ್‌ ಸಿಂಘ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಹಲವು ಹೃದಯಗಳ ಮುಟ್ಟಿದ ಚಲನಚಿತ್ರೋತ್ಸವ..

ಮೂರನೇ ಅತ್ತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿರುವ ʻಫೋಟೋʼ ಚಿತ್ರದ್ದು ಬೇರೆಯದೇ ರೀತಿಯ ಛಾಪು. ಚಿತ್ರೋತ್ಸವದ ಎರಡನೇ ದಿನ 4ನೇ ಪರದೆಯಲ್ಲಿ ಮೊದಲ ಪ್ರದರ್ಶನ ಕಂಡ ಈ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿದು ತುಂಬಿದ್ದರು. ಆಸನಗಳು ಸಾಲದಕ್ಕೆ ಚಿತ್ರಮಂದಿರದ ನಿಯಮವನ್ನೂ ಮುರಿದು ಮೆಟ್ಟಿಲುಗಳ ಮೇಲೆ ಕುಳಿತು ಸಹ ಹಲವರು ಚಿತ್ತ ಬದಲಿಸದೇ ನೆಟ್ಟ ದೃಷ್ಟಿಯಲ್ಲೇ ಚಿತ್ರವನ್ನು ವೀಕ್ಷಿಸಿದರು.
‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ನೋಡಿದ ಸಿನಿಮಾಗಳ ಕುರಿತು ಕುಮಾರ ಬೇಂದ್ರೆ ಬರಹ

Read More

ಅಪ್ಪನ ಅಲ್ಸರ್ ಖಾಯಿಲೆ ಮತ್ತು ಅಂಕಗಳ ವ್ಯಾಮೋಹ

ಈಗಿನಂತೆ ಮೊಬೈಲ್ ಕಾಲವೂ ಅಲ್ಲ. ಊರಿಗೆ ಲ್ಯಾಂಡ್ ಫೋನ್‌ ಸಹ ಇರಲಿಲ್ಲ. ಅಪ್ಪನ ಜೊತೆಯಲ್ಲಿ ಹೋಗಿದ್ದ ಕೆಲವರು ಬೆಳಿಗ್ಗೆ ಬಂದು ಹೇಳಿದಾಗಲೆ ನಮಗೆ ತಿಳಿದಿದ್ದು. ಅಪ್ಪನಿಗೆ ‘ಅಲ್ಸರ್’ ಆಗಿದೆ ವಿಪರೀತ ಹಾಲ್ಕೋಹಾಲ್ ಸೇವನೆಯಿಂದ ಹೀಗಾಗಿದೆ ಎಂದು. ಬೆಳಗ್ಗೆಯಷ್ಟರಲ್ಲಿ ಶಸ್ತ್ರಚಿಕಿತ್ಸೆ ಮುಗಿದು, ಯಶಸ್ವಿಯಾಗಿತ್ತು. ಜೀವಕ್ಕೆ ಅಪಾಯವಿರಲಿಲ್ಲ. ಆದರೆ ಮೂರು ತಿಂಗಳು ಆಸ್ಪತ್ರೆಯಲ್ಲಿಯೇ ಇರಬೇಕು ಎಂಬ ವಿಷಯವನ್ನು ತಿಳಿಸಿದ್ದರು. ರಾತ್ರಿ ಇಡೀ ನಿದ್ದೆಯಿಲ್ಲದೆ ಆತಂಕದಿಂದಲೇ ಕಳೆದಿದ್ದ ನಾವೆಲ್ಲ ನಿಟ್ಟುಸಿರು ಬಿಟ್ಟಿದ್ದೆವು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಆರನೆಯ ಕಂತು ನಿಮ್ಮ ಓದಿಗೆ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ