Advertisement

Tag: ಕೆಂಡಸಂಪಿಗೆ

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ದೇವರೇ ಬೆನ್ನಟ್ಟಿ ಬಂದಾಗ!

ಅದ್ಯಾವಾಗ ಹರ್ಷ ಬಾಗಿಲು ದಾಟಿದ ಸದ್ದಾಯಿತೋ ಕೋಮಲ ನಿಧಾನವಾಗಿ ಕಣ್ಣು ಬಿಟ್ಟಿದ್ದಾನೆ. ಬಿಟ್ಟವನು ತಾನು ಸಿನಿಮಾ ನೋಡಲು ಹೋಗುವುದೋ ಬೇಡವೋ ಎಂದು ಯೋಚಿಸುತ್ತಿರುವಾಗಲೇ ಫಕ್ಕನೆ ಕರೆಂಟ್ ಹೋಗಿದೆ! ಕೂಡಲೇ ಕೋಮಲ “ನಾನೂ ಜೊತೆಗೆ ಬರುತ್ತೇನೆ” ಎಂದು ಹರ್ಷನಿಗೆ ಹೇಳುವ ಸಲುವಾಗಿ “ಹರ್ಷ., ಹರ್ಷ.,” ಎಂದಿದ್ದಾನೆ. ನೋಡಿದರೆ ಅದಾಗಲೇ ಹರ್ಷ ಜಾಗ ಖಾಲಿ ಮಾಡಿ ಆಗಿದೆ. ಒಡನೆಯೇ ಕೋಮಲನಿಗೆ ಇಡೀ ಕಟ್ಟಡದಲ್ಲಿ ಇರುವುದು ತಾನೊಬ್ಬನೇ ಎಂಬ ಹೊಳವು ಬಂದು ದಿಗಿಲಾಗಿದೆ.
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಅಪೂರ್ಣವಲ್ಲ… ಪೂರ್ಣತೆಯೆಡೆಗೆ ಸಾಗುವ ದಾರಿ

ಕೊನೆಗೌಡ ಮತ್ತು ಪ್ರೀತಿ ಎಂಬ ಕಥೆ ವಿಶಿಷ್ಟವಾದದ್ದು. ಪ್ರೀತಿ ಎನ್ನುವುದು ಕೇವಲ ಮೇಲ್ವರ್ಗದ ಸೊತ್ತಲ್ಲ, ಪ್ರೀತಿಯ ನಿಜವಾದ ರೂಪ ಕಾಣಿಸುವುದು ಸಂಸಾರ ಆರಂಭವಾದ ಮೇಲೆ ಎಂಬುದನ್ನು ಸುಂದರವಾಗಿ ತಿಳಿಸಿಕೊಡುವ ಕಥೆ. ಅನಾಥನಾಗಿದ್ದ ಕಥಾನಾಯಕ ಹೆಂಡತಿಯನ್ನೇ ಸರ್ವಸ್ವವೆಂದು ಬಗೆದು ಅವಳಿಗೆ ಪ್ರೀತಿಯನ್ನು ಧಾರೆಯೆರೆಯುವ ಪರಿ ಮನೋಜ್ಞವಾಗಿ ಚಿತ್ರಿತವಾಗಿದೆ. ವೃದ್ಧಾಪ್ಯದಲ್ಲೂ ಪ್ರೀತಿ ಬಾಡದೆ ಮಾಗುತ್ತದೆ ಎಂಬುದನ್ನು ಲೇಖಕಿ ಸಮರ್ಥವಾಗಿ ನಿರೂಪಿಸಿದ್ದಾರೆ. ಕಾಲವು ಬರುವುದು ಒಂದು ದಿನ ಎಂಬ ಕೊನೆಯ ಕಥೆ ಸಾಮಾಜಿಕ ಸುಧಾರಣೆಯನ್ನು ಮಾಡಹೋಗಿ ಬಹಿಷ್ಕಾರಕ್ಕೆ ಒಳಗಾದವನ ಕಥೆ.
ಸುಧಾ ಎಂ. ಚೊಚ್ಚಲ ಕಥಾ ಸಂಕಲನ “ಅಪೂರ್ಣವಲ್ಲ” ಕುರಿತು ಮಹಾಬಲ ಭಟ್‌ ಅವರ ಬರಹ

Read More

ಗುಮ್ಮನಿಂದಲೂ ಚಾಕೋಲೇಟ್‌ ಕೊಡಿಸುವ “ಕಾರ್ನಿವಲ್” ಹಬ್ಬ…

ಅಕ್ಟೋಬರ್‌ನಿಂದ ಖಿನ್ನಗೊಂಡ ಮನಸ್ಸುಗಳು ಮತ್ತೆ ಸೂರ್ಯನ ಬೆಳಕು ಹೆಚ್ಚಾಗುವುದನ್ನು ಕಾದು ಕುಳಿತಿರುತ್ತವೆ. ಚಳಿಗಾಲದ ಸಂಕ್ರಮಣ ಬದುಕಿನ ಹುರುಪನ್ನು ಹಿಂದಿರುಗಿ ಕೊಡುತ್ತದೆ. ಬಹಳ ಹಿಂದಿನ ದಿನಗಳಲ್ಲಿ ನಂಬಿಕೆಗಳು ಹುಟ್ಟುವ ಕಾಲಘಟ್ಟದಲ್ಲಿ, ಫೆಬ್ರವರಿ ಸಮಯದ ದಿನಗಳನ್ನು ವಿಶೇಷವಾಗಿ ನೋಡಲಾಗುತ್ತಿತ್ತು. ಕತ್ತಲು ಎಂಬ ದುಷ್ಟ ಶಕ್ತಿಯನ್ನು ತೊಲಗಿಸಿ, ಬೆಳಕು ಎಂಬ ಭರವಸೆಯನ್ನು ಮರುಸ್ಥಾಪಿಸಲು ಜನರು ಒಂದು ಹಬ್ಬವನ್ನು ಹುಟ್ಟು ಹಾಕಿದರು.
“ದೂರದ ಹಸಿರು” ಸರಣಿಯಲ್ಲಿ ಗುರುದತ್ ಅಮೃತಾಪುರ ಬರಹ

Read More

ದ್ರಾವಿಡ್ ಮತ್ತು ಗಂಗೂಲಿ: ಒಂದು ಅಪೂರ್ವ ಜೋಡಿ

ಅವರ ಕ್ರಿಕೆಟ್ಟನ್ನು ಸದಾಕಾಲ ಸ್ಮರಿಸಲು ಕರ್ನಾಟಕದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ, ‘ದ ವಾಲ್‌ʼಗೆ ಒಂದು ಗೋಡೆ ಮೀಸಲಿಟ್ಟು ಅವರ ಚಿತ್ರವನ್ನು ಮಾಡಿಸಿದ್ದಾರೆ. ಇದು ಒಂದು ರೀತಿ ಜನಗಳು, ಕ್ರೀಡಾಭಿಮಾನಿಗಳು, ಮುಂದಿನ ಪೀಳಿಗೆಯವರು ರಾಹುಲ್ ದ್ರಾವಿಡ್‌ರ ಆಟವನ್ನು ಇಲ್ಲಿ ಬಂದು ನೋಡಿ ಅವರ ಆಟವನ್ನು ಸ್ಮರಿಸುವುದಕ್ಕೆ ಅವಕಾಶ. ಅದರ ಮೇಲೆ ಕನ್ಸಿಸ್ಟೆನ್ಸಿ, ಕಮಿಟ್ಮೆಂಟ್, ಕ್ಲಾಸ್ ಎಂದು ಬರೆಸಿದ್ದಾರೆ. ಅರ್ಥಾತ್‌ ಸ್ಥಿರತೆ, ಭದ್ಧತೆ ಮತ್ತು ಆಡುವ ಶಿಸ್ತು ಅನ್ನುವ ಅರ್ಥ ಕೊಡುತ್ತೆ. ಇದೆಲ್ಲವೂ ಅವರ ಆಟಗಾರಿಕೆಯಲ್ಲಿ ನೋಡಬಹುದು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ