Advertisement

Tag: ಕೆಂಡಸಂಪಿಗೆ

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ರೂಪಾತೀತ, ಗಾತ್ರಾತೀತ, ಕಾಲಾತೀತ ಶಿವ….

ಮಧ್ಯಪ್ರದೇಶದ ಭೋಜಪುರದಲ್ಲಿರುವ ಭೋಜೇಶ್ವರ, ತಮಿಳುನಾಡಿನ ತಂಜಾವೂರಿನ ಬೃಹದೇಶ್ವರ ಲಿಂಗ ನೆನಪಾಗುತ್ತದೆ. ಕೆಲವು ಮನೆತನಗಳ ಸಂಪ್ರದಾಯದಲ್ಲಿ ನದಿ ಮತ್ತು ಸಮುದ್ರ ತೀರದಲ್ಲಿ ವಾಸಿಸುವ ಜನರು ಪ್ರತಿದಿವಸ ಅದೇ ನೀರಿನಲ್ಲಿ ಸ್ನಾನ ಮಾಡಿ ಅಲ್ಲಿ ಸಿಗುವ ಮರಳಿನಲ್ಲಿ ಒಂದು ಲಿಂಗವನ್ನು ರಚಿಸಿ ಪೂಜಿಸಿ ಮತ್ತೆ ಅದನ್ನು ನೀರಿನಲ್ಲಿ ಅಂದೇ ವಿಸರ್ಜಿಸಿ ಮನೆಗೆ ಬರುವುದೂ ಉಂಟು. ಇದನ್ನು ವಿದ್ಯಾನಿವಾಸ್‌ ಮಿಶ್ರಾ ಒಂದು ಕಡೆ ಬರೆಯುತ್ತಾರೆ. ಮನುಷ್ಯ ಕಟ್ಟಿರುವ ಲಿಂಗಗಳಲ್ಲದೆ ಅನೇಕ ಕಡೆಗಳಲ್ಲಿ ಉದ್ಭವ ಲಿಂಗಗಳು ಸಿಗುತ್ತವೆ.
‘ದೇವಸನ್ನಿಧಿ’ ಅಂಕಣದಲ್ಲಿ ಶಿವನ ಹಲವು ರೂಪ, ರೂಪಕಗಳ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಕಳೆದುಕೊಂಡದ್ದಕ್ಕಿಂತ ಪಡೆದುಕೊಂಡದ್ದರ ತೂಕವೇ ಹೆಚ್ಚು…

ನನ್ನ ಉದ್ದ ಕೂದಲನ್ನು ಮೂರು ನಾಲ್ಕುದಿಕ್ಕಿನಲ್ಲಿ ಇಳಿಬಿಟ್ಟು ಒಂದೊಂದೇ ಭಾಗವನ್ನು ತಿಕ್ಕಿ ತಿಕ್ಕಿ ಚಂದ ಮಾಡಿ ಸ್ನಾನ ಮಾಡಿಸಿದ ಕೂದಲು ಒಣಗಿದ ಮೇಲೆ ಹಗುಹಗುರಾಗಿ ಇಮ್ಮಡಿಸುತ್ತಿತ್ತು, ಕೆಲವೊಮ್ಮೆ ಈ ಸ್ನಾನದ ನಂತರ ಊಟ ಮಾಡಿ ಪಪ್ಪನ ಕೈಮೇಲೆ ಕಥೆ ಕೇಳುತ್ತ ಮಲಗಿದರೆ ಏಳುತ್ತಿದ್ದುದು ಸಂಜೆ ಆರಕ್ಕೆ. ಅದೊಂದು ದಿನ ಮಧ್ಯಾಹ್ನ ಮಲಗಲು, ನಮಗೆ ಅವಕಾಶ ಇತ್ತಾದರೂ, ನಾವು ತಪ್ಪಿಸಿಕೊಳ್ಳುವ ಎಲ್ಲ ಉಪಾಯ ಮಾಡುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ