Advertisement

Tag: ಕೆಂಡಸಂಪಿಗೆ

ಹೆಸರಿಲ್ಲದ ಬಂಧಗಳ ಬಾಹುಗಳಲ್ಲಿ…

ಕೆಲವು ಕೆಟ್ಟ ಸನ್ನಿವೇಶಗಳಲ್ಲಿ ಈ ಪ್ರಪಂಚವೇ ನಮ್ಮ ವಿರುದ್ಧ ನಿಂತಿದೆಯೇನೋ ಎನ್ನಿಸುವ ಹೊತ್ತಿನಲ್ಲಿ ಇಂತಹ ಹಚ್ಚನೆಯ ಹಿತವನ್ನು ಸವರಿದ ಸಂದರ್ಭಗಳನ್ನು ಮೆಲುಕು ಹಾಕಬೇಕು. ಬಹುಶಃ ಈ ಪ್ರಪಂಚ ನಡೆಯುತ್ತಿರುವುದೇ ಇಂತಹ ಅಜ್ಞಾತ ಕೈಗಳ ಅಭಯದಿಂದ. ಪ್ರತಿದಿನವೂ ಸಿಗುವ ಅವಕಾಶ ಇರುವ, ಸಂಬಂಧಗಳಿಂದ ಅಂಟಿಕೊಂಡ, ಸ್ನೇಹ-ವ್ಯವಹಾರ-ವಿಶ್ವಾಸ- ಪರಿಚಯದ ಮುಸುಕು ಹೊದ್ದ ದಿನನಿತ್ಯದ ಕೊಡು-ಕೊಳ್ಳುವಿಕೆಗೆ ಒಂದು ತೂಕವಾದರೆ, ಮತ್ತೊಮ್ಮೆ ಸಿಗುವ ಸಾಧ್ಯತೆಯೇ ಕ್ಷೀಣವಾಗಿರುವ ಅಪ್ಪಟ ಮನುಷ್ಯಸಂಬಂಧವಾಗಿ ಎದುರಾಗುವ ಉಪಕಾರಗಳದ್ದು ಮತ್ತೊಂದು ವಜನು.

Read More

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ರಾಜರ ಸ್ವಭಾವ, ರಾಜ್ಯವಿಸ್ತಾರದ ಪ್ರೇರಣೆ

ಪ್ರಾಚೀನ ಭಾರತದ ಪ್ರಸಿದ್ಧ ರಾಜರು ಮತ್ತು ರಾಜವಂಶಗಳನ್ನು ಪಟ್ಟಿ ಮಾಡಿ ಅರ್ಥೈಸಿಕೊಳ್ಳುವುದು ಒಂದು ಸವಾಲೇ ಸರಿ. ಒಂದೊಂದು ಕಾಲದಲ್ಲಿ ಒಂದೊಂದು ರೀತಿಯ ಸವಾಲುಗಳನ್ನು ಎದುರಿಸುತ್ತ, ಪ್ರಜೆಗಳಿಗೆ ಸುವ್ಯವಸ್ಥೆಯನ್ನುಕಲ್ಪಿಸಿದ ಕತೆಗಳು ಸಾವಿರಾರು. ಈ ರಾಜವಂಶಗಳನ್ನು ಅರಿಯುವುದಕ್ಕಾಗಿ  ಆ ನಿಟ್ಟಿನಲ್ಲಿ ನಾನು ಮಾಡಿಕೊಂಡ ಒಂದು ಪಟ್ಟಿಯನ್ನು ಇಲ್ಲಿ ಕೊಟ್ಟಿರುವೆ. ಅದರ ಪ್ರಕಾರ, ವಿವರಗಳನ್ನು ಕೊಡುತ್ತ ಹೋಗುತ್ತಿದ್ದೇನೆ.  ವೈವಿಧ್ಯತೆಯ ಮಹಾಸಾಗರದತ್ತ ಹರಿದು ಬಂದ ನದಿಗಳೆಷ್ಟೋ, ನದಿಗಳು ನಡೆದು ಬಂದ ದಿಕ್ಕುಗಳೆಷ್ಟೋ.
ಕೆ.ವಿ.ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಬರಹ ಇಲ್ಲಿದೆ.

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ