Advertisement

Tag: ಕೆಂಡಸಂಪಿಗೆ

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ʻಲಿಟಲ್ ಮಿಸ್‌ ಸನ್‌ಶೈನ್‌ʼ: ಕನಸು ವಾಸ್ತವಗಳ ಜುಗಲ್ ಬಂದಿ

ಮನೆಯಲ್ಲಿ ಉಳಿದವರ ಆಲೋಚನೆ ಬೇರೆಯ ರೀತಿ. ಕನಸುಗಳನ್ನೇ ನೇಯುವ ಅವರಿಗೆ ಮನೆಯ ಪುಟಾಣಿಯೂ ಕನಸು ಕಾಣುತ್ತಿರುವುದು ವಿಶೇಷವೆನಿಸುತ್ತದೆ. ಜೊತೆಗೆ ತಮ್ಮ ಕನಸಿನ ಜಂಜಾಟದಿಂದ ಕೊಂಚ ತಪ್ಪಿಸಿಕೊಳ್ಳಲು ಹೊರದಾರಿಯೊಂದು ಸಿಕ್ಕಿತೇನೋ ಎನ್ನುವ ಕಾರಣದಿಂದ ಅವಳ ಕನಸನ್ನು ಬೆಂಬಲಿಸುತ್ತಾರೆ. ಮುಖ್ಯವಾಗಿ ಅವಳ ತಂದೆ ರಿಚರ್ಡ್‌. ಅಪ್ಪನಿಂದ ಮಿಸ್‌ ಲಿಟಲ್‌ ಸನ್‌ ಶೈನ್‌ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಒಪ್ಪಿಗೆ ಸಿಕ್ಕಿದ್ದರಿಂದಲೇ ನೆಲದಿಂದ ನೆಗೆದು ಹಾರಾಡುವಂತಾಗುತ್ತದೆ ಆಲಿವ್‌ಗೆ.

Read More

ಗುರುದತ್ ಅಮೃತಾಪುರ ಬರೆವ ಹೊಸ ಸರಣಿ ಇಂದು ಆರಂಭ

ಹೊಸ ಊರಿಗೆ ಪ್ರವಾಸ ಹೋಗುವ ಖುಷಿ ಇಮ್ಮಡಿಯಾಗುವುದು ಆ ಸ್ಥಳದ ಪೂರ್ವಾಪರವನ್ನು ತಿಳಿದಾಗ. ಗುರುದತ್ ಅಮೃತಾಪುರ ಅವರು ಪ್ರವಾಸವನ್ನು ಇಷ್ಟಪಡುವವರು. ಜೊತೆಗೆ ಆ ಜಾಗಗಳ  ಇತಿಹಾಸವನ್ನೂ ಅರಿಯುವ ಕುತೂಹಲ  ಹೊಂದಿದವರು. ಯುರೋಪ್ ಖಂಡದ ಈಶಾನ್ಯ ಭಾಗದಲ್ಲಿರುವ ಒಂದು ಪುಟ್ಟ ರಾಷ್ಟ್ರ. ಭಾರತದಂತೆಯೇ ಅಹಿಂಸಾತ್ಮಕ ಹೋರಾಟದ ಹಾದಿಯನ್ನು ಹಿಡಿದ ದೇಶವದು. ಎಲೆಮರೆಯ ಕಾಯಿ ಎಸ್ಟೋನಿಯಾದ ರಾಜಧಾನಿ ತಾಲಿನ್ ಕುರಿತ ಬರಹದೊಂದಿಗೆ ತಮ್ಮ ಸರಣಿಯನ್ನು ಅವರು ಆರಂಭಿಸಿದ್ದಾರೆ.

Read More

’ಇಂಗ್ಲಿಷ್ ಸರ್ ಎಷ್ಟು ಹ್ಯಾಂಡ್‌ಸಮ್ ಆಗಿದಾರೆ ನೋಡೆ!’

ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯಲ್ಲಿ ಎಸ್ತರ್ ಅವರು ತಮ್ಮ ಬದುಕಿನ  ಏಳುಬೀಳುಗಳನ್ನು ಬಹಳ ನಿರ್ಲಿಪ್ತವಾಗಿ ಬರೆದಿದ್ದಾರೆ. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಪುಸ್ತಕದಲ್ಲಿ ‘ತಾವು ಕೂಡ  ಎಲ್ಲರಂತೆ ಒಬ್ಬ ಗೃಹಿಣಿ’ ಎಂದು ಹೇಳಿಕಂಡರೂ, ಅವರು ಸಾಮಾಜಿಕವಾಗಿಯೂ ಅನೇಕ ಸವಾಲುಗಳನ್ನು ಎದುರಿಸಿದವರು. ಸಾಂಸಾರಿಕವಾಗಿಯೂ ಸಂದಿಗ್ಧ ಸನ್ನಿವೇಶಗಳನ್ನು ದಾಟಿ ಬಂದವರು. ನವಿರು ನಿರೂಪಣೆಯಲ್ಲಿ ಮೂಡಿ ಬಂದ ಈ ಕೃತಿಯ ಕೆಲವು ಪುಟಗಳು ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿವೆ. ಮೊದಲ ಅಧ್ಯಾಯ ಇಲ್ಲಿದೆ. 

Read More

‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಯೋಗೀಂದ್ರ ಮರವಂತೆ ಸರಣಿ ಶುರು

ಇಂದಿನ ಲಂಡನ್ನಿನ ವೈಶಿಷ್ಟ್ಯವನ್ನು ವಲಸಿಗರ ಕಣ್ಣಲ್ಲಿ ಸರಳವಾಗಿ ವ್ಯಾಖ್ಯಾನಿಸುವುದಾದರೆ, ಬ್ರಿಟಿಷರಲ್ಲದ ಬಿಳಿಯರಲ್ಲದ ಜನರು ಅತ್ಯಂತ ವೇಗವಾಗಿ,  ಹೆಚ್ಚೇನೂ ಅಡೆತಡೆ ಇಲ್ಲದೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಸ್ವೀಕೃತರಾಗುವ ತಾಣ  ಎನ್ನಬಹುದು.  ಹೀಗೆ ಲಂಡನ್ ನಗರದ ಆದಿಪುರಾಣದೊಂದಿಗೆ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಎಂಬ ಹೊಸ ಸರಣಿಯನ್ನು ಆರಂಭಿಸಿದ್ದಾರೆ ಲೇಖಕ ಯೋಗೀಂದ್ರ ಮರವಂತೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ