Advertisement

Tag: ಕೆಂಡಸಂಪಿಗೆ

ನವೀನ ಗಣಪತಿ ಬರೆದ ಈ ಭಾನುವಾರದ ಕತೆ

ಮಧ್ಯಾಹ್ನ ಒಂದು ಘಂಟೆಗೇ ತಾನು ಮನೆಯಲ್ಲಿ ಮಾಡಬಹುದಾದ ಎಲ್ಲ ಕೆಲಸಗಳೂ ಮುಗಿದು ಮತ್ತೆಲ್ಲ ಮನಸ್ಸಿಗೆ ಕಿರಿಕಿರಿಯಾಗ ಹತ್ತಿತ್ತು. ನಾಲ್ಕು ದಿನ ದಾವಣಗೆರೆಗೆ ಹೋಗಿ ಮಗಳೊಟ್ಟಿಗೆ ಇದ್ದು ಬರೋಣವೆನಿಸುತ್ತಿತ್ತು. ಆದರೆ ಶಂಭಣ್ಣನನ್ನು ಬಿಟ್ಟು ಎಲ್ಲಿಯೂ ಹೋಗುವಂತಿರಲಿಲ್ಲ. ಮಗಳೂ ವಾರ ವಾರ ಬರುವವಳಲ್ಲ. ಅವಳಿಗೆ ಭಾನುವಾರ ರಜಾದಿನಗಳು ಇದ್ದಾಗಲೇ ಜೋರು ವ್ಯಾಪಾರ. ಇನ್ನು ಆಚೀಚೆ ಎರಡು ಹೆಂಗಸರೊಟ್ಟಿಗೆ ಹರಟೆ – ಮಾತು – ಒಡನಾಟ ಮಾಡೋಣವೆಂದರೆ, ಒಬ್ಬರ ವ್ಯವಹಾರವಾದರೂ ಚೊಕ್ಕಟವಾಗಿದೆಯೇ?
ನವೀನ ಗಣಪತಿ ಬರೆದ ಈ ಭಾನುವಾರದ ಕತೆ “ಧನಲಕ್ಷ್ಮಿ”

Read More

ಆಸ್ಟ್ರೇಲಿಯಾದ ಪ್ರವಾಸಿಗರ ಕನಸು-ಕನವರಿಕೆಗಳು

 ಪ್ರವಾಸಿಗರಿಗೆ, ಕ್ಯಾಂಪಿಗರಿಗೆ, ಹೇಳಿ ಮಾಡಿಸಿದ ಚಳಿಗಾಲವಿದು. ಕಳೆದ ಕೆಲ ವರ್ಷಗಳಿಗಿಂತಲೂ ಈ ಬಾರಿ ಅಧಿಕ ಚಳಿಯಿದೆ. ಹಾಗಾಗಿ ಸಮುದ್ರತಟದಲ್ಲಿರಲು ಜನ ಹಾತೊರೆಯುತ್ತಾರೆ. ಅದು ನಿಜವೆಂಬಂತೆ ರಾಣಿರಾಜ್ಯದ ದಕ್ಷಿಣ-ಪೂರ್ವ ಭಾಗದ ಪ್ರತಿಯೊಂದು ನಗರಪಾಲಿಕೆಯೂ ತಮ್ಮಲ್ಲಿನ ಪ್ರವಾಸಿ ಸ್ಥಳಗಳನ್ನು ಪ್ರಚಾರ ಪಡಿಸಲು ಬಲು ಆಕರ್ಷಕವಾದ ಜಾಹಿರಾತುಗಳನ್ನು ಹಾಕುತ್ತಿದ್ದಾರೆ. ಶಾಲೆಗಳಿಗೆ ಟರ್ಮ್ ೨ ನಂತರದ ಎರಡು ವಾರಗಳ ರಜೆ ಆರಂಭವಾಗಿದೆ.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಪತ್ರಿಕಾ ಸ್ವಾತಂತ್ರ್ಯದ ಸುತ್ತಮುತ್ತ ʻದ ಪೋಸ್ಟ್‌ʼ

ಅಮೆರಿಕ ರಕ್ಷಣಾ ವಿಭಾಗದ ಪೆಂಟಗನ್‌ ಪೇಪರುಗಳಿಗೆ ಸಂಬಂಧಿಸಿದಂತೆ ನ್ಯೂಯಾರ್ಕ್ ಟೈಮ್ಸ್‌ ಪತ್ರಿಕೆಗೆ ಒದಗಿದ ಅವಸ್ಥೆಯನ್ನು ತಿಳಿದಿದ್ದರೂ ಬೆನ್ ಬ್ರಾಡ್ಲಿ ತಾವೇಕೆ ಆ ಮಾಹಿತಿಯನ್ನು ಪ್ರಸಾರ ಮಾಡಕೂಡದು ಎಂದು ಯೋಚಿಸುತ್ತಾನೆ. ಅದು ಹೊಳೆದ ಕೂಡಲೆ ಡೇನಿಯಲ್‌ ಎಲ್‌ಬರ್ಗ್‌ ನನ್ನು ಸಂಪರ್ಕಿಸಿ ಉದ್ದೇಶಿತ ಮಾಹಿತಿಯನ್ನು ಪಡೆಯಲು ಸಫಲನಾಗುತ್ತಾನೆ. ನ್ಯೂಯಾರ್ಕ್‌ ಟೈಮ್ಸ್‌ನಿಂದ ಯುದ್ಧದ ಸತ್ಯವಾದ ಮಾಹಿತಿ ಸಾರ್ವಜನಿಕರಿಗೆ ತಿಳಿಯಲಾಗದ ಪರಿಸ್ಥಿಗೆ ಎಲ್‌ಬರ್ಗ್ ನೊಂದುಕೊಂಡಿರುತ್ತಾನೆ.
ಎ.ಎನ್. ಪ್ರಸನ್ನ ಬರಹ ಇಲ್ಲಿದೆ.

Read More

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ರಾಜಕೀಯ ಹಾದಿಯಲ್ಲಿ ಕಂಡ ಪ್ರಾಮಾಣಿಕ ನುಡಿಗಳು

ಬಿ.ಎ. ಮೊಹಿದೀನ್ ಅವರು ಜೀವನದಲ್ಲಿ ಇಟ್ಟುಕೊಂಡ ಮೌಲ್ಯಗಳು ಅನುಕರಣೀಯವಾದುದು. ತಾನು ಚುನಾವಣೆಗೆ ನಿಂತಾಗ ಮಸೀದಿ ದೇವಾಲಯ ಚರ್ಚುಗಳಿಗೆ ಮತಕೇಳಲು ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಅದನ್ನು ಹಟಬಿಡದೇ ಪಾಲಿಸಿದವರು ಅವರು. ತಾವು ಹುಟ್ಟಿಬಂದ ಸಮುದಾಯದ ಏಳಿಗೆಗಾಗಿ ಮೊಹಿದೀನ್ ಅವರಿಗಿದ್ದ ಕಾಳಜಿ ಪ್ರಶ್ನಾತೀತವಾದುದು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ