Advertisement

Tag: ಕೆಂಡಸಂಪಿಗೆ

ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ..: ವಿನಾಯಕ ಅರಳಸುರಳಿ ಅಂಕಣ

ಕೆಲವೊಮ್ಮೆ ಅಚಾನಕ್ಕಾಗಿ ಬೆಂಗಳೂರಿನ ಮೇಲೆ ಪ್ರೀತಿಯುಕ್ಕುತ್ತದೆ. ಈ ಶಹರ ನಮಗೆ ಬದಕು ಕೊಟ್ಟಿದೆ, ಇದಿನ್ನು ನಮ್ಮ ಊರು, ನಾನಿನ್ನು ಇಲ್ಲಿಯವನು ಎಂದು ನಂಬಲು ಪ್ರಯತ್ನಿಸುತ್ತೇವೆ.‌ ಆಗಲೇ ನಾವು ಪ್ರತಿದಿನ ವ್ಯವಹರಿಸುವ ಅಂಗಡಿಯವನು ಇದ್ದಕ್ಕಿದ್ದಂತೆ ಹತ್ತು ರೂಪಾಯಿಗಾಗಿ ಬಿರುಮಾತಾಡುತ್ತಾನೆ. ವರ್ಷದಿಂದ ಪಕ್ಕದ ಮನೆಯಲ್ಲೇ ವಾಸವಿರುವ ಹೆಂಗಸು ಯಕಶ್ಚಿತ್ ನ್ಯಾಲೆಯ ಮೇಲಿನ ಬಟ್ಟೆ ತೆಗೆದಿಲ್ಲವೆಂಬ ಕಾರಣಕ್ಕೆ ಜಗಳಕ್ಕೆ ನಿಲ್ಲುತ್ತಾಳೆ. ಹೆಗಲ ಮೇಲೆ ಕೈ ಹಾಕಿಕೊಂಡು ಜೊತೆಗೇ ಕೆಲಸ ಮಾಡುತ್ತಿದ್ದ ಸಹೋದ್ಯೋಗಿ ಮಿತ್ರ ಆಫೀಸು ಬದಲಿಸಿದ ಮರುಕ್ಷಣ ಕರೆ ಸ್ವೀಕರಿಸದೇ, ಮೆಸೇಜೂ ಮಾಡದೇ ಮಾಯವಾಗಿಬಿಡುತ್ತಾನೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಬೇಟೆಗಾರ ಕೀಟವೇ ಬೇಟೆಯಾದಾಗ!: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

ಈ ಕುತೂಹಲಕಾರಿ ಮರ್ಡರ್ ಮಿಸ್ಟರಿ ಕೇಳುತ್ತಾ, ವಿಭಾಗೆ ಬಸ್ ಹೊರಟದ್ದೇ ತಿಳಿದಿರಲಿಲ್ಲ. ಅಕ್ಕ ನೀರು ಕುಡಿಯೋಕೆ ಅಂತ ಮಾತು ನಿಲ್ಲಿಸಿದಾಗ, ಕಿಟಕಿಯಾಚೆ ನೋಡಿ, “ಓಹ್! ಆಗ್ಲೆ ಇಷ್ಟು ಮುಂದೆ ಬಂದುಬಿಟ್ವಾ? ಸರಿ, ನೀನು ಮುಂದುವರೆಸು ಕಾವ್ಯಕ್ಕಾ” ಎಂದಳು. “ಹೂಂ, ನಿಮ್ ಭಾವ ಮಾತ್ರ ಅಲ್ಲ, ನಾನೂ ನೋಡಿದೀನಿ ಈ ‘ಕೀಟಗಳನ್ನ ತಿನ್ನೋ ಗಿಡಗಳನ್ನ’ ಗೊತ್ತಾ?” ಎಂದಳು ಕಾವ್ಯಾ ಕೀಟಲೆ ಮಾಡುತ್ತಾ. ಆಗ ವಿಭಾ ನಗುತ್ತಾ, “ಅಯ್ಯೋ! ನೀನೂ ಅಂದ್ರೇನು ಸುಮ್ನೇನಾ ಅಕ್ಕಾ? ನೀನೇನು ನೋಡಿದ್ದು? ಎಲ್ಲಿ ನೋಡ್ದೆ? ಹೇಳ್ಬೇಕು ತಾನೆ ಮತ್ತೆ” ಎಂದು ಅಕ್ಕನಿಗೆ ಪೂಸಿ ಹೊಡೆದಳು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ಯಲ್ಲಿ ನಾಲ್ಕನೆಯ ಕತೆ

Read More

ಕನ್ನಡ ಅಧ್ಯಾಪಕರ ದಾರಿದೀಪಗಳು-`ಅನಾಜಿ` ಒಂದು ಸ್ಮರಣೆ: ಎಲ್.ಜಿ.ಮೀರಾ ಅಂಕಣ

ಅನಾಜಿಯವರು “ಅಲ್ಲಮ್ಮ, ಆಧುನಿಕ ಕನ್ನಡ ಕಥನ ಸಾಹಿತ್ಯ ಅಂದ್ರೆ ನವೋದಯದಿಂದ ಈ ಕಾಲದವರೆಗೆ ಸುದೀರ್ಘವಾಗಿದೆ. ನೀವು ಇಷ್ಟು ದೊಡ್ಡ ವ್ಯಾಪ್ತಿ ಇಟ್ಕೊಂಡ್ರೆ ಎಲ್ಲಿಂದ ಎಲ್ಲೀವರೆಗೆ ಅಂತ ಮಾಡ್ತೀರಿ!? ಆಧುನಿಕ ಕನ್ನಡ ಸಾಹಿತ್ಯದ ಪ್ರತಿ ಘಟ್ಟದಿಂದಲೂ ಕೆಲವು ಪ್ರಾತಿನಿಧಿಕ ಲೇಖಕ-ಲೇಖಕಿಯರನ್ನ ಇಟ್ಕೊಂಡ್ರೆ ಮಾತ್ರ ನೋಡಿ ನೀವು ಈ ಅಧ್ಯಯನಕ್ಕೆ ಸ್ವಲ್ಪಾನಾದ್ರೂ ನ್ಯಾಯ ಒದಗಿಸಕ್ಕೆ ಆಗೋದು” ಅಂದರು. ನನಗೆ `ಅರೆ, ಹೌದಲ್ಲ’ ಅನ್ನಿಸಿತು. ಮುಂದೆ ನಾನು ನನ್ನ ಮಾರ್ಗದರ್ಶಕರ ಹತ್ತಿರ ಈ ಬಗ್ಗೆ ಹೇಳಿದಾಗ ಅವರಿಗೂ ಈ ಮಾತು ಒಪ್ಪಿಗೆಯಾಗಿ, ನಂತರ ಹೀಗೆಯೇ ಘಟ್ಟಗಳ ಅನುಸಾರವಾಗಿ, ಪ್ರಾತಿನಿಧಿಕ ಆಧುನಿಕ ಕನ್ನಡ ಲೇಖಕ ಲೇಖಕಿಯರನ್ನು ಇಟ್ಟುಕೊಂಡು ನಾನು ಪಿ.ಎಚ್.ಡಿ. ಅಧ್ಯಯನವನ್ನು ಮುಂದುವರಿಸಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೆಂಟನೆಯ ಬರಹ

Read More

ನಾನೆಂಬ ‘ನನ್ನ’ನ್ನು ಅಳಿಸುವ ಆಧ್ಯಾತ್ಮಿಕ ಜಗತ್ತು: ಜುಲೇಖಾ ಬೇಗಂ ಜೀವನ ವೃತ್ತಾಂತ

ಕುರ್ಚಿ ಅಡಿಗಳಲ್ಲಿ, ನೆಲ ಮತ್ತು ಚಾಪೆಯ ಸ್ಥಳಗಳನ್ನು ಗುಡಿಸಿ ಸ್ವಚ್ಛಗೊಳಿಸುವುದೆಂದರೆ ಬರೋಬ್ಬರಿ ಎರಡು ಗಂಟೆಗಳ ಕೆಲಸ. ನನ್ನ ಎಳೆ ರಟ್ಟೆಯಲ್ಲಿದ್ದ ಶಕ್ತಿಯೆಲ್ಲವೂ ಸೋರಿ ಹೋದಂತೆ ಅನಿಸುತ್ತಿತ್ತು. ನಟಿ ಫ್ಲೋರಿನಾ ಬಾಯಿಯವರದ್ದೇ ಮೇಲುಸ್ತುವಾರಿ. ‘ಇನ್ನೂ ಆಗಿಲ್ಲವಾ?’ ಎಂದು ಅಧಿಕಾರ ಸಾಧಿಸುವ ಮಾತುಗಳನ್ನೇ ಪ್ರಶ್ನೆಯಾಗಿ ಕೇಳುತ್ತಿದ್ದರು. ಅಂದಹಾಗೆ, ಇದೆಲ್ಲದರ ನಡುವೆ ಅವರ ಸಾಕಿದ ಮಗಳು ದೂರದ ಹಾಸ್ಟೆಲ್‌ನಲ್ಲಿ ಓದುತ್ತಿದ್ದಳು. ರಜೆಗೆಂದು ಬಂದಾಗ ನನ್ನನ್ನು ಕಂಡಳು. ಆಡಲು ಜೊತೆಯಾಗುತ್ತಾಳೆ ಎಂದುಕೊಂಡಿದ್ದಳೋ ಏನೊ, ಅದಕ್ಕಾಗಿ ನನ್ನ ಬರುವಿಕೆಯನ್ನೇ ದೂರದಲ್ಲೇ ನಿಂತು ಕಾಯುತ್ತಿದ್ದಳು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಕಂಡಂಥ ಕನಸುಗಳು… ಮತ್ತೂ…: ಎಚ್. ಗೋಪಾಲಕೃಷ್ಣ ಸರಣಿ

ಈ ಹಿನ್ನೆಲೆಯಲ್ಲಿ ನಾನೂ ಪ್ರಕಾಶಕ ಆದೆ. ಪುಸ್ತಕ ಮಾರಾಟದಲ್ಲಿ, ಗ್ರಂಥಾಲಯಕ್ಕೆ (ರಾಜ್ಯದಲ್ಲಿನ ಗ್ರಂಥಾಲಯಗಳಿಗೆ ಅವರು ಕೇಳಿದಾಗ ಎರಡು ಮೂರು ಪ್ರತಿ ರವಾನಿಸಬೇಕು)ಕೊಡುವಲ್ಲಿ ಮತ್ತು ಕೆಲವು ಸಲ ಲಂಚವನ್ನು ಕೊಡಬೇಕಾದ ಸಂದರ್ಭ ಸಹ ಹುಟ್ಟುತ್ತದೆ… ಈ ಸಮಸ್ಯೆ ಆಳಕ್ಕೆ ಇಳಿದ ಹಾಗೆ ಇದು ನನ್ನಂತಹ ಸಭ್ಯ, ಸಜ್ಜನನಿಗೆ ಸರಿಹೋಗದ ವ್ಯಾಪಾರ ಅನಿಸಿತಾ? ಇನ್ನುಮೇಲೆ ಪ್ರಕಾಶಕ ಎಂದು ಕರೆಸಿಕೊಳ್ಳಬಾರದು ಎಂದು ನಿರ್ಧರಿಸಿದೆ. ಹೀಗೆ ಒಬ್ಬ ಪ್ರಕಾಶಕ ಆಗಿ ಪೆಂಗ್ವಿನ್ ಅಂತಹ ದೊಡ್ಡ ಸಂಸ್ಥೆಗೆ ಪೈಪೋಟಿ ಕೊಡುವ ನನ್ನಾಸೆ ಅಂದೇ ಕಮರಿ ಹೋಯಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ