Advertisement

Tag: ಕೆಂಡಸಂಪಿಗೆ

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

Read More

ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ

ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಬಿಸಿಲಿನ ತುಣುಕುಗಳಿಗೆ ಒಂದ್ ಪತ್ರ ಬರೆದು…..: ದೇವರಾಜ್‌ ಹುಣಸಿಕಟ್ಟಿ ಬರಹ

ಈ ಲೋಕದ ಹಂಗುಗಳು, ದರ್ದುಗಳು ಇರ್ಶೆಯನ್ನೇ ಹಾಸಿ ಹೊದ್ದು ಮಲಗಿವೆ. ಪ್ರೇಮಿಗಳ ಲೆಕ್ಕದಲ್ಲಂತು ಥೇಟ್ ರಾಕ್ಷಸಿ ಸೊರೂಪ… ಇಡೀ ಇತಿಹಾಸದುದ್ದಕ್ಕೂ ಇದು ದಿಟವಾಗಿದೆ… ಇಲ್ಲಾ ಅಂದ್ರೆ ರೋಮಿಯೋ ಜೂಲಿಯಟ್, ಮಮತಾಜ್ ಷಹ ಜಹಾನ್ ಇನ್ನೂ ಅದೆಷ್ಟೋ ಕಥನಗಳು ರೂಪ ಪಡೆದಿರುತ್ತಿರಲಿಲ್ಲ…
ಅಮೃತಾ ಪ್ರೀತಮ್ ಒಂದಷ್ಟು ಕವಿತೆಗಳನ್ನು “ಬಿಸಿಲಿನ ಅದೆಷ್ಟೋ ತುಣುಕುಗಳು” ಎಂಬ ಸಂಕಲನದಡಿ ರಶ್ಮಿ ಎಸ್ ಕನ್ನಡಕ್ಕೆ ಅನುವಾದಿಸಿದ್ದು, ಈ ಸಂಕಲನದ ಕುರಿತು ದೇವರಾಜ್ ಹುಣಸಿಕಟ್ಟಿ ಬರಹ

Read More

“ಅಡಿಕೆ” ಎಂಬ ಮಲೆನಾಡಿನ ಜೀವನಾಡಿ: ಭವ್ಯ ಟಿ.ಎಸ್. ಸರಣಿ

ಸಂಜೆ ಆರಾಗುತ್ತಿದ್ದಂತೆ ಮನೆ ಎದುರಿನ ಅಥವಾ ಹಿಂದಿನ ಅಡಿಕೆ ಚಪ್ಪರದ ಕೆಳಗೆ ಅಡಿಕೆ ಸುಲಿಯುವ ಹೆಂಗಳೆಯರು ಮೇಳೈಸುತ್ತಿದ್ದರು. ಕಿಲಕಿಲ ನಗು, ಮಾತು, ಹರಟೆ, ಹಾಸ್ಯ, ವಿನೋದಗಳ ನಡುವೆ ಮೆಟ್ಟುಗತ್ತಿಯ ಮೇಲೆ ಕುಳಿತು ತಮ್ಮ ಚುರುಕು ಕೈಗಳಿಂದ ಅಡಿಕೆಗಳನ್ನು ಹೆಕ್ಕಿಕೊಂಡು ಕತ್ತಿಯಲ್ಲಿಟ್ಟು ಸಿಪ್ಪೆ ತೆಗೆದು, ಅಡಿಕೆಯನ್ನು ಹೋಳು ಮಾಡಿ ಕತ್ತರಿಸಿ ಬುಟ್ಟಿಗೆ ತುಂಬುತ್ತಾರೆ. ಮಧ್ಯರಾತ್ರಿಯವರೆಗೂ ಈ ಕೆಲಸ ನಡೆಯುವುದರಿಂದ ಊರಿನ ಪ್ರಚಲಿತ ವಿದ್ಯಮಾನಗಳು, ಸದ್ಯದಲ್ಲೇ ನಡೆಯಲಿರುವ ಮದುವೆಗಳು, ನಡೆದ ಜಗಳಗಳು, ಸಾವು-ನೋವು, ಕಷ್ಟಸುಖಗಳು ಅಲ್ಪಸ್ವಲ್ಪ ಬಣ್ಣ ಹಚ್ಚಿಕೊಂಡು, ಅತಿರಂಜಿತವಾಗಿ ಇಲ್ಲಿ ಚರ್ಚಿತವಾಗುತ್ತವೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ