Advertisement

Tag: ಕೆಂಡಸಂಪಿಗೆ

ಕತೆಗಳ ಬೆನ್ನತ್ತಿ….: ಎಚ್.‌ ಗೋಪಾಲಕೃಷ್ಣ ಸರಣಿ

ಕವನಗಳು ನನ್ನ ಮನೆ ಅಡ್ರೆಸಿಗೆ ಬಂದು ಸೇರುವ ಹಾಗೆ ಯೋಜಿಸಿದ್ದೆವು. ಕವನಗಳ ಮಹಾಪೂರ ಹೇಗೆ ಬಂದವು ಅಂದರೆ ಪ್ರಪಂಚದಲ್ಲಿ ಪ್ರತಿ ಮೂರನೇ ಮನುಷ್ಯ ಒಂದು ಕವಿ ಅನಿಸುವ ಮಟ್ಟಿಗೆ! ಅದರ ಆಯ್ಕೆ, ಅವುಗಳಲ್ಲಿ ಯಾವುದಕ್ಕೆ ಬಹುಮಾನ ಮೊದಲಾದವುಗಳನ್ನು ನಾವು ನಾವೇ ನಿರ್ಧಾರ ಮಾಡುತ್ತಿದ್ದೆವು. ಕವನ ಸಂಕಲನದ ಹಸ್ತಪ್ರತಿ ಹಿಡಿದು ಬೆಂಗಳೂರಿನ ಅರಳೆ ಪೇಟೆಯ ಹಲವು ಮುದ್ರಣಾಲಯ ಮತ್ತು ಪೇಪರ್ ಮಾರಾಟದ ಅಂಗಡಿಗಳ ಸರ್ವೇ ಮಾಡಿದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬದಲಾಗಿದ್ದು ಕ್ಯಾಲೆಂಡರ್ ಮಾತ್ರವೇನಾ?:  ವಿನಾಯಕ ಅರಳಸುರಳಿ ಅಂಕಣ

ಫಸ್ಟ್ ಬರುವ ನಿರೀಕ್ಷೆಯಲ್ಲಿ ಶಾಲೆ-ಕಾಲೇಜುಗಳೇ ಮುಗಿದವು. ಏಳು, ಎಂಟಕ್ಕೆ ಏಳೇಳುತ್ತ ಹಗಲುಗಳೇ ಸವೆದವು. ಕೊನೆಯ ಬೆಂಚಿನ ಹುಡುಗಿಯ ಬದುಕಿನಲ್ಲಿ ಹೊಸ ವರ್ಷ, ಗಂಡ, ಮಕ್ಕಳೂ ಬಂದಿದ್ದಾಯಿತು. ಬೈಸಿಕೊಳ್ಳುತ್ತಲೇ ಅಮ್ಮ ಎದ್ದು ಹೋದಳು. ಕೆಲಸ ಮಾಡಿಸಿಕೊಳ್ಳದೆಯೇ ಅಪ್ಪ ಹೊರಟು ಹೋದ. ಬಂಕ್ ಮಾಡುತ್ತಿರುವಾಗಲೇ ಕಾಲೇಜಿನ ಕೊನೆಯ ದಿನ ತಲುಪಿದೆವು. ಹೊಸ ಕ್ಯಾಲೆಂಡರಿನ ಮೊದಲ ಪುಟ ತಿರುವುವ ಮೊದಲೇ ಗಂಡ/ಹೆಂಡತಿಯ ಜೊತೆ ಆಗಲೇ ಮೂರು ಬಾರಿ ಜಗಳವಾಡಿಯಾಗಿದೆ. ಅದೇ ಸೋಮಾರಿತನ, ಅದೇ ಅಶ್ರದ್ಧೆ, ಅದೇ ಸುಮ್ಮನೆ ವ್ಯಯವಾಗುವ ಮುನ್ನೂರರವತೈದು ದಿನಗಳ ಮತ್ತೊಂದು ಆವರಣಕ್ಕೆ ‘ಹೊಸ ವರ್ಷ’ ಎನ್ನುವ ಹೆಸರು ಕೊಟ್ಟು ಕುಣಿಯುತ್ತ, ಕುಡಿಯುತ್ತ, ಕೇಕೆ ಹಾಕುತ್ತ ಪ್ರವೇಶಿಸಿದೆವು!
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಹೊಸ, ಹಳೇ ಕಥೆಗಳಾಗುವ ನಾವು: ವಿನತೆ ಶರ್ಮ ಅಂಕಣ

ಹೊಸ ವರ್ಷದ ಮೊದಲ ದಿನದಂದು ಸಿಡ್ನಿ ಆಕಾಶದಲ್ಲಿ ಮೋಡಗಳು, ಸಣ್ಣನೆ ಮಳೆ, ಚಳಿ. ಸಮುದ್ರ ಭುಸುಗುಡುತ್ತಿತ್ತು. ಅಲೆಗಳ ರಭಸವನ್ನು ನೋಡಿದಾಗ ಮನುಷ್ಯರು ಮಾಡಿಕೊಂಡಿದ್ದ ಹಿಂದಿನ ದಿನದ ಪಾರ್ಟಿಯ ಗಮ್ಮತ್ತು ಅವಕ್ಕೆ ಇಷ್ಟವಾಗಲಿಲ್ಲವೇನೋ ಎಂಬಂತಿತ್ತು. ಅಲೆಗಳ ಹೊರಳಾಟ ಯಾಕೋ ನನ್ನಲ್ಲಿ ದುಃಖ ಉಕ್ಕಿಸಿತ್ತು. ನಗರದ ಪೂರ್ವ ತೀರದಲ್ಲಿರುವ ಸುಂದರ ಸಮುದ್ರತೀರದ ಸುಮಾರು ಮೂವತ್ತಕ್ಕೂ ಹೆಚ್ಚು ಬೀಚ್‌ಗಳನ್ನ ಮುಚ್ಚಿದ್ದರು. ಹೊಸವರ್ಷದ ಆಗಮನವನ್ನು ಅತಿಯಾಗೆ ಆಚರಿಸಲು ಹೋಗಿ ಹಲವಾರು ಕಡೆ ಸಮುದ್ರಕ್ಕಿಳಿದ್ದಿದ್ದ ಜನರು ಆಪತ್ತಿಗೀಡಾಗಿದ್ದು ವರದಿಯಾಗಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಡಾ. ಎಸ್.ವಿ. ನರಸಿಂಹನ್‌ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ

ಸ್ವಭಾವತಃ ಚಲನಾಶಕ್ತಿಯಿಲ್ಲದ ಮರ-ಗಿಡ ಸಸ್ಯಗಳು ತಮ್ಮ ಸಂತಾನೋತ್ಪತ್ತಿಗಾಗಿ ಅವಶ್ಯವಿರುವ ಬೀಜಪ್ರಸರಣ ಕಾರ್ಯಕ್ಕಾಗಿ ಇತರ ಜೀವಿಗಳನ್ನೇ ಅವಲಂಬಿಸುವುದು ಅನಿವಾರ್ಯವಾಗಿದೆ. ಇದಕ್ಕಾಗಿ ವಿವಿಧ ಬಣ್ಣಗಳಿಂದ ಕೂಡಿದ, ರುಚಿಕರವಾದ, ಮತ್ತು ಇವೆಲ್ಲಕಿಂತ ಮಿಗಿಲಾಗಿ ಎಲ್ಲ ಪೌಷ್ಟಿಕ ಅಂಶಗಳಿಂದಲೂ ಕೂಡಿದ ಸುಮಧುರ ಹಣ್ಣುಗಳ ಮೂಲಕ ಆಕರ್ಷಿಸುತ್ತವೆ. ಈ ಕಾರ್ಯದಲ್ಲಿ ಕೂಡ ಉಳಿದ ಜೀವಿಗಳಿಗಿಂತ ಹಕ್ಕಿಗಳ ಪಾತ್ರ ಗಮನೀಯ. ತಿಂದ ಹಣ್ಣಿನ ಬೀಜವನ್ನು ದೂರದೂರದೆಡೆಗಳಲ್ಲಿ ಉಗಿಯುವುದು ಒಂದು ರೀತಿಯಾದರೆ, ತಿಂದ ಹಣ್ಣಿನ ಬೀಜ ಹಕ್ಕಿಯ ಉದರ ಸೇರಿ, ಹಿಕ್ಕೆಯ ಮೂಲಕವೂ ಹರಡಬಲ್ಲದು.
ಡಾ. ಎಸ್.ವಿ. ನರಸಿಂಹನ್‌ ಹೊಸ ಸರಣಿ “ಹಕ್ಕಿಪಕ್ಷಿ ಚಿತ್ರ ಸಂಪುಟ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ

ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ