Advertisement

Tag: ಕೆಂಡಸಂಪಿಗೆ

ಬಲ್ಲಿರೇನು ಕಾಡ ಹಣ್ಣುಗಳ ರುಚಿಯ?: ರೂಪಾ ರವೀಂದ್ರ ಜೋಶಿ ಸರಣಿ

ಎಳೆಯ ಕಾಯಿಗಳು ಬಲಿತು, ಕರ್ರಗೆ ಹೊಳೆಯುವ ಆ ಹಣ್ಣುಗಳು ಕಣ್ಣಿಗೆ ಬಿದ್ದರೆ ಮುಗಿಯಿತು. ಸ್ಪರ್ಧೆಗೆ ಬಿದ್ದವರಂತೇ, ನುಗ್ಗಿ ನುಗ್ಗಿ ಹಣ್ಣುಗಳನ್ನು ಕೊಯ್ದು ಚಪ್ಪರಿಸುತ್ತಿದ್ದೆವು. ಹುಳಿಯ ಜೊತೆಗೆ ಸವಿ ಬೆರೆತ ಆ ಮಧುರ ರುಚಿ ನೆನೆದರೆ, ಈಗಲೂ ಬಾಯಲ್ಲಿ ನೀರೂರುತ್ತದೆ. ಈ ಕವಳಿ ಕಾಯಿ ಕೊಯ್ದರೆ, ಹಾಲಿನಂಥ ಜಿಗುಟು ವಸರುತ್ತದೆ. ಈ ಜಿಗುಟಿನಿಂದ ನಮ್ಮ ಅಂಗಿಯೆಲ್ಲ ಕಲೆಯಾಗಿ, ಮನೆಯಲ್ಲಿ ನಿತ್ಯ ಬೈಗುಳದ ಹೂ ತಲೆಗೇರುತ್ತಿತ್ತು. ಆ ರುಚಿ ಹಣ್ಣಿನ ಮುಂದೆ, ಬೈಗುಳ, ಬಡಿತ ಇವೆಲ್ಲ ಯಾವ ಲೆಕ್ಕದ್ದು ಹೇಳಿ?
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಐದನೆಯ ಕಂತು

Read More

‘ಗೌರ್ಮೆಂಟ್ ಬ್ರಾಹ್ಮಣ’ನೆಂಬ ಪುಸ್ತಕವೂ ಮತ್ತು ನಾನು ರೂಪುಗೊಂಡ ಬಗೆಯೂ’: ಪ್ರಶಾಂತ್‌ ಬೆಳತೂರು ಬರಹ

ಚೇಳಿನಿಂದಲೇ ಹುಟ್ಟಿದ ಚೇಳಿನಿಂದಲೇ ಸತ್ತ ಎನ್ನುವ ತನ್ನಜ್ಜಿಯ ಮಾತುಗಳೊಂದಿಗೆ ತನ್ನ ತಂದೆಯನ್ನು ನೆನಪಿಸಿಕೊಳ್ಳುವ, ಪಂದ್ರಾ ಆಗಸ್ಟ್‌ನ ಸ್ವಾತಂತ್ರ್ಯ ನಿಜಕ್ಕೂ ಎಂತಹ ಸ್ವಾತಂತ್ರ್ಯ? ಯಾವ ಬಗೆಯ ಸ್ವಾತಂತ್ರ್ಯ? ಒಂದೇ ಒಂದು ಕೊಡದ ನೀರನ್ನು ಬಾವಿಯಲ್ಲಿ ಮೊಗೆಯಲಾರದೆ ಹೋದ ಕೆಳಗೇರಿಯ ಜನ ಅಂದು ಮೊಗೆಮೊಗೆದು ಸೇದಿದರು, ಮತ್ತೆ ಬಾವಿಗೆ ಸುರವಿದರು, ಮರುದಿನ ಆ ಬಾವಿಗಳಲ್ಲಿ ಇನ್ನಾರು ನೀರು ಮೊಗೆಯಬಾರದಂತೆ ಊರ ಜನರೇ ಶಾಶ್ವತವಾಗಿ ಮುಚ್ಚಿದ್ದರು ಎನ್ನುವಾಗ ಕರುಳು ಹಿಂಡಿದಂತಾಗುತ್ತದೆ.
ಪ್ರೊ. ಅರವಿಂದ ಮಾಲಗತ್ತಿ ಆತ್ಮಕತೆ “ಗೌರ್ಮೆಂಟ್ ಬ್ರಾಹ್ಮಣ”, ಹೇಗೆ ತಮ್ಮ ಬದುಕು ಬದಲಾಯಿಸಿತು ಎನ್ನುವುದರ ಕುರಿತು ಪ್ರಶಾಂತ್‌ ಬೆಳತೂರು ಬರಹ ಇಲ್ಲಿದೆ

Read More

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ