Advertisement

Tag: ಕೆಂಡಸಂಪಿಗೆ

ಕಾಡು, ಪುಸ್ತಕ, ಅಭಿಮಾನ ಹಾಗೂ ಅಂತರ್ಜಾಲ ಸಮುದಾಯಗಳ ಆಹ್ಲಾದಕರ ಲೋಕ: ಎಲ್.ಜಿ.ಮೀರಾ ಅಂಕಣ

ಮನುಷ್ಯ ಎಂಬ ಜೀವಿ ಈ ಭೂಮಿಯ ಮೇಲೆ ವಿಕಾಸಗೊಂಡಾಗಿನಿಂದ ಒಂದಲ್ಲ ಒಂದು ರೀತಿಯ ಸಮುದಾಯಗಳನ್ನು ಕಟ್ಟಿಕೊಂಡು ಬದುಕುತ್ತಿದ್ದಾನೆ. ಎಷ್ಟೇ ಜಗಳ, ಭಿನ್ನಾಭಿಪ್ರಾಯ, ಇರಿಸುಮುರಿಸು, ವೈಯಕ್ತಿಕ ಇಚ್ಛೆಗಳ ಬಲ್ಮೆ ಇದ್ದರೂ ನೆರೆಹೊರೆಯೋ, ವೃತ್ತಿ ಸಮುದಾಯವೋ, ಸ್ನೇಹಿತರ ಬಳಗವೋ, ನೆಂಟರಿಷ್ಟರ ಜೊತೆಗಾರಿಕೆಯೋ, ವಠಾರವೋ, ಅನೇಕ ಮನೆಘಟಕಗಳಿರುವ ಸಮುಚ್ಚಯಗಳೋ(ಅಪಾರ್ಟ್ಮೆಂಟ್)… ಒಟ್ಟಿನಲ್ಲಿ ಮನುಷ್ಯರಿಗೆ ಮನುಷ್ಯರ ಸಂಗ-ಸಹವಾಸ ಬೇಕು ಅಷ್ಟೆ. ಇದನ್ನು ಹೆಚ್ಚು ವಿವರಿಸುವ ಅಗತ್ಯ ಇಲ್ಲ ಅನ್ನಿಸುತ್ತೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ನಾಲ್ಕನೆಯ ಬರಹ

Read More

ನಮ್ಮಮ್ಮ ನಾಗಮ್ಮ: ಸುಮಾ ಸತೀಶ್ ಸರಣಿ

ಒಟ್ನಾಗೆ ಅಮ್ಮ ದೋಡ್ಡ ಸಂಸಾರದಾಗೆ ಸೈ ಅನ್ನುಸ್ಕಂಡಿದ್ದು ಸಣ್ದೇನಲ್ಲ. ಅಪ್ಪ ರಾಜಕೀಯದಾಗಿತ್ತು. ಮನೇನಾಗೆ ಇರ್ತಾ ಇರ್ಲಿಲ್ಲ. ಮಾತುಕತೆಗೆ ಸಿಗುತ್ಲೇ ಇರ್ಲಿಲ್ಲ. ಮನ್ ತುಂಬಾ ಜನ. ಕೆಲ್ಸ. ಮದಮದಲು ಅತ್ತೆದೀರ್ಗೆ ಬಿಗುಮಾನ ಇತ್ತು. ನಮ್ಮ ದೊಡ್ಡತ್ತೆ ಮಾತೂ ಅಂದ್ರೆ ಮನ್ಯಾಗೆ ವೇದವಾಕ್ಯ. ಅವ್ರೂ ಒಂದಿನ ನಾವು ಎಂಟು ಜನ ಯಾವತ್ತಿದ್ರೂ ಒಂದೇನೇಯಾ ಅಂತ ಯೋಳ್ದಾಗ ಅಮ್ಮುಂಗೆ ನಾನೊಬ್ಳೇ ಅಲ್ವಾ ಅಂಗಾರೆ ಹೊರುಗ್ನೋಳು ಅಂತ ಸಂಕಟ ಆಗಿ ಮರೇನಾಗೆ ಕಣ್ಣಾಗೆ ನೀರು ಹಾಕ್ಕಂಡಿದ್ದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ತಾಯಿಯ ಕುರಿತ ಬರಹ ನಿಮ್ಮ ಓದಿಗೆ

Read More

ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ

ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿ‌ಸಲು ಪ್ರಯತ್ನಿಸಿದ್ದಾರೆ.‌ ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಅಚ್ಚರಿಯ “ಅಭಯಾ” ತೊಟ್ಟ ಮನಸ್ಸು: ದರ್ಶನ್‌ ಜಯಣ್ಣ ಸರಣಿ

ಮನಸಿನಲ್ಲಿ ಯಾಕೋ ತಳಮಳ ಶುರುವಾಯಿತು. ಇವರಾರೋ ಫೋನ್ ನಂಬರ್ ಶೇರ್ ಮಾಡುತ್ತಿಲ್ಲ, ಐಡೆಂಟಿಟಿ ಶೇರ್ ಮಾಡುತ್ತಿಲ್ಲ, ಕೇವಲ ನನ್ನ ವಿವರ ಪಡೆದು, ಇಲ್ಲಿಗೆ ಕರೆಸಿಕೊಂಡಿದ್ದಾರೆ, ಈಗಲೂ ಕಾಯಿಸುತ್ತಿದ್ದಾರೆ ಎಂದುಕೊಳ್ಳುವಷ್ಟರಲ್ಲಿ ಯಾರೋ ಪುಸ್ತಕಗಳನ್ನು ಹೊತ್ತು ಬರುತ್ತಿರುವುದು ಕಾಣಿಸಿತು. “ಓಹ್, ಇವರೋ ಅಭಯಾ ತೊಟ್ಟ ಮಹಿಳೆ!” ತಮ್ಮ ಮುಖವೊಂದನ್ನ ಕಾಣುವಹಾಗೆ ಬಿಟ್ಟು ಇಡೀ ದೇಹಕ್ಕೆ ಅಭಯಾ ತೊಟ್ಟಿದ್ದಾರೆ. ಕಾರಿನಿಂದ ಹೊರಗಡೆ ಇಳಿದೆ. “ಬುಕ್ಸ್?” ಎಂದು ಕೇಳಿದರು. “ಎಸ್” ಎಂದೆ. ನಲವತ್ತು ರಿಯಾಲ್ ಕೊಡಲು ಹೇಳಿದರು, ಕೊಟ್ಟೆ. ಹಣಪಡೆದು ಪುಸ್ತಕಗಳನ್ನು ಕೊಟ್ಟು ಹೊರಟುಬಿಟ್ಟರು!
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಐದನೆಯ ಕಂತು

Read More

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ