Advertisement

Tag: ಕೆಂಡಸಂಪಿಗೆ

ಅಪ್ಪನ ಅಂಗೈಯಲ್ಲಿ ತಿರುಗುವ ಚಕ್ರಗಳು…: ಲೈಲಾ ಪರ್ವೀನ್‌ ಬರಹ

ಬಾಬಾ ಎಲ್ಲಿಗೆ ಬೇಕಾದರೂ ಸೈಕಲ್ ಹೊಡೆದುಕೊಂಡು ಹೋಗುತ್ತಿದ್ದರು. ಅದು ಕಾಡಾಗಲಿ, ಸಣ್ಣ ಹಳುವಾಗಲಿ, ಗದ್ದೆ ಅಂಚಾಗಲಿ, ಕಲ್ಲುಗೊಜ್ಜಿನ ರಸ್ತೆಯಾಗಲಿ, ಯಾರ ಮನೆಯಂಗಳವೇ ಆಗಲಿ, ಯಾವ ರೀತಿಯ ಏರು ತಗ್ಗುಗಳಿರಲಿ, ಗುಂಡಿಗಳಿರಲಿ, ಬಂಡೆಕಲ್ಲೇ ಇರಲಿ ಎಲ್ಲದರ ಮೇಲೂ ಸೈಕಲ್ ಓಡಿಸುವ ಛಾತಿಯಿತ್ತು ಅವರಿಗೆ. ಹೇಳಿ ಕೇಳಿ ಸೈಕಲ್ಲುಗಳ ನಾಡಿಮಿಡಿತ ಬಲ್ಲ ವೈದ್ಯರಲ್ಲವೇ? ಸೈಕಲ್ಲು ಎಲ್ಲಿ ಹೇಗೆ ಹೋಗಬಲ್ಲುದು ಹಾಗೂ ಎಲ್ಲಿ ಹೋಗಲಾರದೆಂಬುದನ್ನು ಅವರಿಗಿಂತ ಚೆನ್ನಾಗಿ ಬಲ್ಲವರಿಲ್ಲ.
ತಮ್ಮ ತಂದೆಯವರ ಸೈಕಲ್‌ ಪ್ರೇಮದ ಕುರಿತು ಲೈಲಾ ಪರ್ವೀನ್‌ ಬರಹ ನಿಮ್ಮ ಓದಿಗೆ

Read More

ಮನದ ಕಿಟಕಿ: ರವೀಂದ್ರ ನಾಯಕ್ ಸಣ್ಕಕ್ಕಿಬೆಟ್ಟು ಅಂಕಣ

ಮನೆಯ ರಾಮಾಯಣ ಮುಗಿಸಿ ಹೊರಗೆ ಬಂದು ಡ್ಯೂಟಿಗೆಂದು ಬೈಕ್ ಹತ್ತುವಾಗ ಆ ಗಂಡಸಿನ ಮುಖ ನೋಡಬೇಕು… ಯುದ್ಧ ನಂತರದ ನಿರ್ಮಲ ಶಾಂತಿ, ಆನಂದ ಅವರ ಮುಖದಲ್ಲಿ; ಜೀವಾವಧಿ ಶಿಕ್ಷೆ ಮುಗಿಸಿ ಈಗಷ್ಟೇ ಹೊರ ಬಂದ ಖೈದಿಯ ಸಂತೋಷದಂತೆ ನಿರಾಳ ಮುಖಭಾವ. ಸಂಜೆ ಮತ್ತೆ ಮನೆಯ ಬಾಗಿಲು ಬಡಿಯುವಾಗ ಮತ್ತದೇ ಬೇಸರ. “ಒಂದೇ ಮನೆಯಲ್ಲಿ ವಿಚ್ಭೇದಿತ ಮನಸ್ಸುಗಳು ಸಹಭೋಜನ ಮಾಡುತ್ತವೆ” ಎಂದು ಎಲ್ಲೋ ಓದಿದ್ದ ಮಾತು ಇವರನ್ನು ನೋಡಿದಾಗ ಅದೆಷ್ಟು ನಿಜ ಅನ್ನಿಸಿತು…
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಹನ್ನೆರಡನೆಯ ಬರಹ

Read More

ಬಲ ಉಳ್ಳವರ ಅಹೋಬಿಲಂ!: ಶ್ರೀಧರ್‌ ಎಸ್.‌ ಸಿದ್ದಾಪುರ ಪ್ರವಾಸ ಸರಣಿ

ಜೀವನೋಪಾಯಕ್ಕೆ ಇಲ್ಲಿ ಹಲವು ವೇಷ ತೊಟ್ಟವರು ಇಲ್ಲಿ ಕಾಣಸಿಗುತ್ತಾರೆ. ದಾರಿಗುಂಟ ಚಾಟಿಯನು ಮೈಗೆ ನಗುತ ಬಾರಿಸಿಕೊಂಡು ಜೀವನ ನಿರ್ವಹಿಸುವ ನಿರ್ಮೋಹಿ ಅಮಾಯಕರು. ಕಿಲೋಮೀಟರ್‌ ಆಚೆಗೂ ಕೇಳಿಸುವ ಚಾಟಿ ಶಬ್ದ. ಇವರ ಕುರಿತೊಂದು ಮಹಾ ಮರುಕ ಹುಟ್ಟುವಂತೆ ಮಾಡುತ್ತದೆ. ಬಿಸಿಲ ಜಗುಲಿಗೆ ಕೂತು ಬೇಡುವವರು. ಭಕ್ತಾದಿಗಳಿಗೆ ಉಣ್ಣಲು ಬನ್ನಿ ಎನ್ನುವವರು. ಒಂದೇ ಎರಡೇ. ಎಷ್ಟೇ ಇದ್ದರೂ ಮತ್ತಷ್ಟು ಬೇಕೆನ್ನುವ ನಮ್ಮನ್ನು ಕಂಡರೆ ಅವರಿಗೂ ಹಾಗೇ ಅನಿಸಬಹುದೇ ಗೊತ್ತಿಲ್ಲ. ಅಹೋಬಿಲಂ ಎಂಬ ಮಾಯಾಲೋಕದಲ್ಲಿ ಕಳೆಯುವ ಇನ್ನೆಷ್ಟು ಜನರಿದ್ದಾರೋ ಗೊತ್ತಿಲ್ಲ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿಯಲ್ಲಿ ಆಂಧ್ರಪ್ರದೇಶದ ಅಹೋಬಲಂನ ಕುರಿತ ಬರಹ

Read More

‘ವಿಧವೆ’ ನಿಮ್ಮನ್ನು ತುಂಬ ಕಾಡಿದಳೆ?: ಕಾಸರವಳ್ಳಿಯವರೊಂದಿಗೆ ಒಂದು ಸಂದರ್ಶನ: ಸುಕನ್ಯಾ ಕನಾರಳ್ಳಿ ಅಂಕಣ

‘ನಾಯಿನೆರಳು’ ವಿನ ಮೂರನೆಯ ಭಾಗದಲ್ಲಿ ಪ್ರಭುತ್ವ ಹೆಚ್ಚು ಹೆಚ್ಚು ಮೂಗು ತೂರಿಸೋದನ್ನ ತೋರಿಸೋದಕ್ಕೆ ಪ್ರಯತ್ನಪಟ್ಟಿದೀನಿ. ಪೋಲೀಸು, ಕೋರ್ಟು, ಕೇಸು… ಅವು ಮಂದಿಯ ವೈಯುಕ್ತಿಕ ಜೀವನದ ನಿರ್ಧಾರಗಳು ಅನ್ನೋ ಅಂಶವನ್ನ ಗಣನೆಗೇ ತಗೊಳಲ್ಲ. ವೆಂಕಟಲಕ್ಷ್ಮಿಗೆ ವ್ಯವಸ್ಥೆಯ ಆಯಾಮಗಳ ಪರಿಚಯ ಇದೆ. ಜೊತೆಗೆ, ಸಮುದಾಯದ ಒಂದು ಪಾತ್ರ ‘ಸ್ವಲ್ಪ ದಿನ ಹಿಟ್ಲರ್ ಕಾಟ ಕೊಟ್ಟ. ಈಗ ಗಾಂಧಿ ಕಾಟ,’ ಅಂತ ಹೇಳುತ್ತೆ. ಅವರಿಬ್ಬರ ನಡುವಿನ ವ್ಯತ್ಯಾಸವೂ ಅವರಿಗೆ ಗೊತ್ತಿಲ್ಲ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಇಪ್ಪತ್ತೈದನೆಯ ಬರಹ

Read More

ಸೆರಗ ಬಿಡು ಮರುಳೆ: ಜಯಲಕ್ಷ್ಮಿ ಪಾಟೀಲ್ ಅಂಕಣ

ಅಗತ್ಯವಿಲ್ಲದಿದ್ದರೂ, ಇಷ್ಟವಿಲ್ಲದಿದ್ದರೂ, ಪಾಲಿಸಲೇಬೇಕು ಎನ್ನುವುದು ಹೇರಿಕೆಯಾದಾಗ ಸಂಪ್ರದಾಯಗಳು ಸಂಕೋಲೆಗಳಾಗಿ ಹಿಂಸಿಸತೊಡಗುತ್ತದೆ. ಈ ಹೇರಿಕೆ ಕೇವಲ ಸಮಾಜದ್ದಲ್ಲ ನಮ್ಮೊಳಗಿನದೂ ಸಹ! ‘ಸಂಪ್ರದಾಯವನ್ನು ಬಿಟ್ಟು ನಡೆದಲ್ಲಿ ಏನಾದರೂ ಅವಘಡ ಸಂಭವಿಸಿದರೆ ಗತಿ ಏನು ಮುಂದೆ?!’ ಎನ್ನುವ ನಮ್ಮೊಳಗಿನ ಭೀತಿಯೇ ಅರ್ಧ ಮನುಷ್ಯರನ್ನು, ‘ಬಿಟ್ಟರೂ ಬಿಡಲಾರದೀ ಮಾಯೆ’ ಎಂದು ತ್ರಿಶಂಕು ಸ್ಥಿತಿಯಲ್ಲಿ ನೇತಾಡುವಂತೆ ಮಾಡುತ್ತದೆ. ಕಾಲಾಂತರದಲ್ಲಿ ಅಕ್ಷರ, ಹಣ, ಸಾರಿಗೆ ಮತ್ತು ಮಾಧ್ಯಮ ಇತ್ಯಾದಿ ಅನುಕೂಲತೆ ಎಲ್ಲರಿಗೂ ಎಟುಕತೊಡಗಿದಂತೆ, ಅಷ್ಟಿಷ್ಟು ಮೌಢ್ಯಗಳು, ಸಂಪ್ರದಾಯದ ಸಂಕೋಲೆಗಳು ಸಡಿಲಗೊಂಡರೂ, ತ್ರಿಶಂಕು ಸ್ಥಿತಿಯಿಂದ ಅಷ್ಟು ಸುಲಭದಲ್ಲಿ ಬಿಡುಗಡೆ ಸಿಗುವುದಿಲ್ಲ.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ