Advertisement

Tag: ಕೆಂಡಸಂಪಿಗೆ

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಆನಂದ ಈ. ಕುಂಚನೂರ ಬರೆದ ಈ ಭಾನುವಾರದ ಕತೆ

ನಿದ್ರೆಯಿಲ್ಲದೆ ಬಳಲಿಕೆಯಲ್ಲಿ ಅಸಾಧ್ಯ ಆಕಳಿಕೆ ಬರುತ್ತಿದ್ದರೂ ಕಣ್ರೆಪ್ಪೆ ಒಂದನ್ನೊಂದು ತಾಕುತ್ತಿರಲಿಲ್ಲ. ಯಾವಾಗಲೂ ನುಂಗುವ ನಿದ್ದೆ ಗುಳಿಗೆ ಕೂಡ ಈಗೀಗ ಕೆಲಸ ಮಾಡುತ್ತಿಲ್ಲ. ಹೀಗೆ ಎಲ್ಲ ಅಸಂಖ್ಯ ಕಾರ್ಮೋಡಗಳ ಮಧ್ಯೆ ಬೆಳ್ಳಿರೇಖೆಯೊಂದು ಮಿಂಚಿದಂತಾಗಿ ಗೆಲುವಾದರು. ತಮಗೆ ಹೊಳೆದ ವಿಚಾರಕ್ಕೆ ಖುಷಿಯಾಯಿತು.
ಆನಂದ ಈ. ಕುಂಚನೂರ ಹೊಸ ಕಥಾ ಸಂಕಲನ “ನಿರೂಪ”ದ ಒಂದು ಕತೆ “ನಕ್ಷತ್ರ ದಾನ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

Read More

ಸಾವಿರದ ಮಕ್ಕಳ ಮಹಾಮಾತೆ: ಸುಮಾ ಸತೀಶ್ ಬರಹ

ಪ್ರಕೃತಿಯನ್ನು ತಾಯಾಗಿ ಆರಾಧಿಸುವ ಪರಂಪರೆ ನಮ್ಮದು. ಸುಗ್ಗಿಯ ಆಚರಣೆ, ಗೋಮಾಳಗಳು, ಊರಿಗೊಂದರಂತೆ ಇದ್ದ ಗುಂಡುದೋಪುಗಳು, ಇರುವೆ ಗೂಡಿಗೂ ನುಚ್ಚು ಎರೆವ ಸಂಸ್ಕೃತಿ, ಜಂಗಮಯ್ಯ, ಭಿಕ್ಷುಕ, ಆಯಗಾರರು, ದನಕರು, ಪ್ರಾಣಿ ಪಕ್ಷಿ ತಿಂದುಂಡ ನಂತರ ಮನೆಗೆ ಒಯ್ಯುವ ಸುಗ್ಗಿ ಆಚರಣೆ ಇಂತಹ ಸದಾಚಾರಗಳೆಲ್ಲಾ ನಮ್ಮ ನಡುವಿಂದ ಕಣ್ಮರೆಯಾಗಿದೆ. ಅಂತಹದ್ದರಲ್ಲಿ ಇಲ್ಲಿ ನಮಗೆ ಅನನ್ಯವೆನಿಸುವುದು ತಿಮ್ಮಕ್ಕ ಪ್ರಕೃತಿಯನ್ನು ಕೂಸಾಗಿ ಭಾವಿಸಿದ ಪರಿ. ಇದು ಇನ್ನೂ ಒಂದು ಹೆಜ್ಜೆ ಮಿಗಿಲಾದುದು. ನಮಗೊಂದು ಮಾನವೀಯ ಪರಂಪರೆಯನ್ನು ಹಾಸಿ ಕೊಟ್ಟಿರುವಂತಹದ್ದು.
ಸಾವಿರದ ಮಕ್ಕಳ ಮಹಾಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಸುಮಾ ಸತೀಶ್ ಬರಹ

Read More

ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ

ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ