Advertisement

Tag: ಕೆಂಡಸಂಪಿಗೆ

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಗಣಪನ ಸಂಗಡ ವ್ಯಾಕರಣ: ಸುಮಾವೀಣಾ ಸರಣಿ

ರುಚಿನೋಡಿ ರವೆಯನ್ನು ನೋಡುತ್ತಿದ್ದಂತೆ 12 ವರ್ಷದ ಮಗನ ನೆನಪಿಗೆ ಬಂದದ್ದೆ “ರವೆ ಉಂಡೆ ರವೆ ಉಂಡೆ ಬೀರಿನಲ್ಲಿ ಕಂಡೆ” ಎಂಬ ಶಿಶುಪದ್ಯದ ಸಾಲುಗಳು ಬಂದರೆ ನನಗೆಂತೂ ಆ ರವಮಂ ನಿರ್ಜಿತ ಕಂಠೀರವಮಂ ನಿರಸ್ತಘನ ರವಮಂ ಕೋಪಾರುಣ ನೇತ್ರಂ ಕೇಳ್ದಾ ನೀರೊಳಗಿರ್ದುಂ ಬೆಮರ್ತನ್ ಉರಗಪತಾಕಂ ಎಂಬ ರನ್ನನ ಕೃತಿಯ 6ನೇ ಸಂಧಿಯ 22 ನೆಯ ಪದ್ಯ. ಇದು ದುರ್ಯೋಧನನ್ನು ಆತನ ಕೋಪವನ್ನು ವಿವರಿಸುವ ಪದ್ಯ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ನಾಲ್ಕನೆಯ ಬರಹ ನಿಮ್ಮ ಓದಿಗೆ

Read More

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ