Advertisement

Tag: ಕೆಂಡಸಂಪಿಗೆ

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಒದ್ರೆ ತಾನೇ ಬೀಳೋದೂ…!: ಎಚ್. ಗೋಪಾಲಕೃಷ್ಣ ಸರಣಿ

ಅದು ಹೇಗೋ ಮನೆ ಒಂದು ರೂಪ ತಳೆದಿತ್ತು. ಅದೂ ಹೇಗೆ ಅಂದರೆ ಕಾಸ್ಟ್ ರೆಡಕ್ಷನ್‌ಗೆ ಒಂದು ಪ್ಲಾನ್ ಹಾಕಿದ್ದೆ ಅಂತ ಹೇಳಿದ್ದೆ ಅಲ್ಲವೇ? ಅದರ ಪ್ರಕಾರ ಶೋ ಕೇಸು ಕೆಲಸ ಬೇಡ ಅಂತ ನಿಲ್ಲಿಸಿದೆ. ಆದರೆ ಮಧ್ಯೆ ಹಲಗೆ ಬರಬೇಕಲ್ಲಾ ಅಂತ ಹಲಗೆ ಫ್ಯಾಕ್ಟರಿ ಸ್ಕ್ರ್ಯಾಪ್ ವುಡ್‌ನಲ್ಲಿ ತಂದಿದ್ದೆ ತಾನೇ? ಅದು ಈ ಸ್ಲಾಬ್‌ಗೆ ಉಪಯೋಗ ಆಯ್ತಾ? ಎರಡು ರೂಮಿನಿಂದ ಎರಡು ಕಬೋರ್ಡ್ ಆಗಬೇಕಿತ್ತು. ಅದಕ್ಕೆ ಬಾಗಿಲು ಬೇಡ ಅಂತ ನಿರ್ಧರಿಸಿ ಆಗಿತ್ತು. ಇದಕ್ಕೂ ಹಲಗೆ ಸ್ಕ್ರ್ಯಾಪ್ ವುಡ್‌ನಿಂದ ಅಡ್ಜೆಸ್ಟ್ ಆಯ್ತಾ? ಬಾಗಿಲು ಯಾಕೆ ಬೇಡ ಅಂದರೆ ಅದಕ್ಕೆ ಒಂದು ತುಂಬಾ ಬಲವಾದ ಕಾರಣ ಇತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶಾಶ್ವತ ಮತ್ತು ನಶ್ವರ – ಡಿಜಿಟಲ್ ಯುಗದಲ್ಲಿ ಬದಲಾಯಿತೇ ಇವುಗಳ ಅರ್ಥ?: ಎಲ್.ಜಿ. ಮೀರಾ ಅಂಕಣ

ಹುಟ್ಟು ಮತ್ತು ಸಾವು ಎಂಬ ಎರಡು ತುದಿಗಳ ಮಧ್ಯೆ ಕೆಲವು ದಿನ ಆಸೆ-ನಿರಾಸೆ, ಪ್ರೀತಿ-ದ್ವೇಷ, ಭಾವ-ಬುದ್ಧಿ, ಇಷ್ಟ-ಕಷ್ಟ, ಸಂಗ್ರಹ-ಅಸಂಗ್ರಹ, ಸಾಧನೆ-ಸವಾಲು… ಇವೆಲ್ಲವೂ ಸೇರಿದ ಬದುಕಿನ ಬೆಳಕು. ಈ ಬದುಕನ್ನೇ ಮಾಯೆ, ಕತ್ತಲು ಎಂದು ಹೇಳುವ ಒಂದು ಆಧ್ಯಾತ್ಮಿಕ ಚಿಂತನ ಧಾರೆಯೂ ಇದೆಯಲ್ಲವೆ? `ಅಲ್ಲಿದೆ ನಮ್ಮನೆ, ಇಲ್ಲಿ ಬಂದೆ ಸುಮ್ಮನೆ’. `ಯಾಕೆ ಬಡಿದಾಡ್ತಿ ತಮ್ಮ ಮಾಯ ಮೆಚ್ಚಿ ಸಂಸಾರ ನೆಚ್ಚಿ’, `ಒಳಿತು ಮಾಡು ಮನುಜ, ನೀನಿರೋದು ಮೂರು ದಿವಸ’ ಇಂತಹ ಅನೇಕ ಗೀತೆಗಳು, ದಾಸವಾಣಿಗಳು ಬದುಕಿನ ಕ್ಷಣಭಂಗುರತೆಯನ್ನೇ ಹೇಳುತ್ತವೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಇಪ್ಪತ್ತೈದನೆಯ ಬರಹ

Read More

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ