Advertisement

Tag: ಕೆಂಡಸಂಪಿಗೆ

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ನನ್ನಜ್ಜಿ ಬದುಕಿರುವುದು ಅವಳ ಹಾಡುಗಳಲ್ಲಿ: ಅನನ್ಯ ತುಷಿರಾ ಬರಹ

ಎಷ್ಟೋ ಬಾರಿ ಸಣ್ಣ ಪುಟ್ಟ ಸಂಗತಿಗಳಿಗೆ ಸೋತು ಹೋದಂತಾಗುತ್ತದೆ. ಏರಿ ನಿಂತ ಎತ್ತರ ಸುಲಭಕ್ಕೆ ದಕ್ಕಿಲ್ಲವಾದರೂ ನಿಭಾಯಿಸುವಲ್ಲಿ ಅಲುಗಾಡಿದಂತಾಗುತ್ತದೆ. ಅಂಥ ಸಂದರ್ಭದಲ್ಲಿ ಹುಟ್ಟುವ ಪ್ರಶ್ನೆಗಳಿಗೆ ಉತ್ತರವಾಗಿ ಒಂದು ಬೆಳಕು ಕಾಣುವುದು ನನ್ನಜ್ಜಿಯ ಬದುಕಿನಿಂದ. ಅವಳ ಹಾಡುಗಳಿಂದ. ಬದುಕು ಕಟ್ಟುವ ಹೊತ್ತಿಗೆ ಸಂಗಾತಿಯ ಸಾವು ಕಂಡೂ ಕೂಡ ಬದುಕ ಹಾಡು ಕಟ್ಟಿದವಳು ನನ್ನಜ್ಜಿ. ‘ನನ್ನಜ್ಜಿಯ ಜೀವನವನ್ನೂ, ಜನಪದ ಹಾಡುಗಳನ್ನೂ ಬಿಡಿಸಿ ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ ನನ್ನಿಂದ’ ಎನ್ನುವಷ್ಟು ಆ ಪದಗಳು ಅವಳ ಹಾದಿಯಲ್ಲಿ ಬೆರೆತು ಹೋಗಿವೆ.
ಅನನ್ಯ ತುಷಿರಾ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

“ಡೆಸರ್ಟ್ಸ್‌” ಮಾತ್ರ ಬೇಡಪ್ಪ….: ದರ್ಶನ್‌ ಜಯಣ್ಣ ಸರಣಿ

ಈ ಪ್ರಯಾಣದ ನಡುವೆಲ್ಲಾ ನನ್ನನ್ನು ಕಾಡಿದ ವಿಷಯ ಮಧ್ಯದಲ್ಲೆಲ್ಲೋ ಗಾಡಿ ಪಂಕ್ಚರ್ ಆದರೆ ಏನು ಮಾಡುವುದು? ಎಸಿ ಕೈಕೊಟ್ಟರೆ ಹೇಗೆ ಸಂಭಾಳಿಸುವುದು? ಮರಳ ಮಳೆ ಬಂದು ದಾರಿ ಕಾಣದಾದರೆ ಏನು ಗತಿ, ಇತ್ಯಾದಿ. ಹಾಗೇನೂ ಆಗದಿದ್ದರೂ ರಿಯಾದ್ ತಲುಪುವವರೆಗೂ ಮತ್ತು ಎರಡು ದಿನದ ನಂತರ ವಾಪಾಸು ಬರುವಾಗಲೂ ನನ್ನನ್ನು ಬಿಟ್ಟು ಬಿಡದೆ ಕಾಡಿದ ಪ್ರಶ್ನೆಗಳು ಇವು. ದಾರಿ ಅತ್ಯಂತ ಬ್ಯುಸಿಯಾಗಿದ್ದರೂ, ಅಲ್ಲಲ್ಲಿ ಹತ್ತಾರು ಕಿಲೋಮೀಟರ್‌ಗಳ ನಂತರವೇ ಪೆಟ್ರೋಲ್, ತಿಂಡಿ ತಿನಿಸು, ಪಂಕ್ಚರ್ ಅಂಗಡಿ ಮತ್ತು ಇನ್ನಿತರೆ ಅಂಗಡಿಗಳು ನಿಗದಿತ ಜಾಗದಲ್ಲಿ ಮಾತ್ರವೇ ಇರುವುದು ಪರಿಸ್ಥಿತಿಯನ್ನ ಇನ್ನಷ್ಟು ಬಿಗಡಾಯಿಸಿತ್ತು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿ

Read More

ಮನಸ್ಸರಳಿಸುವ ಮೋಹಕ ರಂಗೋಲಿ: ಸುಮಾವೀಣಾ ಸರಣಿ

ಭಾರತೀಯ ರಂಗೋಲಿಗಳಲ್ಲಿ ಪರ್ವತ ಪ್ರಾಂತ್ಯ, ಕರಾವಳಿ ಮತ್ತು ಮೈದಾನ ಪ್ರಾಂತ್ಯಗಳಲ್ಲಿ ವಿಭಿನ್ನವಾಗಿ ಮೂಡಿಬರುತ್ತವೆ. ಪರ್ವತ ಪ್ರಾಂತ್ಯ ಅಂದರೆ ರಾಜಸ್ಥಾನ, ಉತ್ತರಪ್ರದೇಶ, ಹಿಮಾಚಲ ಪ್ರದೇಶ ಇಲ್ಲಿ ಬಿಡಿಸುವ ರಂಗೋಲಿ ರೇಖೆಗಳನ್ನು ಕೂಡಿಕೊಂಡಿದ್ದು ಅಗಲದ್ದಾಗಿರುತ್ತದೆ. ಚಿಕ್ಕಚಿಕ್ಕ ರೇಖೆಗಳನ್ನು ಬಳಸಿ ಬಂಗಾಳ ಮತ್ತು ಬಿಹಾರ ಪ್ರಾಂತ್ಯದವರು ಬಿಡಿಸುತ್ತಾರೆ. ಇವೆರಡರ ಜೊತೆಗೆ ಬಳ್ಳಿಗಳ ರಂಗೋಲಿ ಕರ್ನಾಟಕ, ಆಂಧ್ರ, ತಮಿಳುನಾಡಿನಲ್ಲಿದೆ. ಕೇರಳದವರ ಪುಷ್ಪರಂಗೋಲಿಯಂತೂ ವಿಶ್ವವಿಖ್ಯಾತ. ಓಣಂ ಆಚರಣೆಯ ಅವಿಭ್ಯಾಜ್ಯ ಅಂಗ ಎಂದರೆ ಈ ಪುಷ್ಪರಂಗೋಲಿ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಹದಿನೆಂಟನೆಯ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ