Advertisement

Tag: ಕೆಂಡಸಂಪಿಗೆ

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಯಾವಾಗ ಶಾಂತಮ್ಮ ಮೃದುಲಾಳ ಆರೈಕೆಯಲ್ಲಿ ನಾಲ್ಕು ದಿನ ಕಳೆದರೋ, ಮೃದುಲಾಳ ಮಂದಸ್ಮಿತ ಮುಖ, ಸ್ವಲ್ಪವೂ ಬೇಸರಿಸದೆ ಗಂಡನನ್ನು ಅನುಸರಿಸಿಕೊಂಡು ಹೋಗುವ ಪರಿ, ತಾನು ಗರ್ಭಿಣಿಯಾಗಿದ್ದರೂ ತನ್ನ ಕೆಲಸ ಬೊಗಸೆ ಕಡಿಮೆ ಮಾಡಿಕೊಳ್ಳದೆ ಪಾದರಸದಂತೆ ಓಡಾಡುವ ರೀತಿ, ಇವನ್ನೆಲ್ಲಾ ನೋಡುವಾಗ ತಮ್ಮ ಬಗ್ಗೆಯೇ ನಾಚಿಕೆಯಾಯಿತು ಶಾಂತಮ್ಮನವರಿಗೆ.
ವಸಂತಕುಮಾರ್‌ ಕಲ್ಯಾಣಿ ಬರೆದ ಕತೆ “ರೂಪಾಂತರ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಇಲ್ಲಿ ಸೋಲೂ ಇದೆ, ಗೆಲುವೂ ಇದೆ…: ಕಾರ್ತಿಕ್ ಕೃಷ್ಣ ಸರಣಿ

ಅಂಕಗಳು ಸೋರಿಹೋಗುತ್ತಿದ್ದರೂ ಎದೆಗುಂದದೆ ಆಡುತ್ತಿದ್ದ ಮೆರಿನ್ ಕೆಲವೇ ಘಳಿಗೆಯಲ್ಲಿ ನೋವನ್ನು ತಾಳಲಾರದೆ ಮತ್ತೆ ಕುಸಿದಳು. ಈ ಬಾರಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅವಳ ನೋವಿಗೆ ಇಡೀ ಕ್ರೀಡಾಂಗಣ ಮರುಗುತ್ತಿತ್ತು. ಕುಸಿದಲ್ಲೇ ಅಳುತ್ತಿದ್ದ ಮೆರಿನ್‌ಳನ್ನು ತಬ್ಬಿ ಸಮಾಧಾನ ಮಾಡುತ್ತಿದ್ದ ಅವಳ ಕೋಚ್‌ಗೂ ಕೂಡ ತನ್ನ ಕಣ್ಣೀರನ್ನು ತಡೆಹಿಡಿಯಲಾಗಿರಲಿಲ್ಲ. ಎದುರಾಳಿ ಹೇ ಗೆ ತಾನು ಫೈನಲ್ ತಲುಪಿದ್ದಕ್ಕೆ ಖುಷಿಪಡುವುದೋ, ಅಥವಾ ಮೆರಿನ್‌ಳ ಸ್ಥಿತಿಯನ್ನು ನೋಡಿ ಮರುಗುವುದೋ, ಒಂದೂ ತಿಳಿಯದೆ ಮೆರೀನಳ ಬಳಿ ಬಂದು ವಿಷಾದದ ನೋಟ ಬೀರುತ್ತಾ ನಿಂತಿದ್ದಳು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಮೈನಾ- ಇದು ದೇಹವಲ್ಲ, ಭಾವಗಳ ಸಂಕಲನ: ರಾಮ್ ಪ್ರಕಾಶ್ ರೈ ಕೆ. ಸರಣಿ

ಮೈನಾ ಸತ್ಯನಿಗೆ ಚಪ್ಪಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಅದನ್ನು ಕಂಡು ಬೇಸರದಿಂದ ಇದೆಂಥಾ ಉಡುಗೊರೆ ಎಂದು ಸತ್ಯ ಎಸೆಯುತ್ತಾನೆ. ಅನಂತರ ಕಾಲಿಲ್ಲದೇ ನೆಲಕ್ಕೆ ಕೈಯ್ಯಿಟ್ಟು ನಡೆಯುವಾಗ ನೋವನುಭವಿಸಬಾರದು ಎಂದು ಇದನ್ನು ನೀಡಿದ್ದಾಳೆ ಎಂದು ತಿಳಿದು ಖೇದಗೊಳ್ಳುತ್ತಾನೆ ಆತ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಥೆಯು ಸೆರೆ ಹಿಡಿದ ಸೂಕ್ಷ್ಮತೆ. ಈ ದೃಶ್ಯವೇನೂ ಕಥೆಯ ಮುಖ್ಯ ಭಾಗವಲ್ಲದಿದ್ದರೂ, ಅದೆಷ್ಟು ಅಧ್ಯಯನದ ದೃಷ್ಟಿಕೋನ ಈ ದೃಶ್ಯದಲ್ಲಿ ಅಡಗಿದೆ ಎಂಬುದು ಅಚ್ಚರಿಯ ಸಂಗತಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಪರ್ವತಗಳು ಬರಹಗಾರರಿಗೆ ಉಪಕಾರಿಯಾಗಿರುತ್ತವೆ..: ಖಂಡಿಗೆ ಮಹಾಲಿಂಗ ಭಟ್ ಬರಹ

‘ಯಾವನು ಬೆಟ್ಟಗಳಿಗೆ ಹೋಗುವನೋ, ಅವನು ತನ್ನ ತಾಯಿಯಲ್ಲಿಗೆ ಹೋಗುವನು’ ಎಂಬುದಾಗಿ ಕಿಪ್ಲಿಂಗ್ ಬರೆದಿರುವನು ಮತ್ತು ಅವನು ಇದರಿಂದ ಹೆಚ್ಚಿನ ಸತ್ಯವನ್ನು ಬರೆದುದು ಅಪರೂಪ. ಯಾಕೆಂದರೆ ಬೆಟ್ಟಗಳಲ್ಲಿ ಜೀವಿಸುವುದು ತನ್ನ ತಾಯಿಯ ಎದೆಯಲ್ಲಿ ಹುದುಗಿಕೊಂಡು ಮಲಗಿದಷ್ಟು ಹಿತಕರವೆನಿಸುತ್ತದೆ. ಪ್ರತಿ ಬಾರಿ ನಾನು ಬೇರೆಡೆಗೆ ಹೋಗಿಪುನಃ ಹಿಂದಿರುಗುವಾಗ ಮನಸ್ಸಿಗೆ ತುಂಬಾ ಹಿತಕರ ಹಾಗೂ ಅಪ್ಯಾಯಕರವೆನಿಸುತ್ತದೆ.
ರಸ್ಕಿನ್‌ ಬಾಂಡ್‌ ಅವರ “ರೇನ್‌ ಇನ್‌ ದ ಮೌಂಟೇನ್ಸ್‌” ಕೃತಿಯ ಒಂದು ಬರಹವನ್ನು ಡಾ. ಖಂಡಿಗೆ ಮಹಾಲಿಂಗ ಭಟ್ ಕನ್ನಡಕ್ಕೆ ಅನುವಾದಿಸಿದ್ದು, ನಿಮ್ಮ ಓದಿಗೆ ಇಲ್ಲಿದೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ