Advertisement

Tag: ಕೆಂಡಸಂಪಿಗೆ

ಸ್ಯಾನಿಟರಿ ಇಂಜಿನಿಯರ್ಸ್..: ಪೂರ್ಣೇಶ್ ಮತ್ತಾವರ ಪ್ರಬಂಧ

ಹೀಗೆ ನೀರು ಹೊತ್ತುಕೊಂಡು ಹೋದರೂ ಯಾವಾಗಲೂ ಉದ್ದನೆಯ ಸಾಲು, ನೂಕು ನುಗ್ಗಲು! ಸರಿ, ಈ ಎಲ್ಲಾ ಕಿರಿಕಿರಿ, ಪಡಿಪಾಟಲುಗಳನ್ನು ಅನುಭವಿಸುತ್ತಲೇ ಹತ್ತಾರು ನಿಮಿಷ ಕಾದು ಒಳ ಹೋದರೂ, ಹೋದವರು ಬಾಗಿಲು ಹಾಕಿ, ಬಾಗಿಲಿನ ಚಿಲಕ ಸರಿ ಇಲ್ಲವೆಂದು ಬಕೆಟನ್ನೇ ಬಾಗಿಲಿಗೆ ಅಡ್ಡವಾಗಿ ಇಟ್ಟು, ಕುಕ್ಕರುಗಾಲು ಹಾಕಿ ಕೂತು ಒಂದು ಕೈಲಿ ಬಕೆಟ್, ಮತ್ತೊಂದು ಕೈಲಿ ಸಹಿಸಲಾರದ ವಾಸನೆಗೆ ಮೂಗು ಮುಚ್ಚಿ ಶೌಚ ನಡೆಸಬೇಕೆನ್ನುವಷ್ಟರಲ್ಲೇ ದಡಬಡ ಬಾಗಿಲು ಬಡಿತ, ಸ್ವಲ್ಪ ತಡವಾದರೂ ಬಾಗಿಲನ್ನೇ ಮುರಿಯುವ ಬೆದರಿಕೆ, ಇತ್ಯಾದಿ, ಇತ್ಯಾದಿ..
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಕ್ಕಳ ಶಿಕ್ಷಣದಲ್ಲಿ ಕುಟುಂಬದ ಜವಾಬ್ದಾರಿ: ಅನುಸೂಯ ಯತೀಶ್ ಸರಣಿ

ನೋಡಿ ಮೇಡಮ್ ನೀವು ಮೊದಲು ಅವನಿಗೆ ಟಿವಿ ನೋಡೋದು ಬಿಡಿಸಿ. ಶಾಲೆಯಿಂದ ಬಂದಾಗ ಟಿವಿ ಮುಂದೆ ಕೂತ್ರೆ ಅರ್ಧ ರಾತ್ರಿವರೆಗೂ ಒಂದಾದ ಮೇಲೆ ಒಂದರಂತೆ ಧಾರವಾಹಿ ನೋಡ್ತಾನೆ. ಮಲಗೋದು ಸರಿ ರಾತ್ರಿ ಆಗಿರುತ್ತೆ. ಬೆಳಗ್ಗೆ ಏಳಲು ತಲೆಸುತ್ತು ಅಂತಾನೆ. ನಿದ್ದೆ ಬರುತ್ತೆ ಅಂತ ಹತ್ತು ಗಂಟೆಯಾದರೂ ಮಲಕೊಂಡವ್ನೆ. ಅದಕ್ಕೆ ನಿಮ್ಮ ಮೇಲೆ ಕೋಪ ಬಂದಿದೆ. ನಿಮ್ಮ ಮೇಲೆ ಕೂಗಾಡಿದ್ದು ಇನ್ಯಾಕೆ ಅಂದುಕೊಂಡ್ರಿ ಅಂತ ಆಕೆಯ ಕಿರುಚಾಟ, ಹಾರಾಟದ ಹಿಂದಿನ ಸತ್ಯ ಬಾಯ್ಬಿಟ್ಟಳು.
ಅನುಸೂಯ ಯತೀಶ್ “ಬೆಳೆಯುವ ಮೊಳಕೆ” ಸರಣಿ

Read More

ಅಜ್ಜಿಯಂದಿರ ನೆನಪಿನ ದಿನಗಳು: ಮಾರುತಿ ಗೋಪಿಕುಂಟೆ ಸರಣಿ

ಇನ್ನು ಉಳಿದಿದ್ದು ಸಣ್ಣಜ್ಜಿ. ಬಹಳ ಗಟ್ಟಿಗಿತ್ತಿ. ಬದುಕನ್ನು ಧೈರ್ಯದಿಂದ ಎದುರಿಸಿದ್ದಳು. ರಾತ್ರಿಯ ಸಮಯದಲ್ಲಿ ಅಂಗಳದಲ್ಲಿ ಮಲಗಿಕೊಂಡಿದ್ದಾಗ ಅನೇಕ ಕತೆಗಳನ್ನು ಹೇಳುತ್ತಿದ್ದಳು. ಅವೆಲ್ಲವೂ ರಾಜರ ಕತೆಗಳಾಗಿರುತ್ತಿದ್ದವು. ನನಗೀಗಲೂ ಆ ಕತೆಗಳು ನೆನಪಿವೆ. ಸಣ್ಣಜ್ಜಿಯೊಂದಿಗೆ ಒಡನಾಟ ಕಮ್ಮಿಯಾದರೂ ಅನೇಕ ನೆನಪುಗಳಿವೆ. ಸುಮಾರು ನಾಲ್ಕು ಸಾವಿರದಷ್ಟು ಹಾಡುಗಳನ್ನು ಗುಣಸಾಗರಿ ಜನಪದ ಮಹಿಳೆ ಕುರಿತು ಹಾಡುತ್ತಿದ್ದಳು ಎನ್ನುತ್ತಿದ್ದರು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ ಹೇಗೆ ತಮ್ಮ ಸ್ವಾರ್ಥಕ್ಕಾಗಿ ಹೋರಾಟದ ಹೆಸರಲ್ಲಿ ಗದ್ದುಗೆಯನ್ನು ಹೇಗೆ ಹಿಡಿದರು ಎಂಬೆಲ್ಲ ಆಲೋಚನೆ ಮೂಡಿಸುತ್ತ ಸಾಗುತ್ತದೆ. ಈ ರಾಜಕೀಯ ಎನ್ನುವ ಉಸುಕಿನ ಕ್ಷೇತ್ರವು ಒಮ್ಮೆ ಒಳಹೊಕ್ಕವರನ್ನು ತನ್ನ ಕಬಂಧ ಬಾಹುವಿನ ಮೂಲಕ, ಲಾಲಸೆಗಳ ಜಾಲದಿಂದ ಹೇಗೆ ಪಥದಿಂದ ವಿಮುಖವಾಗಿಸುತ್ತದೆ ಎನ್ನುವುದು ತಿಳಿಯದ್ದೇನಲ್ಲ.
ಲತಾ ಗುತ್ತಿ ಕಾದಂಬರಿ “ಚದುರಂಗ” ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ