Advertisement

Tag: ಕೆಂಡಸಂಪಿಗೆ

ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಜೈಲಲ್ಲಿ ನೀತಿಶಾಸ್ತ್ರ: ಕೆ. ಸತ್ಯನಾರಾಯಣ ಸರಣಿ

ಸೆರೆಮನೆಯಲ್ಲಿರುವ, ನ್ಯಾಯಾಲಯದಿಂದ ಶಿಕ್ಷೆಗೆ ಒಳಗಾಗಿರುವ ಖೈದಿಗಳಿಗೆ ಮನರಂಜನೆ ಇರಬೇಕು, ಅದಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂಬ ಮಾತನ್ನು ನಾನು ಇದುವರೆಗೆ ಎಲ್ಲೂ ಕೇಳಿಲ್ಲ. ಅವರ ಮನೋಧರ್ಮದಲ್ಲಿ ಏನಾದರೂ ಸುಧಾರಣೆ ಆಗಬೇಕು ಎನ್ನುವುದಾದರೆ, ಧಾರ್ಮಿಕ ಪ್ರವಚನಗಳನ್ನು ಏರ್ಪಡಿಸಲಿ, ಭಗವದ್ಗೀತೆ ಮೇಲೆ ಉಪನ್ಯಾಸ ನೀಡಲಿ, ಭಜನೆ ಇರಲಿ, ಹಾಡುಗಾರರನ್ನು ಕರೆಸಿ ದೇವರನಾಮ ಹೇಳಿಸಿ, ಪ್ರಾರ್ಥನೆ ಇರಲಿ.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿ

Read More

ಕಾರೂ… ಕಾರ್‌ ಬಾರೂ..: ಗುರುಪ್ರಸಾದ ಕುರ್ತಕೋಟಿ ಸರಣಿ

ಕಾರನ್ನ ಮನೆಗೆ ನಾನೇ ಓಡಿಸಿಕೊಂಡು ಬಂದೆ. ಜೊತೆಗೆ ಅಜ್ಜಂಪುರ ಸರ್ ಕೂಡ ಬಂದರು. ಅವರ ಧೈರ್ಯ ಮೆಚ್ಚಲೇಬೇಕು! ನನಗೆ ಅಮೆರಿಕೆಯಲ್ಲಿ ಮೊದಲೇ ಕಾರ್ ಓಡಿಸಿದ ಅನುಭವ ಇತ್ತು. ಹಿಂದೆ ಒಂದೆರಡು ಬಾರಿ ಕೆಲವು ತಿಂಗಳಿಗೆ ಅಂತ ಅಮೆರಿಕೆಯ ಯುಟಾ (Utah) ಗೆ ಹೋಗಿದ್ದಾಗ ಅಲ್ಲಿ ನನ್ನ ಮ್ಯಾನೇಜರ್ ನನಗೆ ಒತ್ತಾಯ ಮಾಡಿ ಕಾರ್ ಓಡಿಸಲು ರೂಡಿ ಮಾಡಿಸಿದ್ದು ಈಗ ಪ್ರಯೋಜನಕ್ಕೆ ಬಂದಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಎಂಟನೆಯ ಬರಹ

Read More

ಲೋಕದೃಷ್ಟಿಯೂ ಲೋಕಾ ರೂಢಿಗಳು: ಲಿಂಗರಾಜ ಸೊಟ್ಟಪ್ಪನವರ್‌ ಅಂಕಣ

ಸಿಕ್ಕೊಂಡು ಸೀರಿ ಉಟ್ಕಂಡಿಯವೂ ಹುಷಾರು..: ಮನೆಯ ಹಿರಿಯ ಹೆಂಗಸರು ಹಿರಿಯರಿಗೆ ಹೇಳಿ ಕಳಿಸುವ ಅತಿ ಎಚ್ಚರಿಕೆಯ ಮಾತು ಇದು. ಹಲವು ನೆರಿಗೆಗಳನ್ನು ಸೀರೆಗೆ ಆಧ್ಯಾರೋಪಿಸಿದಂತಹ ಕಟು ಎಚ್ಚರ ಇಲ್ಲಿ ಸಂಕೇತದಂತೆ ಇದೆ. ಎಡವದಿರುವ ಜಾರದಿರುವ ಎಚ್ಚರ ಹೆಜ್ಜೆ ಹೆಜ್ಜೆಗೂ ಗಂಟೆ ಹೊಡೆಯುತ್ತಿರುತ್ತದೆ. ಜನಪದ ಧಾರೆಯಲ್ಲಿ ಇಂಥದೊಂದು ಸ್ತ್ರೀ ಕೇಂದ್ರಿತ ಎಚ್ಚರದ ಮಾತುಗಳು ಉದ್ದಕ್ಕೂ ಸಿಗುತ್ತವೆ.
ಲಿಂಗರಾಜ ಸೊಟ್ಟಪ್ಪನವರ್‌ ಬರೆಯುವ “ಉತ್ತರದ ಕತೆಗಳು” ಅಂಕಣದ ಎರಡನೆಯ ಬರಹ

Read More

ಕಡಲಿನಗಲದ ಕಣ್ಣುಗಳೊಳಗಿನ ಸುನಾಮಿ…: ಆಶಾ ಜಗದೀಶ್ ಅಂಕಣ

ನಾವು ಅದೆಷ್ಟು ತೀವ್ರವಾಗಿ ಅತ್ತಿದ್ದೇವೆ, ಒಬ್ಬರನ್ನೊಬ್ಬರು ಹಂಬಲಿಸಿದ್ದೇವೆ, ಬಿಟ್ಟು ಬದುಕಲು ಸಾಧ್ಯವೇ ಇಲ್ಲ ಎನಿಸುವಷ್ಟು ಹಚ್ಚಿಕೊಂಡಿದ್ದೇವೆ. ಜೊತೆಯಲ್ಲಿರುವಂತೆ ಭ್ರಮಿಸಿದ್ದೇವೆ. ಭ್ರಮೆಯಿಂದ ತಿಳಿದೆದ್ದು ವಿಹ್ವಲಗೊಂಡಿದ್ದೇವೆ. ಅದೊಂದು ದಿನ ನಡುರಾತ್ರಿ, ಒಂದು ಕನಸು ಅರಳತೊಡಗಿತ್ತು; ನೈಜವೆನಿಸುವಷ್ಟೇ ಸಹಜವಾಗಿ. ನಾವಿಬ್ಬರೂ ಎರೆಡು ಪುಟ್ಟ ಗಿಳಿಗಳಂತೆ ಒಟ್ಟೊಟ್ಟಾಗಿ ಒತ್ತಿಕೊಂಡು ಕೂತು, ನಿಂತು, ಮಲಗಿ ಆಟವಾಡುತ್ತಿದ್ದೆವು. ಮುದ ಮತ್ತು ಮುಗ್ಧ… ಯಾರ ಸಂಚೋ ತಿಳಿಯದು. ಕನಸು ಒಡೆಯಿತು. ಕಣ್ಣು ತೆರೆದಾಗ ನೀನಿಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ