Advertisement

Tag: ಡಾ. ಎಲ್.ಜಿ. ಮೀರಾ

 ಲೋಕೋಭಿನ್ನ ರುಚಿಃ – ಲೋಕೋಭಿನ್ನ ಖುಷಿಃ!: ಎಲ್.ಜಿ. ಮೀರಾ ಅಂಕಣ

ಒಬ್ಬೊಬ್ಬರ ಖುಷಿಯ ನಿರ್ವಚನವೂ ಬೇರೆ ಬೇರೆ. ಒಬ್ಬರಿಗೆ ಮಾತಿನಲ್ಲಿ ಖುಷಿ, ಇನ್ನೊಬ್ಬರಿಗೆ ಮೌನದಲ್ಲಿ. ಒಬ್ಬರ ಖುಷಿ ಹಾಡು ಕೇಳುವುದರಲ್ಲಾದರೆ, ಇನ್ನೊಬ್ಬರ ಖುಷಿ ಪದಬಂಧ ಬಿಡಿಸುವುದರಲ್ಲಿ. ಒಬ್ಬರ ಖುಷಿ ಹೊಸರುಚಿಯ ಅಡುಗೆಗಳನ್ನು ಸವಿಯುವುದರಲ್ಲಾದರೆ ಇನ್ನೊಬ್ಬರ ಖುಷಿ ಹೊಸ ಅಡುಗೆಗಳನ್ನು ಕಲಿತು ಮಾಡುವುದರಲ್ಲಿ. ಒಬ್ಬರಿಗೆ ದೇಶವಿದೇಶ ತಿರುಗುವ ಪ್ರವಾಸ ಇಷ್ಟ, ಇನ್ನೊಬ್ಬರಿಗೆ ಮನೆಯ ಆರಾಮಕುರ್ಚಿಯಲ್ಲಿ ಕುಳಿತು ದೇಶವಿದೇಶಗಳ ಬಗ್ಗೆ ಓದುವುದು ಇಷ್ಟ! ಖುಷಿಗಳು ವೈವಿಧ್ಯಮಯ. ಆದರೆ ಇವೆಲ್ಲದರ ಮೂಲದಲ್ಲಿರುವ ಒಂದು ಪ್ರಧಾನ ಸಂಗತಿಯು ಬಹುತೇಕ ಜನರ ಗಮನಕ್ಕೆ ಬರುವುದಿಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಕುವೆಂಪು – ಕನ್ನಡದ ಭಾವಸೆಲೆ ಹಾಗೂ ವೈಚಾರಿಕ ದಿಕ್ಸೂಚಿ: ಎಲ್.ಜಿ.ಮೀರಾ ಅಂಕಣ

ಕವಿಯಲ್ಲದವರ ಮಟ್ಟಿಗೆ ಸಾಧಾರಣ ಬೆಟ್ಟಗುಡ್ಡ ಅನ್ನಿಸಿಬಿಡಬಹುದಿದ್ದ ಕುಪ್ಪಳ್ಳಿಯ ಒಂದು ಸ್ಥಳವು ಈ ರಸಋಷಿಯ ಕಣ್ಣಲ್ಲಿ ಅತ್ಯಂತ ಪ್ರೀತಿಯ `ಕವಿಶೈಲ’ವಾದದ್ದು ಅವರಿಗಿದ್ದ ಅಮಿತ ಪ್ರಕೃತಿಪ್ರೇಮಕ್ಕೆ ಸಾಕ್ಷಿ. ಅವರೆಲ್ಲೇ ಇದ್ದರೂ ಅವರ ಮನಸ್ಸು ಸದಾ ಕಾಲ ತಮ್ಮ ಪ್ರೀತಿಯ ಮಲೆನಾಡನ್ನು ಧ್ಯಾನಿಸುತ್ತಿತ್ತು. “ನಾನು ಭೌತಿಕವಾಗಿ ಮೈಸೂರಿನಲ್ಲಿದ್ದರೂ ಮಾನಸಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಮಲೆನಾಡಿನಲ್ಲಿರುತ್ತೇನೆ. ಪ್ರತಿ ನಿತ್ಯ ಹಲವು ಸಾರಿ ನವಿಲುಕಲ್ಲಿಗೆ ಹೋಗಿ ಬರ್ತೀನಿ, ಕವಿಶೈಲದಲ್ಲಿ ಕುಳಿತು ಧ್ಯಾನ ಮಾಡ್ತೀನಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ಮೂರನೆಯ ಬರಹ

Read More

 ಬದಲಾಗಿದೆ ಕನ್ನಡ ನಾಡು, ಡಿಜಿಟಲ್ ಕರ್ನಾಟಕದ ಹಾಡು ಪಾಡು: ಎಲ್.ಜಿ.ಮೀರಾ ಅಂಕಣ

ಇಪ್ಪತ್ತೊಂದನೇ ಶತಮಾನದ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಎಲ್ಲ ನಾಡುಗಳಂತೆ ನಮ್ಮ ಕನ್ನಡ ನಾಡು ಸಹ ಬದಲಾಗುತ್ತಿದೆ. ನಮಗೆ ಬೇಕೋ ಬೇಡವೊ ನಮಗೆ ಪರಿಚಿತವಾಗಿದ್ದ ಬದುಕಿನ ಲಯಗಳು ನಿಧಾನವಾಗಿ ಮರೆಯಾಗುತ್ತಾ, ಅಪರಿಚಿತ, ನೂತನ ಲಯಗಳು ನಮ್ಮ ದಾರಿಯಲ್ಲಿ ಪ್ರತ್ಯಕ್ಷವಾಗುತ್ತಿವೆ. `ಅಯ್ಯೋ, ಹೇಗಿದ್ದದ್ದು ಹೇಗಾಯ್ತಪ್ಪ! ಎಲ್ಲ ಹಾಳಾಗಿ ಹೋಯಿತಲ್ಲ! ಮನುಷ್ಯ ಪ್ರಪಂಚ ಇನ್ನು ಮುಳುಗಿ ಹೋಗುತ್ತೆ! ಪ್ರಳಯವಾಗುತ್ತೆ!!’ ಎಂದು ಗೋಳಾಡುತ್ತಾ ಕೂರುವುದು ವಿವೇಕದ ಆಯ್ಕೆಯಲ್ಲ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತೆರಡನೆಯ ಬರಹ

Read More

ಕನ್ನಡ ಮನಸ್ಸು ಪ್ರೀತಿಯನ್ನು ಪರಿಭಾವಿಸುವ ರೀತಿ: ಎಲ್.ಜಿ.ಮೀರಾ ಅಂಕಣ

ಆಧುನಿಕ ಕನ್ನಡ ಸಾಹಿತ್ಯದ ಬಹಳ ಮುಖ್ಯ ಘಟ್ಟವಾದ ನವೋದಯದಲ್ಲಿ ಪ್ರೇಮವನ್ನು ದಾಂಪತ್ಯದೊಳಗಿದ್ದಾಗ ಸಂಭ್ರಮಿಸುವ ಹಾಗೂ ಒಂದು ವೇಳೆ ಅದು ದಾಂಪತ್ಯದ ಹೊರಗಿದ್ದಾಗ ಅದನ್ನು ತ್ಯಾಗ ಮಾಡುವ ಮನೋಧರ್ಮ ಕಾಣುತ್ತಿತ್ತು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿನ್ನೆಲೆಯಲ್ಲಿದ್ದ ನವ ಭಾರತ ನಿರ್ಮಾಣದ ಆಶಯ, ಸುಧಾರಣಾವಾದ, ಬ್ರಿಟಿಷರ ಕಣ್ಣಲ್ಲಿ ಭಾರತದ `ಸಭ್ಯ ಸಂಸ್ಕೃತಿ’ಯನ್ನು ಎತ್ತಿ ಹಿಡಿಯುವ ನೈತಿಕ ತವಕ ಇವು ಕುವೆಂಪು, ಬೇಂದ್ರೆ, ಪುತಿನ ಮುಂದೆ ಕೆ.ಎಸ್.ನರಸಿಂಹಸ್ವಾಮಿ ಇವರೆಲ್ಲರ ಪ್ರೀತಿಯ ಚಿತ್ರಣವನ್ನು ಪ್ರಭಾವಿಸಿದವು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ