Advertisement

Tag: ಡಾ. ಚಂದ್ರಮತಿ ಸೋಂದಾ

ನೀ ನನಗಿದ್ದರೆ ನಾ ನಿನಗೆ: ಚಂದ್ರಮತಿ ಸೋಂದಾ ಸರಣಿ

ನಮ್ಮ ಬದುಕಿಗೆ ಹತ್ತಿರವಾದ ಹಕ್ಕಿಗಳಲ್ಲಿ ಕಾಗೆ, ಕೋಳಿಗಳೂ ಸೇರುತ್ತವೆ. ಕಾಗೆ ಬಣ್ಣ ಕಪ್ಪು ಅಂತ ಅದನ್ನು ಹಳಿಯುವುದಿದೆ. ಯಾರಾದರೂ ತಮ್ಮ ಮಕ್ಕಳನ್ನು ಹೊಗಳುತ್ತಿದ್ದರೆ ʻಕಾಗೆ ತನ್ನ ಮರಿ ಹೊನ್ನಮರಿ ಅಂದಿತ್ತಂತೆʼ ಎಂದು ಮೂಗುಮುರಿಯುವವರೂ ಇದ್ದಾರೆ. ಕೆಲವು ಬಾರಿ ಮಕ್ಕಳನ್ನು ನಂಬಿಸಲು ಕಾಗೆಯ ಬಳಕೆ ಇದೆ. ಮಗುವಿಗೆ ಕೊಡಬಾರದು ಎಂದಿರುವ ತಿನಿಸನ್ನು ಅದು ಬೇಕೇಬೇಕು ಎಂದು ಹಟಮಾಡಿದರೆ ʻಕಾಕಪಾಯಿ ಕಚ್ಗೊಂಡು ಹೋಯ್ತʼ ಅಂತ ಹೇಳುವುದಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ನಾವೇ ಭೂಮಿಯ ವಾರಸುದಾರರೇ?: ಚಂದ್ರಮತಿ ಸೋಂದಾ ಸರಣಿ

ನಮ್ಮ ಬಂಧುವೊಬ್ಬರದು ಅರಣ್ಯದ ನಡುವಿನ ಒಂಟಿ ಮನೆ. ಒಂದು ಬೇಸಿಗೆಯ ಬೆಳದಿಂಗಳ ರಾತ್ರಿಯಲ್ಲಿ ಹುಲಿ ಮತ್ತು ಕಾಡೆಮ್ಮೆ ಎರಡರ ನಡುವೆ ಭಯಂಕರ ಕಾದಾಟ. ಅವರ ಮನೆಯ ಹಿತ್ತಿಲಿನ ಪಕ್ಕದಲ್ಲಿಯೇ ಇವೆರಡರ ಹೋರಾಟವನ್ನು ಆ ಮನೆಯ ಜನರೆಲ್ಲ ಕುತೂಹಲದಿಂದ ಸುಮಾರು ಅರ್ಧಗಂಟೆಗೂ ಹೆಚ್ಚಿನ ಸಮಯ ವೀಕ್ಷಿಸಿದರಂತೆ. ಆ ಪ್ರಾಣಿಗಳ ಹೋರಾಟದ ಜಾಗಕ್ಕೂ ಇವರ ಮಧ್ಯೆ ಕೇವಲ ಒಂದು ಬೇಲಿಯಷ್ಟೆ ಇದ್ದುದು. ಇದು ಎಲ್ಲಿಯೂ ಸುದ್ದಿಯಾಗಲೇ ಇಲ್ಲ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ನೀನೆ ಭುವನಕ್ಕಾರಾಧ್ಯನೈ… ಚೂತರಾಜಾ: ಚಂದ್ರಮತಿ ಸೋಂದಾ ಸರಣಿ

ಮಲೆನಾಡು, ಕರಾವಳಿ ಭಾಗದಲ್ಲಿ ಕೊಸಗಾಯಿ ಅಥವಾ ಕುಚ್ಚುಮಾವಿನಕಾಯಿ ಎನ್ನುವುದು ಮಳೆಗಾಲದಲ್ಲಿ ಅಡಿಗೆಗೆ ಸಹಾಯಕ. ಕುದಿಯುವ ಹಂತದಲ್ಲಿದ್ದ ನೀರಿಗೆ ತೊಳೆದು ಶುದ್ಧಗೊಳಿಸಿದ ಮಾವಿನಕಾಯಿಗಳನ್ನು ಹಾಕಿ ಒಂದು ಕ್ಷಣಬಿಟ್ಟು ಅದನ್ನು ಅಲ್ಲಿಂದ ತೆಗೆದು ಆರಿದ ಮೇಲೆ ಉಪ್ಪುನೀರಿನಲ್ಲಿ ಹಾಕಿಡಬೇಕು. ಇದರಿಂದಲೂ ಹಸಿಮಾವಿನಕಾಯಿಯಲ್ಲಿ ಮಾಡುವ ವ್ಯಂಜನಗಳನ್ನೆಲ್ಲ ಮಾಡಬಹುದು. ಇದಕ್ಕೂ ಅಷ್ಟೆ, ಎಲ್ಲ ಮಾವಿನಕಾಯಿಯೂ ಬಾರದು. ಸಿಪ್ಪೆ ದಪ್ಪವಿದ್ದು ಉಪ್ಪಿನಲ್ಲಿ ಕರಗಬಾರದು. ಜೋಓಓ ಎಂದು ಹೊಯ್ಯುವ ಮಳೆಯಲ್ಲಿ ಕಮ್ಮಗೆ ಉಂಡು, ಬೆಚ್ಚನೆ ಹೊದ್ದು ಮಲಗಿದರೆ ʻಸ್ವರ್ಗಕ್ಕೆ ಕಿಚ್ಚು ಹಚ್ಚೆಂದ….ʼ
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ನಾಲ್ಕನೆ ಕಂತು

Read More

ಮುಳ್ಳಕ್ಕಿಯ ರೆಕ್ಕೆಪುಕ್ಕಗಳು: ಡಾ. ಚಂದ್ರಮತಿ ಸೋಂದಾ ಸರಣಿ

ಹಿಂದೆ ಕೂಲಿ ಕೆಲಸ ಮಾಡುವ ಜನರು ಬೇಸಿಗೆಯಲ್ಲಿ ಒಣಗಿಸಿಟ್ಟ ಹಲಸಿನ ಬೀಜಗಳನ್ನು ಮಳೆಗಾಲದಲ್ಲಿ ಮುಖ್ಯ ಆಹಾರವಾಗಿ ಬಳಸುತ್ತಿದ್ದರು. ಆಗ ಅಧಿಕ ಮಳೆ ಹೊಯ್ಯುತ್ತಿದ್ದುದರಿಂದ ಅವರಿಗೆ ಕೂಲಿಕೆಲಸ ಸಿಗುತ್ತಿರಲಿಲ್ಲ, ದವಸಧಾನ್ಯಗಳನ್ನು ಕೊಳ್ಳಲು ಆಗುತ್ತಿರಲಿಲ್ಲ. ಒಂದುಹೊತ್ತು ಅನ್ನವನ್ನೋ ಗಂಜಿಯನ್ನೋ ಉಂಡರೆ ಇನ್ನೊಂದು ಹೊತ್ತಿಗೆ ಹಲಸಿನ ಬೇಳೆಯೇ ಆಹಾರವಾಗಿತ್ತು. ಹೀಗೆ ಹಲಸಿನ ಬೇಳೆ ಅವರನ್ನು ಸಲಹುತ್ತಿತ್ತು. ಇತ್ತೀಚೆಗೆ ಹಲಸಿನ ಬೇಳೆಯಲ್ಲಿ ಅತ್ಯಧಿಕ ಪೌಷ್ಟಿಕಾಂಶ ಇದೆ ಎನ್ನುವ ಸಂಗತಿ ಪ್ರಚಲಿತವಾಗಿದೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯಲ್ಲಿ ಮೂರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ