Advertisement

Tag: ದಾದಾಪೀರ್ ಜೈಮನ್

ಬೆಂಕಿಯ ಮಳೆ

ಉಮಾ ಅವರಿದ್ದ ಓಣಿಯ ಬಳಿ ಹೋಗಿ ಒಬ್ಬ ಹೆಂಗಸನ್ನು ‘ಇಲ್ಲಿ ಉಮಾ ಅನ್ನೋರ ಮನೆ ಎಲ್ಲಿ ಬರತ್ತೆ?’ ಅಂತ ಕೇಳಿದೆ. ಅದಕ್ಕವರು ‘ಓಹ್, ಶಾಹೀನಾ ಬೇಗಂ ಮನೆನಾ? ಬನ್ನಿ ಬನ್ನಿ. ನಮ್ಮ ಮನೆ ಪಕ್ಕದ ಮನೆನೇ ಶಾಹೀನಕ್ಕನದು. ನನ್ನ ಹೆಸರು ನಾಗವೇಣಿ. ಅಕಿ ನನ್ನ ಗೆಣತಿ ಅದಾಳೆ.’ ಎನ್ನುತ್ತಾ ನನ್ನನ್ನ ಹಿಂಬಾಲಿಸಿ ಎಂಬುವಂತೆ ಮುಂದೆ ಮುಂದೆ ನಡೆದಳು. ಸ್ವಲ್ಪ ಹೊತ್ತು ನಡೆದ ಮೇಲೆ ಒಂದು ಪುಟ್ಟ ಜನತಾ ಮನೆಯಂತಿದ್ದ ಮನೆಯ ಮುಂದೆ ನಿಂತು ‘ಶಾಹೀನಕ್ಕ, ನಿನ್ನ ನೋಡೋಕೆ ಯಾರೋ ಬಂದಾರೆ…’ ಎಂದು ಕೂಗಿದಳು. ದಾದಾಪೀರ್‌ ಜೈಮನ್‌ ಬರೆಯುವ ಅಂಕಣ

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಆಳದ ದನಿ ತುಂಬಾ ಕ್ಷೀಣವಾಗಿರುತ್ತೆ..

ಪುಣ್ಯ ಕೊನೆಯ ಬಾರಿ ಮಾತನಾಡಿದ್ದು ಇದೆ ಒಂದು ವಾರದ ಕೆಳಗೆ. ಅವನ ಶಾಲಾ ವಾರ್ಷಿಕೋತ್ಸವದಲ್ಲಿ… ಈ ರಗಳೆಗಳೆಲ್ಲ ಶುರುವಾದದ್ದು ಸುರಭಿಯಿಂದಲೇ ಎನ್ನಬೇಕು. ಆರನೇ ತರಗತಿ ಓದುತ್ತಿದ್ದ ಸುರಭಿ, ಒಂದು ದಿನ ಶಾಲೆಯಿಂದ ಬಂದದ್ದೆ ಜೋರಾಗಿ ಅಳತೊಡಗಿದಳು. ‘ಅಣ್ಣ ಹುಡುಗಿ ತರ ಆಡ್ತಾನೆ ಅಂತ ಎಲ್ಲರು ನಂಗೆ ಹೆಣ್ಣಿಗನ ತಂಗಿ ಅಂತ ಆಡ್ಕತಾರೆ…ಕಾಡಿಸ್ತಾರೆ. ನಾಳೆಯಿಂದ ಶಾಲೆಗೇ ಹೋಗಲ್ಲ!’ ಎಂದು ರಂಪ ಮಾಡತೊಡಗಿದ್ದಳು. ಅಂದಿನಿಂದಲೇ ಪ್ರತಾಪ್ ಇವನನ್ನ ಸರಿ ಮಾಡಲು ಶುರುಮಾಡಿದ್ದು… ಪುಣ್ಯನ ದನಿ ಹುಡುಗಿಯ ದನಿಯನ್ನು ಹೋಲುತ್ತಿತ್ತು. ದಾದಾಪೀರ್‌ ಜೈಮನ್‌ ಬರೆಯುವ ʻಜಂಕ್ಷನ್‌ ಪಾಯಿಂಟ್‌ʼ ಅಂಕಣದ ಹೊಸ ಬರಹ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಬ್ಯಾಗಡಿ ಕವರಲ್ಲಿ ಮಡಸಿಟ್ಟಿದ್ದ ಸೀರೆಗಳಂತ ಕನಸು

ಕಟ್ರಗುಳ್ಳಿ ಕಲ್ಲು ಎಂದು ಯಮುನಿಯ ಬಾಯಲ್ಲಿ ನಾಮಕರಣ ಮಾಡಿಸಿಕೊಂಡಿದ್ದ ಟಾರು ರೋಡಿನ ಒತ್ತುವ ಹರಳುಗಳನ್ನು ಬರಿಗಾಲಲ್ಲಿ ತುಳಿಯುತ್ತ ಅಜ್ಜಿ ಮೊಮ್ಮಗಳಿಬ್ಬರು ಬಟ್ಟೆಯಂಗಡಿಗೆ ಕಾಲಿಟ್ಟರು. ಕಸಬರಿಗೆಯಲ್ಲಿ ಕಸವಡೆದು ಬಯಲುಸೀಮೆಯ ಮಳೆಯ ಕಂತ್ರಾಟ ಗೊತ್ತಿದ್ದ ಅಂಗಡಿಯ ಹುಡುಗ ಯಾವುದಕ್ಕೂ ಇರಲಿ ಎಂದು ಅಂಗಡಿ ಮುಂದಿನ ಬಯಲಿಗೆ ನಾಲ್ಕು ಚೊಂಬು ನೀರುಗ್ಗುವ ಶಾಸ್ತ್ರ ಮಾಡುತ್ತಿದ್ದ. ಶೇಟಿ ಲಕ್ಷ್ಮಿ ಫೋಟೋಗೆ ಊದಿನಕಡ್ಡಿ ಬೆಳಗಿ ಕೈಮುಗಿಯುವ ತರಾತುರಿಯಲ್ಲಿದ್ದವನು ಇವರನ್ನು ನೋಡಿ ಐದು ಮಿನಟ್ ಕೂತ್ಗಳ್ರಿ ಎಂದು ತನ್ನ ಪೂಜಾ ಸಿದ್ಧತೆಯನ್ನು ಮುಂದುವರೆಸಿದ. ಇವರು ಬೇರೆ ಆಯ್ಕೆಯೇ ಇಲ್ಲದಂತೆ ಕಾಯುತ್ತ ನಿಂತರು.
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ