Advertisement

Tag: ಪ್ರಬಂಧ

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ದೇವರೇ ಬೆನ್ನಟ್ಟಿ ಬಂದಾಗ!

ಅದ್ಯಾವಾಗ ಹರ್ಷ ಬಾಗಿಲು ದಾಟಿದ ಸದ್ದಾಯಿತೋ ಕೋಮಲ ನಿಧಾನವಾಗಿ ಕಣ್ಣು ಬಿಟ್ಟಿದ್ದಾನೆ. ಬಿಟ್ಟವನು ತಾನು ಸಿನಿಮಾ ನೋಡಲು ಹೋಗುವುದೋ ಬೇಡವೋ ಎಂದು ಯೋಚಿಸುತ್ತಿರುವಾಗಲೇ ಫಕ್ಕನೆ ಕರೆಂಟ್ ಹೋಗಿದೆ! ಕೂಡಲೇ ಕೋಮಲ “ನಾನೂ ಜೊತೆಗೆ ಬರುತ್ತೇನೆ” ಎಂದು ಹರ್ಷನಿಗೆ ಹೇಳುವ ಸಲುವಾಗಿ “ಹರ್ಷ., ಹರ್ಷ.,” ಎಂದಿದ್ದಾನೆ. ನೋಡಿದರೆ ಅದಾಗಲೇ ಹರ್ಷ ಜಾಗ ಖಾಲಿ ಮಾಡಿ ಆಗಿದೆ. ಒಡನೆಯೇ ಕೋಮಲನಿಗೆ ಇಡೀ ಕಟ್ಟಡದಲ್ಲಿ ಇರುವುದು ತಾನೊಬ್ಬನೇ ಎಂಬ ಹೊಳವು ಬಂದು ದಿಗಿಲಾಗಿದೆ.
ಪೂರ್ಣೇಶ್‌ ಮತ್ತಾವರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಸರ್ಟಿಫಿಕೇಟ್‌ ದಾತರು

ಕೆಲವರಿಗೆ ಹೆಚ್ಚು ಹೆಚ್ಚು ಸರ್ಟಿಫಿಕೇಟ್‌ಗಳನ್ನು ನೀಡುವ ಆಸೆಯಿರುತ್ತದೆ. ಇಂಥವರು ತಮ್ಮ ಪ್ರಸಿದ್ಧಿಯನ್ನು ತಾವೇ ಹಬ್ಬಿಸುತ್ತಾರೆ. ಇಂಥವರು ನನಗೆ ಸ್ವಲ್ಪಕಾಲ ಗಂಟುಬಿದ್ದಿದ್ದರು. ನನ್ನಿಂದ ಸಾಕಷ್ಟು ಉಪಕೃತರೂ ಆಗಿದ್ದರು. ಉತ್ಸವ ಮೂರ್ತಿಯ ಸ್ವಭಾವದ ವ್ಯಕ್ತಿತ್ವ. ನಾನು ಎಲ್ಲಿಗೇ ಹೊರಡಲಿ, ಯಾವ ಕಾರ್ಯಕ್ಕೇ ಹೊರಡಲಿ, ಆಯ್ತು ಅಲ್ಲಿ ನನಗೆ ಇಂಥವರು ಪರಿಚಯ, ನನ್ನ ಬಗ್ಗೆ ಗೌರವವಿದೆ, ನನ್ನಿಂದ ಒಂದು ಸರ್ಟಿಫಿಕೇಟ್‌ ತಗೊಂಡು ಹೋಗು ಎನ್ನುತ್ತಿದ್ದರು. ಹೌದು ಅವರ ಇಂಗ್ಲಿಷ್‌ ತುಂಬಾ ಚೆನ್ನಾಗಿತ್ತು. ಸರ್ಟಿಫಿಕೇಟ್‌ ಬರೆದುಕೊಡುವ ಕಾಗದ ಕೂಡ ಚಿನ್ನದ ಬಣ್ಣದಿಂದ ಹೊಳೆಯುತ್ತಿತ್ತು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹತ್ತನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ