Advertisement

Tag: ಪ್ರಬಂಧ

ಹೋರಿಕರುವಿನ ವಿದಾಯ ಪ್ರಸಂಗ

ಇಂದು ಬೇಸಾಯ ಮಾಡುವುದನ್ನು ಎಲ್ಲರೂ ನಿಲ್ಲಿಸಿದ್ದರಿಂದ ಹೋರಿ ಯಾರಿಗೂಬೇಡ. ಗದ್ದೆ ಮಾಡುವವರೂ ಯಂತ್ರಕ್ಕೆ ಶರಣಾಗಿದ್ದಾರೆ. ಗೊಬ್ಬರಕ್ಕಾಗಿ ಸಾಕುವುದೂ ವ್ಯರ್ಥ. ಏಕೆಂದರೆ, ಇರುವ ಹಸುಗಳ ಗೊಬ್ಬರವನ್ನೇ ತೆಗೆಯಲು ಕೂಲಿಯಾಳುಗಳ ಕೊರತೆ ಇದೆ. ಕೂಲಿಯವರು ಸಿಕ್ಕಿದರೂ ಸಂಬಳ ಕೊಡಲು ಪೂರೈಸಬೇಕಲ್ಲ? ವೆಚ್ಚ ಹೆಚ್ಚಾಗಿ ಉಳಿತಾಯ ಇಲ್ಲದ ಹೋರಿ ಸಾಕುವ ಕೆಲಸ ಯಾರಿಗೆ ಬೇಕು? ಎಲ್ಲ ಹೈನುಗಾರರ ಮನೆಗೆ ಹೋಗಿ ನೋಡಿದರೆ ಅಲ್ಲಿ ಹಸು ಮತ್ತು ಹೆಣ್ಣು ಕರುಗಳು ಮಾತ್ರ ಇರುತ್ತವೆ!  ಹಾಗಾದರೆ, ಅವರಲ್ಲಿ ಗಂಡು ಕರು ಹುಟ್ಟುವುದೇ ಇಲ್ಲವೇ? ಹುಟ್ಟಿದರೆ ಅವರು ಏನು ಮಾಡುತ್ತಾರೆ ? ಸಹನಾ ಕಾಂತಬೈಲು ಅವರು ಬರೆದ ಆನೆ ಸಾಕಲು ಹೊರಟವಳು ಪುಸ್ತಕದ  ಕೆಲವು ಅಧ್ಯಾಯಗಳು ಪ್ರತೀ ಮಂಗಳವಾರ ಪ್ರಕಟವಾಗಲಿದೆ. ಮೊದಲ ಅಧ್ಯಾಯ ಇಲ್ಲಿದೆ. 

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ