Advertisement

Tag: ಪ್ರವಾಸ

ಪ್ರಾಣಿ ಒಡನಾಟದಲ್ಲಿನ ಮನುಷ್ಯರ ಸಂಕಟ: ಡಾ. ವಿನತೆ ಶರ್ಮ ಬರೆಯುವ ಅಂಕಣ

ಕಾಡಿನ ರಸ್ತೆಯಲ್ಲಿ ಹೋಗುವಾಗ ವಾಹನ ನಿಲ್ಲಿಸಬೇಡಿ, ಪ್ರಾಣಿಗಳಿಗೆ ಆಹಾರ ಕೊಡಬಾರದು ಎಂದು ದಪ್ಪ ಅಕ್ಷರಗಳಲ್ಲಿ ಬರೆದಿದ್ದರೂ ಅಲ್ಲಲ್ಲಿ ಜನ ವಾಹನಗಳನ್ನು ನಿಲ್ಲಿಸಿದ್ದರು. ಪ್ರಾಣಿಗಳು ಕಾಣಿಸುತ್ತಿವೆ ಎಂದು ಖುಷಿ. ಹತ್ತಿರ ಬರುವ ಮಂಗಗಳಿಗೆ ಹಣ್ಣು, ಸ್ನ್ಯಾಕ್ಸ್ ಕೊಡುವುದು ಮಾಡುತ್ತಿದ್ದರು. ಸ್ವಲ್ಪ ದೂರದಲ್ಲಿ ಇದ್ದ, ಮಂಗಗಳನ್ನೇ ನೋಡುತ್ತಿದ್ದ ಜಿಂಕೆಗಳನ್ನು ಕರೆಯುವುದು ನಡೆದಿತ್ತು. ಇಷ್ಟಾದ ನಂತರ ಹೀಗೆಯೆ ಹಣ್ಣು ತೋರಿಸಿ ಕರೆದರೆ ಆನೆ, ಕಾಡೆಮ್ಮೆ ಕೂಡ ಬರಬಹುದು ಎನ್ನಿಸಿತು. ಅವುಗಳ ಸ್ವಾಭಾವಿಕ ಆಹಾರ ಪ್ರದೇಶಗಳನ್ನು ಈಗ ಲಂಟಾನಾ ಪೊದೆಗಳು ಆಕ್ರಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕೀರ್‌ಗಂಗಾ ದಾರಿಯಲ್ಲಿ ಸಿಕ್ಕನೊಬ್ಬ ಸಂತ: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ಕಾಲು ಸರಿಯಿಲ್ಲದ ಬಾಣಸಿಗನೊಬ್ಬ ಕಷ್ಟಪಟ್ಟು ಮೇಲೇರಿ ಬಂದು ಅಡುಗೆ ಮಾಡಿದ್ದ. ಆತನ ಬದುಕಿನ ಕಷ್ಟಗಳು ಏನಿದ್ದವೋ? ಸದಾ ಚಡಪಡಿಸುತ್ತಲೇ ಇರುತ್ತಿದ್ದ. ಹಿಮಾಚಲ, ಮೇಘಾಲಯದಲ್ಲಿ ಹಬ್ಬುತ್ತಿರುವ ಗಾಂಜಾ ವಾಸನೆ ಇಲ್ಲಿಯೂ ನನ್ನ ಮೂಗಿಗೆ ಬಡಿದಿತ್ತು!! ರಾತ್ರಿಯಾಗುತ್ತಲೇ ಆಗಸದ ಬೀದಿಯಲ್ಲಿ ತಾರಾ ಮೆರವಣಿಗೆ. ಎಲ್ಲೂ ಜಾಗವಿಲ್ಲದಂತೆ ಹಾಸಿದ್ದ ನಕ್ಷತ್ರ ಚಾಪೆ! ಕೌತುಕಮಯ ನೀಲಾಕಾಶ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More

ಸಾಟಿಯಿಲ್ಲದ ಬ್ಯೂಟಿ ನಿನ್ನದು, ಭೂತಾನ್!: ಸುಕನ್ಯಾ ಕನಾರಳ್ಳಿ ಅಂಕಣ

ಭೂತಾನಿಯ ಮಂದಿಯನ್ನು ನಮ್ಮ ಗೈಡ್ ತಂಡದ ಮೂಲಕ ಸಾರಂಶೀಕರಿಸಬಹುದು ಅಂತನ್ನಿಸುತ್ತದೆ. ನಿರಾಳ ಮುಖ; ಮೆದುಮಾತು; ಸ್ತೂಪ ಕಂಡಾಗೆಲ್ಲ ಮಣಮಣ ಎಂದು ಹೇಳಿಕೊಳ್ಳುವ ಪ್ರಾರ್ಥನೆ; ಅಪಾರವಾದ ರಾಜಪ್ರೇಮ; ನಮ್ಮ ಬ್ಯಾಗುಗಳನ್ನೆಲ್ಲ ಹೊತ್ತು ಸೂಕ್ಷ್ಮವಾಗಿ ಗಮನಿಸುತ್ತಲೇ ಹಿಂದೆಯಿಂದ ಬರುವ ಆದರೆ ಸ್ವಲ್ಪ ದಣಿವಾದರೂ ದುತ್ತನೆ ಎದುರಿಗೆ ಅವತರಿಸಿ, ‘ನೀರು ಬೇಕಾ? ತಿನ್ನಲು ಏನಾದರೂ ಬೇಕಾ?’ ಎಂದು ಕೇಳುವ ಕರುಣೆ ತುಂಬಿದ ಕಣ್ಣುಗಳು… ಇತ್ಯಾದಿ ವೃತ್ತಿಪರತೆಯನ್ನೂ ಮೀರಿದ ಜನಪ್ರೀತಿ ಅಂತನ್ನಿಸಿತ್ತು. ಹೇಳಿಕೇಳಿದ್ದೆಲ್ಲದಕ್ಕೂ, ‘ಓಕೆ ಲಾ…’ ಎಂದು ಹೇಳುವ ಲಲಲಾ ರೀತಿ ಭೂತಾನ್ ಬಿಟ್ಟರೂ ನಮ್ಮನ್ನು ಹಿಂಬಾಲಿಸಿತ್ತು.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಎಂಟನೆಯ ಬರಹ

Read More

ರೇಗಿಸ್ತಾನದಲ್ಲಿ ಉರಿಯುವ ಬಣ್ಣಗಳು: ಹೇಮಾ ನಾಯಕ ಪ್ರವಾಸ ಕಥನ

ಶಾಮ ಸುಮ್ಮನೆ ಮಾತನಾಡುವವನಲ್ಲ, ಹೇಳಿದ್ದನ್ನು ಕೇಳಿಸಿಕೊಂಡು ಆಳವಾಗಿ ವಿಚಾರ ಮಾಡಿ, ಎದುರಿಗೆ ಇರುವವರಿಗೆ ಆಸಕ್ತಿ ಇದ್ದರೆ ಮಾತ್ರ ವಿಷಯ ಹಂಚಿಕೊಳ್ಳುವವನು. ನಸುಕಿನ ನಾಲ್ಕಕ್ಕೇ ಎಬ್ಬಿಸಿ ನಮ್ಮನ್ನು ಗಾಡಿಯಲ್ಲಿ ಹತ್ತಿಸಿಕೊಂಡು ಹೊರಟ. ಧೋಲಿಯಾದಿಂದ ಹೊರಟು ಪೋಖ್ರನ್ ತಹಶೀಲಿನ ಹುಲ್ಲುಗಾವಲುಗಳ ಕಡೆ ಹೊರಟೆವು. ದಾರಿಯುದ್ದಕ್ಕೂ ಮೌನ, ಚಳಿಯಲ್ಲಿ ಬಾಯಿ ತೆರೆಯಲೂ ಆಗದೇ ಹಲ್ಲು ಕಡಿಯುತ್ತ ಕೂರಬೇಕಾಯಿತು. ಹೋಗಿ ತಲುಪಿದ್ದು ಎಲ್ಲಿ ಎಂದು ಗುರುತಿಸಲಾಗದಂತ ಒಣ ಕಡ್ಡಿಗಳ ನಡುವೆ.
ಹೇಮಾ ನಾಯಕ ಬರೆದ ಪ್ರವಾಸ ಕಥನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ