Advertisement

Tag: ಬದುಕು

ಬದುಕಿನ ಬಣ್ಣಗಳು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಆದರೆ ಈ ಸಮುದ್ರವನ್ನು ಬೊಗಸೆಯಲ್ಲಿ ತುಂಬಿಕೊಳ್ಳಲು ಸಾಧ್ಯವಿಲ್ಲ ಅನ್ನುವ ಅರಿವು ನನಗೆ ಯಾವತ್ತೋ ಆಗಬೇಕಿತ್ತು. ಸುಮ್ಮನೆ ದಡದಲ್ಲಿ ಕಾಯುತ್ತಾ ಕುಳಿತೆ. ಅವಳಿಗೆ ಕನಸಿತ್ತು ಸ್ಪಷ್ಟವಾದ ಗುರಿಯಿತ್ತು. ತನ್ನ ಸುತ್ತ ಇರುವ ಮಿತಿಗಳನ್ನು ಮೀರುವ ತುಡಿತವಿತ್ತು. ಅವಳ ಪಾತ್ರ ವಿಶಾಲವಿತ್ತು. ನಾನು ಒಡ್ಡಿದ ಬೊಗಸೆಗೆ ಹೆಚ್ಚು ಹೊತ್ತು ನಿಲ್ಲಲಾರಲು ಅನ್ನುವುದು ಗೊತ್ತಾಗಬೇಕಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎಂಟನೆಯ ಬರಹ

Read More

ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ

ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ

Read More

ಇದ್ದಷ್ಟು ಇರಲಿ…: ಎಸ್ ನಾಗಶ್ರೀ ಅಜಯ್ ಅಂಕಣ

ತೀರ ಅತಿಯೆನಿಸುವಷ್ಟು ಅಲ್ಲದಿದ್ದರೂ ನಾವೆಲ್ಲರೂ ಒಂದಿಲ್ಲೊಮ್ಮೆ ಈಗಿರುವುದೇ ಚೆಂದ ಎಂದುಕೊಳ್ಳಲು ಆಸೆಪಟ್ಟವರೇ. ಬಡತನ, ಅನಾರೋಗ್ಯ, ಅಜ್ಞಾನಗಳನ್ನು ರಮ್ಯವಾಗಿ ಚಿತ್ರಿಸುತ್ತಾ ಪರಿಶ್ರಮದಿಂದ ಮೇಲೇರಿದವರ ಸಾಧನೆಯನ್ನು ಕಡೆಗಣಿಸಿ ಮಾತನಾಡುತ್ತಾ ಹುಸಿ ಆನಂದ ಹೊಂದಿದವರೇ. ಬಹಳಷ್ಟು ಸಲ ಎದುರಿನವರ ಮೂಗಿನ ನೇರಕ್ಕೆ ಮಾತನಾಡಿ ‘ಒಳ್ಳೆಯವರಾಗಿ’ ಕಾಣುವ ಆಸೆಯೇ ಡೋಂಗಿಗಳ ಬಡಾಯಿಗೆ ಜೈಹೋ ಎನ್ನುವಂತೆ ಮಾಡಿರುತ್ತದೆ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ ಬರಹ ನಿಮ್ಮ ಓದಿಗೆ

Read More

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

Read More

ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂದರೆ ಒಂದು ಬಿಂದುವಿನಿಂದ ಇನ್ನೊಂದು ಬಿಂದುವಿಗೆ ಸುಲಭವಾಗಿ ಸಾಗುವ ಸರಳರೇಖೆಯಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಬದುಕಿನಲ್ಲಿ ಸಂತಸದ ಕ್ಷಣ ಬರುತ್ತದೆ. ಅತ್ಯಂತ ದುಃಖದ ಗಳಿಗೆಯೂ ಬರುತ್ತದೆ. ಅತ್ಯುತ್ಕರ್ಷದ ಬೆನ್ನಿಗೇ ಮಹಾಪತನವೂ ಸಂಭವಿಸುತ್ತದೆ. ಬದುಕಿನಲ್ಲಿ ಏರಿಳಿತ ಎನ್ನುವುದು ಅತ್ಯಂತ ಸಹಜವಾದ ವಿದ್ಯಮಾನ. ಇಂತಹ ಸಂದರ್ಭಗಳಲ್ಲಿ ನಮ್ಮ ನೆರವಿಗೆ ಬರುವುದು ಪ್ರಾಥಮಿಕ ಶಾಲೆಯಲ್ಲಿ ಕುಳಿತು ಕಲಿತ ಸರಳ ಗಣಿತ.
ಬದುಕಿನ ಲೆಕ್ಕಾಚಾರದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ