Advertisement

Tag: ಬರಹ

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಒಂದು ಸುಳ್ಳು ಒಂದು ಸತ್ಯ: ಆಶಾ ಜಗದೀಶ್ ಅಂಕಣ

ಬಹುಶಃ ಕತೆಗಳ ಅವಶ್ಯಕತೆಯಿಲ್ಲ ಆ ವನಸಿರಿಗೆ. ಜೀವಂತ ಕತೆ ಹೊತ್ತು ಓಡಾಡುವ ಅದೆಷ್ಟು ಜನ ಇಲ್ಲೊಮ್ಮೆ ಬಂದು ತಮ್ಮ ಜೋಡಿ ಹೆಜ್ಜೆಗಳ ಗುರುತು ಮಾಡಿ ಹೋಗಿದ್ದರೋ… ಕತೆಗಳು ನಮಗೆ ಬೇಕು. ನಮ್ಮೊಳಗಿನ ಕತೆಗಿಂತ ಭಿನ್ನವಾದ ಕತೆಯ ಕುರಿತಾದ ಹುಚ್ಚು ಕೂತೂಹಲವನ್ನ ತಣಿಸಿಕೊಳ್ಳಲಿಕ್ಕಾಗಿ… ಸುಳ್ಳೇ ಆದರೂ ನಂಬಲು ಸಿದ್ಧರಿರುತ್ತೇವಲ್ಲ ಹೇಗಿದ್ದರೂ… ಕತೆ ಕಟ್ಟುವುದರಲ್ಲಿ ನಿಸ್ಸೀಮರು ನಾವು.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಜಾರುವ ಜಡೆಯ ಹುಡುಗಿಯ ಪಾತ್ರ!: ಮಾರುತಿ ಗೋಪಿಕುಂಟೆ ಸರಣಿ

ಈ ಸಲ ತಲೆಗೆ ಜೋಡಿಸಿಕಟ್ಟಿದ್ದ ಜಡೆಕುಚ್ಚು ಬಿಚ್ಚಿಕೊಳ್ಳುವ ಸಂಭವವೆ ಜಾಸ್ತಿ ಇತ್ತು. ಹೇಗೊ ನೃತ್ಯವಂತೂ ಮುಗಿದಿತ್ತು. ಆದರೆ ನಂತರದ್ದು ಇನ್ನೊಂದು ಸಂಕಟ ದೃಶ್ಯ ಮುಂದುವರಿದಿತ್ತು. ಜಡೆ ಬೀಳಬಾರದು ಬಿದ್ದರೆ ಅಸಹ್ಯವಾಗಿ ಕಾಣುತ್ತದೆ ಎಂಬ ಭಯದಿಂದಲೆ ನಿಂತ ಸ್ಥಳದಲ್ಲಿಯೇ ನಿಂತು ಸಂಭಾಷಣೆ ಹೇಳುವುದಕ್ಕೆ ಪ್ರಾರಂಭಿಸಿದೆ. ನನ್ನ ಎದುರಿನ ಪಾತ್ರಧಾರಿ ಈ ಕಡೆಯಿಂದ ಆ ಕಡೆಯಿಂದ ಓಡಾಡುತ್ತ ಸಂಭಾಷಿಸುತ್ತಿದ್ದಾನೆ. ಆತ ನೀನು ಓಡಾಡುತ್ತ ಸಂಭಾಷಿಸು ಎಂಬ ಕಣ್ಸನ್ನೆ ನೀಡುತ್ತಿದ್ದಾನೆ. ಆದರೆ ನನ್ನ ಕಷ್ಟ ಅವನಿಗೆ ಅರ್ಥವಾಗುತ್ತಿಲ್ಲ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಒಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ