Advertisement

Tag: ಮಕ್ಕಳ ಕತೆ

ಬೀಜಾವೃತ ಅಪಘಾತ ವೃತ್ತಾಂತ!: ಕ್ಷಮಾ ವಿ ಭಾನುಪ್ರಕಾಶ್ ಕಥಾ ಸರಣಿ

ವಿಭಾ, “ಅಲ್ಲ ಬಾವ, ಬೀಜಗಳು ಇಲ್ಲದ ಕಲ್ಲಂಗಡಿ, ದ್ರಾಕ್ಷಿ ಇವೆಲ್ಲಾ ತಿನ್ನಕ್ಕೇನೋ ಚೆನ್ನಾಗಿರತ್ತೆ. ಆದ್ರೆ, ಒಂದು ಸಲ ಹಣ್ಣು ಬಿಟ್ರೆ, ಆ ಗಿಡದ ಕಥೆ ಮುಗೀತಾ? ಬೀಜಗಳೇ ಇಲ್ದೇ ಆ ಗಿಡ ಮರಿ ಹಾಕೋದು ಹೇಗೆ? ಅಂದ್ರೆ, ಹೊಸ ಗಿಡ ಬೆಳೆಯೋದು ಹೇಗೆ? ಪ್ರಕೃತಿ ಇಂಥಾ ಕೆಲ್ಸ ಯಾಕೆ ಮಾಡ್ತು ಅಂತ ಆಶ್ಚರ್ಯ ಆಗತ್ತೆ” ಎಂದಳು. ಆಗ ಪ್ರಕಾಶ್, “ನೀನು ಹೇಳಿದ್ದು ನಿಜವೇ ವಿಭಾ. ಯಾವುದೇ ಪ್ರಭೇದವಾಗ್ಲೀ, ತನ್ನ ಉಳಿವಿನ ಕಡೆ, ತನ್ನ ಸಂತತಿಯನ್ನ ಬೆಳೆಸೋ ಕಡೆ ಸಹಜವಾಗಿಯೇ ಗಮನ ಇರತ್ತೆ. ಪ್ರತೀ ಜೀವಿಯ, ಪ್ರತೀ ‘ಸ್ಪೀಶೀ’ ಅಂದ್ರೆ ಪ್ರಭೇದದ ಮೂಲಭೂತ ಕೆಲಸ ಅದು. ಆದ್ರೆ, ನಿಸರ್ಗದಲ್ಲಿ ಕೂಡ ಕೆಲವೊಮ್ಮೆ ‘ಆಕ್ಸಿಡೆಂಟ್’ ಆಗತ್ತೆ!” ಎಂದ.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಹದಿನಾರನೆಯ ಕತೆ

Read More

 ಸುಯ್ಯೆಂದು ಹಾಡುವ ಸೊಳ್ಳೆಯ ಸುದ್ದಿ: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

ಪ್ರಕಾಶ್, ತನ್ನ ಪುಟ್ಟ ನಾದಿನಿಯರನ್ನು ಗೋಳು ಹೊಯ್ದುಕೊಳ್ಳುವ ಸಲುವಾಗಿ “ನಿಮಗೆ ಗೊತ್ತೇನ್ರೋ? ಎಲ್ಲಾ ಬಗೆಯ ಜೀವಿಗಳಲ್ಲೂ ಗಂಡುಗಳು ತುಂಬಾ ಪಾಪದವು. ಸೇಮ್ ನನ್ನ ಥರಾನೇ! ಸೊಳ್ಳೆಗಳಲ್ಲೂ ಅಷ್ಟೇ!” ಅಂತ ನಾಟಕ ಮಾಡಿ ನಗಿಸಿದ. ಆಮೇಲೆ ಸೊಳ್ಳೆಗಳ ಬಗ್ಗೆ ವಿವರಿಸುತ್ತಾ “ಆದ್ರೆ ಇದು ತಮಾಷೆಯಲ್ಲ! ಗಂಡು ಸೊಳ್ಳೆಗಳು ನಮ್ಮನ್ನು ಕಚ್ಚಲ್ಲ; ಅವು ಹೂವುಗಳ ಮಕರಂದದಂತಹ ಆಹಾರದ ಮೇಲೆ ಡಿಪೆಂಡ್ ಆಗಿರತ್ವೆ; ಹೆಣ್ಣು ಸೊಳ್ಳೆಗಳು ಪಾಪ, ಮೊಟ್ಟೆ ಇಡೋಕೆ, ಮರಿಗಳಿಗೆ ಶಕ್ತಿ ನೀಡೋಕೆ ನಮ್ಮ ರಕ್ತದಲ್ಲಿರುವ ಪ್ರೋಟೀನ್ ಮೇಲೆ ಅವಲಂಬಿತ. ಅದಕ್ಕಾಗಿ ಅವು ಕಚ್ಚಲೇಬೇಕು, ರಕ್ತ ಹೀರಲೇಬೇಕು, ನಮ್ಮ ಕೈಯಲ್ಲಿ ಸಿಕ್ಕಿ ಸಾಯಲೂ ಬೇಕು”
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಹನ್ನೆರಡನೆಯ ಕತೆ

Read More

ಕ್ಷಮಾ ವಿ. ಭಾನುಪ್ರಕಾಶ್‌ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ

“ನಮ್ಮ ತೋಟದಲ್ಲಿ ಎಲ್ಲೆಡೆಯೂ ಕಾಣುವ ಹನಿನೀರಾವರಿ ಪೈಪುಗಳಂತೆ ಈ ಜಲವಾಹಕ ಮತ್ತು ಆಹಾರವಾಹಕ ಕೊಳವೆಗಳೂ, ಸಸ್ಯದ ತುಂಬೆಲ್ಲಾ ಇರತ್ವೆ ಅಲ್ವಾ? ತಮ್ಮ ಪಾಡಿಗೆ ತಮ್ಮ ಕೆಲಸ ಮಾಡುತ್ತಾ ಗಿಡಮರಗಳನ್ನ ಚೆನ್ನಾಗಿಡತ್ವೆ” ಎಂದಳು ನಗುತ್ತಾ. “ಹೌದು ಕಣೋ, ಹಾಗೇನೇ. ಇಲ್ಲಿ ನೋಡು, ಈ ಎಲೆಯನ್ನ!” ಎಂದು ತನ್ನ ಅಂಗಳದಲ್ಲೇ ಸೊಂಪಾಗಿ ಬೆಳೆದಿದ್ದ ಮಲ್ಲಿಗೆಯ ಬಳ್ಳಿಯಿಂದ ಎಲೆಯೊಂದನ್ನು ತೋರಿಸುತ್ತಾ! “ಈ ಎಲೆಯಲ್ಲಿ ಆಚೀಚೆ ಕಾಣುವ ಗೆರೆಗಳನ್ನ ಗಮನಿಸು; ಅದೇ ರೀತಿ ಇಲ್ಲಿ ಅಂಗಳದಲ್ಲಿರುವ ಎಲ್ಲಾ ಗಿಡಗಳನ್ನೂ ಗಮನಿಸು. ಎಲ್ಲಾ ಎಲೆಗಳಲ್ಲೂ ಹೀಗೆ ಗೆರೆಗಳು ಕಾಣಿಸುತ್ತಲ್ವಾ? ಅದೇ ಈ ಜಲವಾಹಕ-ಆಹಾರವಾಹಕಗಳ ಕಂತೆ.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

“ಏನು ಚಂದಮಾಮ ಕಥೆ ಹೇಳ್ತಿದೀಯಾ?”: ವಿನಾಯಕ ಅರಳಸುರಳಿ ಅಂಕಣ

ಈ ಅವಾಂತರಗಳೆಲ್ಲಾ ಏನೇ ಆದರೂ ಬರೆಯಬೇಕು ಎಂಬ ಸ್ವಸ್ಥ ಹವ್ಯಾಸವನ್ನು ಮೊಟ್ಟಮೊದಲ ಬಾರಿಗೆ ಅದೆಷ್ಟೋ ಮಕ್ಕಳ ಎದೆಯಲ್ಲಿ ಬಿತ್ತಿದ, ಕೈ ಹಿಡಿದು ಬರೆಸಿದ, ಬರೆದಿದ್ದಕ್ಕೊಂದು ವೇದಿಕೆ ಕಲ್ಪಿಸಿದ ಶ್ರೇಯ ಈ ಎಲ್ಲ ಮಕ್ಕಳ ಪತ್ರಿಕೆಗಳಿಗೇ ಸಲ್ಲಬೇಕು. ಅವರಿಗೆ ಇಷ್ಟವಾದ ಪಾತ್ರಗಳನ್ನು ಸೃಷ್ಟಿಸಿ ಅವುಗಳ ಮುಖಾಂತರ ವಿನೋದಮಯವಾದ ಕಥೆಗಳನ್ನು ಹೆಣೆದು, ಅದರೊಳಗೇ ಕಾಣದಂತೆ ನೀತಿಗಳನ್ನು ಬೆರೆಸಿ ಉಣಬಡಿಸುತ್ತಿದ್ದ ಈ ಪತ್ರಿಕೆಗಳು ಓದಿದವರ ಮನಸ್ಸಿನಲ್ಲಿ ಇಂದಿಗೂ ಉಳಿದಿವೆ.
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”

Read More

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ