Advertisement

Tag: ಮಳೆ

ನಮ್ಮೂರ ಮಳೆಗಾಲದ ರಸದೌತಣ: ಭವ್ಯ ಟಿ.ಎಸ್.‌ ಬರಹ

ವಿದ್ಯುತ್ ಇಲ್ಲದ ರಾತ್ರಿಗಳು, ನೆಟ್ವರ್ಕ್ ಇಲ್ಲದೆ ಲೋಕದ ಸಂಪರ್ಕ ಕಡಿದುಕೊಂಡ ಹಗಲುಗಳು. ಇದ್ದಕ್ಕಿದ್ದಂತೆ ಬೀಸುವ ಬಿರುಗಾಳಿ, ಉರುಳಿ ಬೀಳುವ ಮರಗಳು. ಕುಸಿದು ಬೀಳುವ ಗುಡ್ಡ. ಹೀಗೆ ಮಳೆ ಎಂದರೆ ಸಂತಸ, ಸೌಂದರ್ಯಗಳ ಜೊತೆಗೆ ಭಯಾನಕತೆಗಳ ಸಂಮಿಶ್ರಣ. ಕೆಲವೊಮ್ಮೆ ಈ ಮಳೆ ಜಿಗುಪ್ಸೆ ಬೇಸರವೆನಿಸಿದ್ದೂ ಇದೆ. ಆದರೆ‌‌‌ ಮತ್ತೆ ಮತ್ತೆ ಈ ಮನ ಪ್ರತಿ ವರ್ಷದ ವರ್ಷಧಾರೆಗೆ ಹಪಹಪಿಸುತ್ತದೆ.
ಮಲೆನಾಡಿನ ಮಳೆಯ ದಿನಗಳ ಕುರಿತು ಭವ್ಯ ಟಿ.ಎಸ್‌. ಬರಹ ನಿಮ್ಮ ಓದಿಗೆ

Read More

ಹೊಳೆಸಾಲಿಗೆ ಕರೆಂಟ್ ಶಾಕ್: ಸುಧಾ ಆಡುಕಳ ಅಂಕಣ

ಇದಾಗಿ ವಾರದೊಳಗೆ ನಡುರಾತ್ರಿಯಲ್ಲಿ ಪಕ್ಕದ ಮನೆಯಿಂದ ಅರಚಿದ ಶಬ್ದಕ್ಕೆ ನೀಲಿಯ ಮನೆಯವರೆಲ್ಲರೂ ಎಚ್ಚೆತ್ತರು. ಅಕ್ರಮವಾಗಿ ಎಳೆದ ಕರೆಂಟು ವೈಯರಿನ ಹೊರಗಿನ ಕವಚವನ್ನು ಇಲಿಯೊಂದು ಕತ್ತರಿಸಿಬಿಟ್ಟಿದ್ದರಿಂದ ನಡುರಾತ್ರಿಯಲ್ಲಿ ಸ್ವಿಚ್ ಹಾಕಲು ಕೈಹಾಕಿದ ನಾಗಿ ಶಾಕ್ ಹೊಡೆದು ಮಾರುದೂರ ಹೋಗಿ ಬಿದ್ದಿದ್ದಳು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಬದುಕಿನ ವರ್ಷಕಾಲದ ವಸಂತೋತ್ಸವ: ಸುಮಾವೀಣಾ ಸರಣಿ

ಇಂಥ ಮಳೆಯಲ್ಲಿ ಶಾಲೆಗೆ ಹೋಗುವುದೇ ದೊಡ್ಡ ಸಮಸ್ಯೆ. ಎಂಥ ಚಿಕ್ಕ ಹೊಂಡವಿದ್ದರೂ ಸರಿ ಪೇಪರಿನ ದೋಣಿಗಳನ್ನು ತೇಲಿಬಿಡುವ ನಗರದ ಹುಡುಗರ ಆಟ ಒಂದೆಡೆಯಾದರೆ ಬೆಟ್ಟ ಗುಡ್ಡಗಳ ತಪ್ಪಲಲ್ಲಿ ಹಳ್ಳ ತೋಡಿನ ಪಕ್ಕದಲ್ಲಿ ತೋಟದ ಮನೆಗಳವರ ಕಷ್ಟ ಹೇಳತೀರದು. ರಭಸದ ಮಳೆ ಬಂದರೆ ಒಂದೋ ಗುಡ್ಡ ಕುಸಿಯುವ ಭೀತಿ. ಇಲ್ಲವೇ ಮಳೆ ನೀರು ಮನೆಗೆ ನುಗ್ಗುವ ಭೀತಿ ಸ್ವಲ್ಪ ಮಳೆ ಬಂದರೂ ಸೇತುವೆಗಳು ತೇಲುವ ಹಾಗಾಗುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಮಳೆರಾಯ ಬಂದ ಮಲ್ಲೆಹೂವು ತಂದ: ಚಂದ್ರಮತಿ ಸೋಂದಾ ಸರಣಿ

ಚೌತಿಹಬ್ಬ ಮುಗಿಯಿತು ಎಂದರೆ ಮಳೆಗೆ ತುಸು ಬಿಡುಗಟ್ಟು. ಎಲ್ಲಕಡೆ ಬಣ್ಣಬಣ್ಣದ ಚಿಟ್ಟೆಗಳ ಮೇಳ. ನಮ್ಮೊಳಗೆ ಅವುಗಳನ್ನು ಹಿಡಿಯುವ ಸ್ಪರ್ಧೆ. ಇನ್ನೇನು ಕೈಗೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮಾಯ. ಆಗ ಮರಳಿ ಯತ್ನವ ಮಾಡು. ಅವು ಅಷ್ಟು ಸುಲಭವಾಗಿ ನಮ್ಮ ಕೈಗೆ ಸಿಗುತ್ತಿರಲಿಲ್ಲ. ಇನ್ನೊಂದು ಬಗೆಯ ಚಿಟ್ಟೆಗಳು ಹಾರಾಡುತ್ತಿದ್ದವು. ಅವು ನಮಗೆ ಆಕರ್ಷಕವಾಗಿ ಕಾಣಿಸುತ್ತಿರಲಿಲ್ಲ. ನಾವು ಅವನ್ನು ಕರೆಯುತ್ತಿದ್ದದು ವಿಮಾನ ಎಂದು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಐದನೆಯ ಕಂತಿನಲ್ಲಿ ಆಗಿನ ಮಳೆ ದಿನಗಳ ಕುರಿತ ಬರಹ

Read More

ಸವಾರಿ ಹೊರಟಳು ಮಳೆ ಮಹಾರಾಜ್ಞಿ

ಅಲ್ಲಿಯವರೆಗೆ ಹೂವುಗಳೆಲ್ಲ ಮಳೆಮಾಯಿಯನ್ನೇ ಭಜಿಸುತ್ತ, ಮಳೆಗಾಲದಲ್ಲೇ ಅರಳುತ್ತಿದ್ದವು. ಆದರೆ ಒಂದು ದಿನ  ಪುಷ್ಪರಾಜ ತನ್ನವರನ್ನೆಲ್ಲ ಕರೆದು ಆಜ್ಞಾಪಿಸಿದ. “ನೋಡಿ ಹೂಗಿಡಗಳೆ, ಇನ್ನುಮುಂದೆ ನೀವೆಲ್ಲಾ ಬೇಸಿಗೆಯಲ್ಲಿಯೇ ಅರಳಬೇಕು. ಬೇಸಿಗೆಯಲ್ಲಿ ಭೂಮಿಯಮ್ಮ ತುಂಬ ಬಳಲಿರುತ್ತಾಳೆ. ನಮಗೆಲ್ಲ ಆಧಾರವಾಗಿರುವ ಭೂಮಿಯಮ್ಮನಿಗೆ ನಾವು ಸ್ವಲ್ಪವಾದರೂ ಸಂತೋಷವನ್ನು ಮೂಡಿಸಬೇಕು’’ ಎಂದು ಆದೇಶಿಸಿದ.  ಅಂದಿನಿಂದ ಹೂವುಗಳೆಲ್ಲ ಬೇಸಿಗೆಯಲ್ಲಿ ಅರಳಲು ಶುರುವಾದವು. ‘ಹೂ ತುಂಬಿದ ಮರದ ನೆರಳು ಹೂವಿಗಿಂತ ಹಗುರ’ ಎಂದು ಭೂಮಿಯಮ್ಮ ನಕ್ಕಳು. ಮಳೆಮಾಯಿಯ ಸವಾರಿ ಕತೆಯೊಂದನ್ನು ಹೆಣೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ