Advertisement

Tag: ಮೊಗಳ್ಳಿ ಗಣೇಶ್

ನೀಲಿ ಬರೆಗಳ ಮುಟ್ಟಿ ಮುಟ್ಟಿ ನೋಡಿದ

ಅಂತೂ ಚಿಕ್ಕಪ್ಪ ಬಂದಿದ್ದ. ಯಾವತ್ತಿನಂತೆ ಎದ್ದು ನಿಂತು ಕೈ ಮುಗಿದೆ. ಬೀಗ ತೆಗೆದು; ‘ಐದು ನಿಮಿಷ ಇರಿ; ಪಲಾವ್ ತರ್ತೀನಿ’ ಎಂದು ಸೈಕಲೇರಿ ಹೋದ. ಪಲಾವ್ ಎನ್ನುವ ಹೆಸರನ್ನೆ ನಾನಾಗ ಕೇಳಿರಲಿಲ್ಲ. ಕೈಕಾಲು ಮುಖ ತೊಳೆದು ದೇವರಿಗೆ ಕಡ್ಡಿ ಹಚ್ಚು ಎಂದ ತಾತ. ಹಾಗೇ ಮಾಡಿದೆ. ಪಲಾವ್ ತಂದ ಚಿಕ್ಕಪ್ಪ. ಗಮ್ಮೆನ್ನುವ ಪೊಟ್ಟಣ. ತಾತನ ಮೆಲ್ಲಗೆ ‘ಇದೇನಪ್ಪಾ’ ಎಂದು ಕೇಳಿದ. ‘ಗಮುಲ್ದನ್ನ’ ಎಂದ. ಅಹಾ! ಅಂತಹ ಗಮಗಮಿಸುವ ಅನ್ನವ ನಾನೆಂದೂ ಉಂಡಿರಲಿಲ್ಲ. ಮೊಗಳ್ಳಿ ಗಣೇಶ್ ಬರೆಯುವ ಆತ್ಮಕತೆ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಹದಿನೈದನೆಯ ಕಂತು

Read More

ನಾನು ಕೂಡ ಜಾಡಮಾಲಿಯಾಗಿದ್ದೆ

ಆ ಬಳೆಗಳ ಅಸಹಾಯಕತೆಗೂ ತಾಯ ಆಲಾಪಕ್ಕೂ ವ್ಯತ್ಯಾಸವೇ ಇರಲಿಲ್ಲ. ಅಪ್ಪನ ಜೊತೆ ಮೊದಲ ಬಾರಿಗೆ ಕೈ ಮಾಡಿದ್ದಳು. ಅವಳಿಗೆ ಗೊತಿತ್ತೇನೊ; ತಾನಿನ್ನು ಹೆಚ್ಚು ಕಾಲ ಉಳಿಯುವುದಿಲ್ಲವೆಂದು! ಅಬ್ಬರಿಸಿದಳು. ಬೀಸಿದ್ದ ಬೆತ್ತವ ತಟಕ್ಕನೆ ಹಿಡಿದಿದ್ದಳು. ಅಪ್ಪ ಉಷಾರಾದ. ದೊಣ್ಣೆಯ ಎರಡೂ ತುದಿಗಳ ಬಲವಾಗಿ ಹಿಡಿದುಕೊಂಡ, ತಾಯ ಅದರ ಮಧ‍್ಯ ಭಾಗವ ಹಿಡಿದು ಶಕ್ತಿ ಮೀರಿ ಅವನನ್ನು ಹಿಂದಕ್ಕೆ ನೂಕಿಕೊಂಡು ಹೋಗಿ ಗೋಡೆಗೆ ಒತ್ತರಿಸಿಕೊಂಡು ತನ್ನ ಕಾಲುಗಳ ಬಲವಾಗಿ ಹಿಂದಕ್ಕೆ ಊರಿ ಆ ಬೆತ್ತವನ್ನು ಅವನ ಗೋಣಿನತ್ತ ತಳ್ಳುತ್ತಿದ್ದಳು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶʼ ಸರಣಿಯ ಹತ್ತನೆಯ ಕಂತು.

Read More

ಅಮರಾವತಿ ಎಂಬ ಹುಚ್ಚಿಯ ವಿಸ್ಮಯ

ಉಸಿರಾಡಿದ್ದೆ ಅವಳೆದೆ ನಡುವೆ. ಏನೊ ಸುಖ ತೊಟ್ಟಿಲ ಕೂಸಂತೆ. ತಾಯನ್ನು ಅಪ್ಪ ಕೊಲ್ಲುವನು ಎಂಬುದು ಈ ಹುಚ್ಚಿಗೆ ಹೇಗೆ ಗೊತ್ತಾಯಿತು! ಯಾರಿಗೂ ಗೊತ್ತಿಲ್ಲದ್ದ ಹೇಗೆ ಪತ್ತೆ ಮಾಡಿದ್ದಳು. ಇವಳೆಂತಹ ಹುಚ್ಚಿ. ಇಲ್ಲವೇ ಯಕ್ಷಿಣಿ ಇರಬೇಕೇ? ಎಷ್ಟು ವಿಷಯಗಳೆಲ್ಲ ತಂತಾನೆ ಅವಳಿಗೆ ತಿಳಿಯುತ್ತಿದ್ದವು. ಅವತ್ತೊಂದಿನ ನಟ್ಟಿರುಳಲ್ಲಿ ನಾಳೆ ಬೆಳಿಗ್ಗೆ ಇಂತವರು ಸಾಯುತ್ತಾರೆ ಎಂದು ಹೇಳಿದ್ದಳು. ಹಾಗೇ ಆ ಊರ ದೊಡ್ಡ ಸಾಹುಕಾರ ಪ್ರಾಣ ಬಿಟ್ಟಿದ್ದ. ಒಹೋ; ಅವಳಲ್ಲಿ ಮೃತ್ಯು ದೇವತೆಯೂ ಸೇರಿಕೊಂಡಿದ್ದಾಳೆಂದು ಜನ ಅವಳ ಕಣ್ಣಿಂದ ತಪ್ಪಿಸಿಕೊಳ್ಳುತ್ತಿದ್ದರು. ಮೊಗಳ್ಳಿ ಗಣೇಶ್ ಸರಣಿ

Read More

ರೇಷ್ಮೆಯ ಮಾಂತ್ರಿಕ ಚಿಟ್ಟೆಗಳ ಅಸುಖ

ನಾನೂ ನನ್ನ ತಾಯಿಯೂ ಅಪ್ಪನ ಆದೇಶಗಳಿಗೆ ಸದಾ ಸಿದ್ಧವಾಗಿರಲೇಬೇಕಿತ್ತು. ಆಗಿನ್ನೂ ಆತ ಪೇಟೆಯ ಎಂಡದ ದಾಸನಾಗಿರಲಿಲ್ಲಾ. ಖಡಕ್ ಆದ ಮನುಷ್ಯ. ಅತ್ಯುಗ್ರ ಸ್ವಾಭಿಮಾನಿ. ಆ ಕ್ಷಣವೇ ಅಲ್ಲೇ ಮರಣವಾದರೂ ಚಿಂತೆ ಇಲ್ಲಾ ಎಂದು ಅನ್ಯಾಯದ ವಿರುದ್ಧ ಪ್ರತಿಭಟಿಸಿ ಇಡೀ ಊರಿಗೆ ಊರನ್ನೇ ಎದುರು ಹಾಕಿಕೊಂಡು ದಂಗೆ ಏಳುತ್ತಿದ್ದ. ಅವನ ರೇಷಿಮೆಯ ಮನಸ್ಸೇ ತಿಳಿಯುತ್ತಿರಲಿಲ್ಲ. ಅತ್ತ ತಾತ ತನ್ನ ಹೋಟೆಲ್ ಕಾಯಕದಲ್ಲಿ ಮುಳುಗಿರುತ್ತಿದ್ದ. ಎಷ್ಟೋ ಬಡವರಿಗೆ ಸುಮ್ಮನೆ ಸಾಲದ ಲೆಕ್ಕದಲ್ಲಿ ಅನ್ನಹಾಕುತಿದ್ದ ಎಂದೂ ಸಾಲ ಕೇಳಿರಲಿಲ್ಲ ಯಾರನ್ನೂ ತಾತ.

Read More

ನನ್ನ ನಿರುಮ್ಮಳ ಇರುಳು ನನ್ನದು…

ಅಲ್ಲೊಂದು ಸಹಜ ಜಲ ಬಾವಿ ಇತ್ತು ಅನಾದಿಯಿಂದಲೂ. ಅದರ ಪವಿತ್ರ ಜಲದಿಂದಲೇ ಆ ಕಾಲದ ವೈದಿಕರು ಧರ್ಮ ಕಾರ್ಯ ಎಸಗುತ್ತಿದ್ದುದು… ಅದಕೆಂದೇ ಆ ಗೊಂಡಾರಣ್ಯ ಪ್ರಸಿದ್ಧವಾಗಿತ್ತು ಆ ಕಾಲಕ್ಕೆ. ಈಗದು ಒಂದು ಹೊಂಡವಾಗಿತ್ತು. ಬೇಸಿಗೆಯಲ್ಲಿ ದಾಹಕ್ಕಿಳಿದ ಪ್ರಾಣಿಗಳು ಆ ಸನಾತನ ಜಾರಿನ ಹೂಳಿನಲ್ಲಿ ಸಿಲುಕಿ ಎದ್ದು ಬರಲಾರದೆ ಅಲ್ಲೇ ಸಮಾಧಿ ಆಗಿದ್ದವು. ಬಾಯಾರಿ ಅಲ್ಲಿ ಸಿಲುಕಿದವರ ಪಾಡನ್ನು ಅರ್ಥಮಾಡಿಕೊಳ್ಳಿ! ಧರ್ಮ ಸೂಕ್ಷ್ಮವನ್ನು ನಾಳೆ ಅರ್ಥ ಮಾಡಿಕೊಳ್ಳಿ ಮಕ್ಕಳೇ; ಈಗಲೇ ಹೇಳಬಾರದು!

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ