Advertisement

Tag: ಯಕ್ಷಗಾನ

ಮಹನೀಯ ಮದ್ಲೆಗಾರರ ಪ್ರಭಾವಲಯ

ಯಕ್ಷಗಾನ ಭಾಗವತಿಕೆಯಲ್ಲಿ ಮದ್ದಳೆಯದ್ದು ಪ್ರಧಾನ ಪಾತ್ರ. ಬಲಿಪ ನಾರಾಯಣ ಭಾಗವತರಿಗೆ ಭಾಗವತಿಕೆ ಕಲಿಯುವುದಕ್ಕೆ ನೆರವಾದ ಮದ್ದಳೆಗಾರರು ಪ್ರಮುಖರೇ.  ಮದ್ದಳೆಗಾರರಾದ  ದಿವಂಗತ ಕುದುರೆಕೋಡ್ಲು ರಾಮ ಭಟ್ಟರು ಮತ್ತು ದಿವಂಗತ ಕೆಮ್ಮಣ್ಣು ನಾರ್ಣಪ್ಪಯ್ಯ ಅವರ ಪ್ರೋತ್ಸಾಹ, ತಿದ್ದುವಿಕೆಯು ಬಲಿಪರ ಭಾಗವತಿಕೆ ಶೈಲಿಯ ಮೇಲೆ ಬಹಳಷ್ಟು ಪ್ರಭಾವ ಬೀರಿದೆ. ಪ್ರಸ್ತುತ ಸರಣಿಯಲ್ಲಿ ಆ ಬಗ್ಗೆ ಬಲಿಪರು ಹೇಳಿಕೊಂಡಿದ್ದಾರೆ. ‘ಬಲಿಪ ಮಾರ್ಗ’ದಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರಹ  ಇಲ್ಲಿದೆ. 

Read More

‘ಸಮಷ್ಟಿ ನೀತಿ’ ಒಪ್ಪುವ ಔಚಿತ್ಯದ ಚರ್ಚೆ

ಯಕ್ಷಗಾನಕ್ಕೆ ಲಕ್ಷಣಗ್ರಂಥವಿಲ್ಲ, ಪ್ರಪಂಚದ ಹಲವು ಪ್ರದರ್ಶನ ಕಲೆಗಳಿಗೂ ಶಾಸ್ತ್ರ ಹೇಳುವ ‘ಪಠ್ಯ’ಗಳಿಲ್ಲ. ನಾಟ್ಯಶಾಸ್ತ್ರ, 11 ನೇ ಶತಮಾನದಲ್ಲಿ ಕ್ಷೇಮೆಂದ್ರ ಬರೆದ ‘ಔಚಿತ್ಯ ವಿಚಾರ ಚರ್ಚಾ’ ಇತ್ಯಾದಿ ಗ್ರಂಥಗಳಿದ್ದರೂ ಆ ಕಾಲದಲ್ಲೇ ಕಲಾಪ್ರಕಾರಗಳು ಅವುಗಳನ್ನು ಎಷ್ಟು ಅನುಸರಿಸುತ್ತಿದ್ದವೊ ಗೊತ್ತಿಲ್ಲ. ಆದರೆ ಪಠ್ಯಗಳು ಒಂದಕ್ಕೊಂದು ಪ್ರತಿಕ್ರಿಯಿಸುತ್ತಾ, ಒಂದನ್ನೊಂದು ವ್ಯಾಖ್ಯಾನಿಸುತ್ತಾ ತಮ್ಮದನ್ನು ಸೇರಿಸುವ ‘ಅಂತರ್ ಪಠ್ಯೀಯತೆ’ಯು ಪಠ್ಯ ಮತ್ತು ಪ್ರಯೋಗಕ್ಕೂ ಅನ್ವಯಿಸುತ್ತದೆ.  ಕೃತಿ ಆರ್. ಪುರಪ್ಪೇಮನೆ ಬರೆಯುವ ‘ಯಕ್ಷಾರ್ಥ  ಚಿಂತಾಮಣಿ’ ಸರಣಿಯಲ್ಲಿ ಯಕ್ಷಗಾನ ಔಚಿತ್ಯದ ಕುರಿತ ಲೇಖನ. 

Read More

ಯಕ್ಷಗಾನ ಪಠ್ಯ: ಕಲೆಗೆ ತೊಡಕುಂಟು ಮಾಡುವ ಪ್ರಮಾದಗಳು

ಕರ್ನಾಟಕದ ಕರಾವಳಿಯುದ್ಧಕ್ಕೂ ಸೊಂಪಾಗಿ ವಿಕಾಸಗೊಂಡಿರುವ ಯಕ್ಷಗಾನ ಕಲೆಯು ಅಪಾರ ವೈವಿಧ್ಯವನ್ನು ಹೊಂದಿದೆ. ಈ ವೈವಿಧ್ಯತೆಯ ಕಾರಣದಿಂದಲೇ, ಅದರ ವ್ಯಾಖ್ಯಾನವನ್ನು ಸರಳವಾಗಿ ಮಾಡುವುದು ಕಷ್ಟವಾಗಿಬಿಟ್ಟಿದೆ. ಆಯಾ ಪ್ರದೇಶಗಳ ಪ್ರಭಾವದೊಂದಿಗೆ ವಿಕಾಸ ಹೊಂದಿರುವ ಈ ಕಲೆಯನ್ನು ಏಕರೂಪವಾಗಿ ನೋಡುವುದು ಸಾಧ್ಯವಾಗುತ್ತಿಲ್ಲ. ಇದೀಗ ಯಕ್ಷಗಾನ ಕಲೆಗೊಂದು ಪಠ್ಯಪುಸ್ತಕ ರಚನೆಯಾಗಿದೆ. ಹಾಗಿದ್ದರೆ ಪಠ್ಯಪುಸ್ತಕವು  ಈ ಬೃಹತ್ ಕಲಾಪ್ರಕಾರವನ್ನು ಸಾಂದ್ರವಾಗಿ ಗ್ರಹಿಸಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. 

Read More

ಯಕ್ಷಗಾನದ ವಿಮರ್ಶೆಯಲ್ಲಿ ‘ಔಚಿತ್ಯ’ದ ಪ್ರಯೋಗಗಳು…

ಯಕ್ಷಗಾನದಲ್ಲಿ ಈ ಪೂರ್ಣತೆಯ ಅರ್ಥವನ್ನೇ ಔಚಿತ್ಯ ಪಡೆದುಕೊಳ್ಳುವುದಾದರೂ, ಇಲ್ಲಿ ನಿತ್ಯದ ಸಮಾಜದೊಂದಿಗೆ ವ್ಯವಹರಿಸುವ ಯಕ್ಷಗಾನವು ಬದಲಾಗುತ್ತಿರುವ ತನ್ನ ಸುತ್ತಮುತ್ತಲಿನ ಸಮಾಜದ ಕ್ರಮಗಳ ಜೊತೆಗೆ ಚೌಕಾಶಿ ಮಾಡುತ್ತಾ ವ್ಯವಹರಿಸಬೇಕಾಗುತ್ತದೆ. ಅಂದರೆ ಹಿಂದಿನ ಜೀವನ ಕ್ರಮದ ನಡಾವಳಿಗೂ ಮತ್ತು ಈಗಿನ ಸಮಾಜದ ಕ್ರಮಗಳಿಗೂ ಕಲಾಪ್ರಕಾರಗಳು ಒಂದು ಸೇತುವೆಯನ್ನು ಕಟ್ಟಿಕೊಳ್ಳುತ್ತಾ ಹೋಗಬೇಕಾಗುತ್ತದೆ. ಯಕ್ಷಗಾನದ ‘ಮೂಲ ಉದ್ದೇಶ’ ಪುರಾಣದ ಪ್ರಸರಣವಾಗಿರಲಿ, ಅಥವಾ ಪ್ರಸಂಗ ಪಠ್ಯವನ್ನು ಗಾನ, ನೃತ್ಯ ಮಾತಿನಲ್ಲಿ ಪ್ರೇಕ್ಷಕರಿಗೆ ತೋರಿಸುವುದಷ್ಟೇ ಆಗಿರಲಿ, ಅದು ಈಗಿನ ಕಾಲಕ್ಕೆ ಸಂವಹನವಾಗಬಹುದಾದ….

Read More

ಪ್ರಸಂಗ ರಚನೆಯ ಕೌಶಲಕ್ಕೆ ಸಿಕ್ಕಿದ ವೇದಿಕೆ ‘ಪೊಳಲಿ’

ಕಿರಿಯ ಬಲಿಪರು ಪೂರ್ಣ ಪ್ರದರ್ಶನವೊಂದರಲ್ಲಿ ಮೊದಲು ಭಾಗವತಿಕೆ ಮಾಡಿದ್ದು ಪೊಳಲಿ ಎಂಬಲ್ಲಿ.  ಪ್ರಸಂಗ ಹೊಸದಾಗಿದ್ದರೆ ಆಟಕ್ಕೆ ಅವಕಾಶ ನೀಡಬಹುದು ಎಂದು ಆಡಿಸುವವರ ಷರತ್ತು.  ಪ್ರದರ್ಶನದ ದಿನದಂದೇ, ಹೊಸ  ಕಥೆಯನ್ನು ಪೊಳಲಿಯ ಶೀನಪ್ಪ ಹೆಗಡೆಯವರು ಹೇಳುವುದು ಎಂದು ನಿರ್ಧಾರವಾಯಿತು.  ಬಲಿಪರು ನಿರ್ಧಾರವಾದ ಆಟವನ್ನು ಯಾವುದೇ ಕಾರಣಕ್ಕೂ ಬಿಡುವಂತಿಲ್ಲ ಎಂದು ತೀರ್ಮಾನಿಸಿ ಬಳಿಯ ಅಂಗಡಿಯಲ್ಲಿ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ