Advertisement

Tag: ರಂಜಾನ್ ದರ್ಗಾ

ಜ್ಞಾನವೆಂಬುದು ಬಣ್ಣದ ಸೊತ್ತಲ್ಲ ಬಿಡಿ

ಮಾಸ್ಕೋದಲ್ಲಿ ಅನೇಕ ಆಫ್ರಿಕಾದ ಯುವಕರು ರಷ್ಯನ್ ಯುವತಿಯರನ್ನು ಮದುವೆಯಾಗಿದ್ದರು. ಅವರ ಮಕ್ಕಳು ಮಿಶ್ರವರ್ಣದವರಾಗಿದ್ದರು. ದಕ್ಷಿಣ ಆಫ್ರಿಕಾದ ಮಿಶ್ರವರ್ಣೀಯರ ಬಿಷಪ್ ಅಲೆನ್ ಬೊಸೆಕ್ “ವು ಆರ್ ದ ಫ್ಯೂಚರ್ ಆಫ್ ಸೌತ್ ಆಫ್ರಿಕಾ” ಎಂದು ಹೇಳಿದ್ದರು. ಮಿಶ್ರವರ್ಣೀಯರು ದಕ್ಷಿಣ ಆಫ್ರಿಕಾ ಅಷ್ಟೇ ಅಲ್ಲ ಇಡೀ ಜಗತ್ತಿನ ಭವಿಷ್ಯ ಎಂಬುದು ಸಾಬೀತಾಗುತ್ತಿದೆ. ಭಾರತದ ಎಲ್ಲ ಜಾತಿ ಮತ್ತು ಧರ್ಮಗಳಲ್ಲಿಆಫ್ರಿಕಾದ ಮೂಲ  ನಿವಾಸಿಗಳು ಇದ್ದಾರೆ ಬೆಳ್ಳಗಿದ್ದವರೂ ಇದ್ದಾರೆ. ಆದರೂ ಜಾತಿ ಭ್ರಮೆ ಉಳಿದುಕೊಂಡಿದೆ. ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೪೯ನೇ ಭಾಗ ಇಲ್ಲಿದೆ.

Read More

ನಿಜಾರ್ಥದಲ್ಲಿ ಯಾರಿಗೂ ಗೆಲುವಿಲ್ಲ ಯುದ್ಧದಲ್ಲಿ…

ಮಾಸ್ಕೋ ಸಮೀಪದ ಬೊರೊದಿನೊ ಎಂಬ ಗ್ರಾಮದಲ್ಲಿ ನೆಪೊಲಿಯನ್ ಬೊನಾಪಾರ್ಟೆ ಸೈನ್ಯದ ವಿರುದ್ಧ ನಡೆದ ಯುದ್ಧದಿಂದ ಆ ಗ್ರಾಮ ಹೇಗೆ ನಾಶವಾಯಿತು ಎಂಬುದನ್ನು ರಷ್ಯನ್ ಪನೋರಮಾದಲ್ಲಿ ಅದ್ಭುತವಾಗಿ ಕಣ್ಣಿಗೆ ಕಟ್ಟುವಂತೆ ಸೃಷ್ಟಿಸಲಾಗಿದೆ. ದಾಳಿಗೊಳಗಾಗಿ ಸಾಯುತ್ತಿರುವ ಸೈನಿಕರು, ಬಿದ್ದು ಒದ್ದಾಡುತ್ತಿರುವ ಯುದ್ಧ ಕುದುರೆಗಳು, ಸುಡುತ್ತಿರುವ ಮನೆಗಳು, ಸುಟ್ಟು ಹೊಗೆಯಾಡುತ್ತಿರುವ ಪ್ರದೇಶಗಳು, ಹಾಹಾಕಾರದ ವಾತಾವರಣ ಹೀಗೆ ಎಲ್ಲವೂ ನಮ್ಮ ಮುಂದೆ ನಡೆಯುತ್ತಿರುವ ಹಾಗೆ ಅನಿಸುತ್ತದೆ. ನೆಪೊಲಿಯನ್ ಬೋನಾಪಾರ್ಟೆ ವಿನಾಶಕಾರಿ ಯುದ್ಧನೃತ್ಯ ಮಾಡುತ್ತಿರುವ ಹಾಗೆ ಅನಿಸುತ್ತದೆ. ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿ

Read More

ತಾಷ್ಕೆಂಟ್‌ಗೆ ವಿದಾಯ

ಯುದ್ಧದ ಹಿಂಸೆ ಮತ್ತು ಅಸಹಾಯಕತೆಯನ್ನು ಸಹಿಸುತ್ತ, ಸಾವು ನೋವು ಅನುಭವಿಸುತ್ತ ಮುನ್ನಡೆಯುವ ಛಲ ಲೋಕದ ಜನಸಮುದಾಯಗಳಿಗೆ ಅದು ಹೇಗೆ ಬರುವುದೊ! ಬಹುಶಃ ಅನುಭವಿಸಿದಾಗಲೇ ಗೊತ್ತಾಗುವುದು. ಇದೇ ಉಜ್ಬೆಕಿಸ್ತಾನ ಮೂಲದ ಮೊಘಲ ಸಂತತಿಯ ಔರಂಗಜೇಬ್, ನನ್ನ ಜನ್ಮಸ್ಥಳ ವಿಜಯಪುರದ ಮೇಲೆ ದಂಡೆತ್ತಿ ಬಂದು ಆದಿಲಶಾಹಿ ಸಾಮ್ರಾಜ್ಯವನ್ನು ಹಾಳುಗೆಡವಿದ. ಅನೇಕ ಸೂಫಿಸಂತರ ಕೊಲೆ ಮಾಡಿದ. ಯುದ್ಧದಲ್ಲಿ ಯಾರು ಮುಸ್ಲಿಮರು? ಯಾರು ಹಿಂದುಗಳು? ಯಾರು ಕ್ರೈಸ್ತರು? ಯುದ್ಧದಲ್ಲಿ ಧರ್ಮವಿಲ್ಲ, ನೀತಿಯಿಲ್ಲ, ನ್ಯಾಯವಿಲ್ಲ. ಅದು ಕೇವಲ ಯುದ್ಧ. ಗೆದ್ದವರನ್ನೂ ಆರ್ಥಿಕವಾಗಿ ಮತ್ತು ನೈತಿಕವಾಗಿ ಸೋಲಿಸುವ ಯುದ್ಧ.
ರಂಜಾನ್‌ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ 47ನೇ ಕಂತು ಇಲ್ಲಿದೆ.

Read More

ಸಮರಕಂದ್‌ನ ಪಾರಂಪರಿಕ ಸ್ಥಳಗಳು ಮತ್ತು ಬಿಜಾಪುರದ ಗೋಲಗುಮ್ಮಟ

ಸಮರಕಂದ್ ನಗರದ ರೇಗಿಸ್ತಾನ್ ಚೌಕ್ ಅತ್ಯಂತ ಸುಂದರವಾದ ಇಸ್ಲಾಮೀ ಶೈಲಿಯ ವರ್ಣರಂಜಿತ ಇಮಾರತುಗಳಿಂದ ಕೂಡಿದ ಪ್ರದೇಶವಾಗಿದೆ. ತೈಮೂರ ಲಂಗನ ಗೋರಿ ಕೂಡ ಇಲ್ಲೇ ಇದೆ. ಅದು ಎತ್ತರದ ಪ್ರದೇಶದಲ್ಲಿರುವುದರಿಂದ ಬಹಳಷ್ಟು ಮೆಟ್ಟಿಲುಗಳನ್ನು ಹತ್ತಿ ಹೋಗಬೇಕು. ಸುದೈವದಿಂದ ನಮ್ಮ ಗೈಡ್ ಗುಲ್‌ಚೆಹರಾ ಎಂಬ ಯುವತಿ ಸಮರಕಂದ್ ಇತಿಹಾಸವನ್ನು ಬಹಳ ಚನ್ನಾಗಿ ಬಲ್ಲವಳಾಗಿದ್ದಳು. ಆಕೆ ಸಮರಕಂದ್ ಇತಿಹಾಸದ ಮೇಲೆ ಸಂಶೋಧನೆ ಮಾಡಿದವಳಾಗಿದ್ದಳೆಂಬ ನೆನಪು. ಪ್ರತಿಯೊಂದು ಸ್ಥಳದ ಬಗ್ಗೆ ಆಕೆ ವಿವರಿಸುವ ರೀತಿ ನನಗಂತೂ ಬಹಳ ಉಪಯುಕ್ತವಾಯಿತು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 45ನೇ ಕಂತು ಇಲ್ಲಿದೆ.

Read More

‘ದುಡಿಯುವ ವರ್ಗಕ್ಕೆ ಒಂದೇ ಲಯ ಇದೆ’

ಈ ಯುದ್ಧದ ಸಂದರ್ಭದಲ್ಲಿ ನಮ್ಮ ಮಧ್ಯೆ ಮಾತಿಗೆ ಮಾತು ಬೆಳೆಯಿತು. ಅವರೆಲ್ಲ ಸೇರಿ ಮುಸ್ಲಿಮರನ್ನು ಹೀಯಾಳಿಸಿದರು. ನಾನು ಅಪಮಾನಿತನಾಗಿ ಎದ್ದು ‘ಬೆಳಿಗ್ಗೆ ಮಿಲಿಟರಿ ಸೇರುವೆ’ ಎಂದು ಹೇಳಿ ಹೊರಗೆ ಬಂದು ಸಿದ್ಧೇಶ್ವರ ಗುಡಿಗೆ ಹೋಗಿ, ಕಟ್ಟೆಯ ಮೇಲೆ ಮಲಗಿದೆ. ಚಳಿಯಿಂದಾಗಿ ರಾತ್ರಿಯಿಡಿ ಸರಿಯಾಗಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಸ್ಟೇಷನ್ ರೋಡ್‌ನಲ್ಲಿರುವ ಐಬಿ ಕಡೆಗೆ ಹೊರಟೆ. ಯುದ್ಧದ ಸಂದರ್ಭವಾಗಿದ್ದರಿಂದ 14 ವರ್ಷ ಮೀರಿದ ಬಾಲಕರನ್ನೂ ಅಲ್ಲಿ ಮಿಲಿಟರಿಗೆ ಸೇರಿಸಿಕೊಳ್ಳುತ್ತಿದ್ದರು. ನಾನು ಎಲ್ಲ ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣನಾದೆ. ಆದರೆ ತೂಕ ಕಡಿಮೆ ಇತ್ತು. ಅಷ್ಟೊತ್ತಿಗೆ ನನ್ನ ಅಜ್ಜಿ ಮತ್ತು ತಾಯಿ ಬಂದು ಅಳುತ್ತ ನಿಂತಿದ್ದರು.
ರಂಜಾನ್‌ ದರ್ಗಾ ಬರೆಯುವ ನೆನಪಾದಾಗಲೆಲ್ಲ ಸರಣಿಯ 44ನೇ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ