Advertisement

Tag: ರಂಜಾನ್ ದರ್ಗಾ

ಬ್ರಿಟಿಷ್ ಹ್ಯಾಟ್ ಮತ್ತು ಗಾಂಧಿಟೋಪಿ

ಅವರು ಅಟವಳಕರ್ ಸಾಹೇಬರ ಹಾಗೆ ಪ್ಯಾಂಟು ಹ್ಯಾಟು ತೊಟ್ಟಿರಲಿಲ್ಲ. ನನ್ನ ತಂದೆಯ ಹಾಗೆ ಸಾದಾ ಧೋತರ, ಅಂಗಿ ಮತ್ತು ಟೋಪಿ ಧರಿಸಿದ್ದರು. ನನ್ನ ತಂದೆಯಂಥ ಸಾಮಾನ್ಯರೂ ದೊಡ್ಡ ಮನುಷ್ಯರಾಗಿರುತ್ತಾರೆ ಎಂಬುದು ನನಗೆ ಮೊದಲ ಬಾರಿಗೆ ಅನಿಸಿತು. ನನ್ನ ಜೀವನದಲ್ಲಿ ನಾನು ನೋಡಿದ ಮೊದಲ ದೊಡ್ಡವ್ಯಕ್ತಿ ಅವರಾಗಿದ್ದರು. ನಾನು ಒಂದನೆಯ ಇಯತ್ತೆಯ ವಿದ್ಯಾರ್ಥಿಯಾಗಿದ್ದಾಗಲೇ ಮನುಷ್ಯರು ಹೇಗೆ ಇರಬೇಕು ಎಂಬುದರ ಪಾಠವನ್ನು ಅವರನ್ನು ನೋಡುವುದರ ಮೂಲಕ ಕಲಿತೆ. ಇಂದಿಗೂ ಆ ಪಾಠವೇ ನನ್ನ ಬದುಕನ್ನು ರೂಪಿಸುತ್ತಿದೆ. ಹೀಗಾಗಿ ಅವರ ನೆನಪು ನನ್ನಲ್ಲಿ ಸದಾ ಹಸಿರಾಗಿದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 38ನೆಯ ಕಂತು ಇಲ್ಲಿದೆ.

Read More

ನಾವು ಎತ್ತ ಸಾಗಿದ್ದೇವೆ?

ಈ ಜಾತ್ರೆಯಲ್ಲಿ ಬಡಿಗೆಗಳನ್ನು ಕೊಳ್ಳುವುದೊಂದು ವಿಶೇಷ. ಹಿಡಿಯಲು ಅನುಕೂಲವಾಗುವಷ್ಟು ದಪ್ಪನೆಯ ಬೆತ್ತದ ಬಡಿಗೆಗಳಿಗೆ ಕೇರಿನ ರಸದಿಂದ ಡಿಸೈನ್ ಮಾಡಿ ಸಿಂಗರಿಸುತ್ತಿದ್ದರು. ಈ ಜಾತ್ರೆಯಲ್ಲಿ ಮನೆಗೆ ಮತ್ತು ಒಕ್ಕಲುತನಕ್ಕೆ ಬೇಕಾದ ಎಲ್ಲ ವಸ್ತುಗಳು ಕೂಡ ಸಿಗುತ್ತಿದ್ದವು. ಎತ್ತುಗಳ ಆಲಂಕಾರಿಕ ವಸ್ತುಗಳು ರೈತರ ಮನಸೂರೆಗೊಳ್ಳುತ್ತಿದ್ದವು. ತಮ್ಮ ದನಕರುಗಳನ್ನು ಸಿಂಗರಿಸುವುದೆಂದರೆ ರೈತರಿಗೆ ಎಲ್ಲಿಲ್ಲದ ಖುಷಿ. ಅವರು ಆ ಪರಿಯಿಂದ ಕಾಳಜಿ ವಹಿಸಿ ತಮ್ಮ ಮಕ್ಕಳ ಸಿಂಗಾರ ಮಾಡಿದ್ದನ್ನು ನಾನು ಹಳ್ಳಿಯಲ್ಲಿ ನೋಡಲಿಲ್ಲ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಅವರ ಬದುಕು ಅರ್ಥವಾಗದೆ ನಮ್ಮ ಬದುಕು ವ್ಯರ್ಥ

ನನ್ನ ತಂದೆಯ ಕಡೆಯಿಂದ ಹಣ ಪಡೆದು ಏನೋ ತರಲು ನನ್ನ ತಾಯಿ ತಿಳಿಸುತ್ತಿದ್ದಳು. ನಾನು ಮರೆಗುಳಿಯಾಗಿದ್ದರಿಂದ ಅಂಗಿಯ ಕೆಳಗೆ ಗಂಟು ಹಾಕಿ ಕಳಿಸುತ್ತಿದ್ದಳು. ಶ್ರೀ ಸಿದ್ಧೇಶ್ವರ ರಸ್ತೆಯ ಮರಗಳ ಸಾಲಿನ ನೆರಳಲ್ಲಿ ನನ್ನ ತಂದೆಯ ಬಳಿ ಹೋಗುವ ಮೊದಲೆ ಅಂಗಿಯ ಗಂಟು ಹಾಕಿದ ವಿಚಾರವೇ ಮರೆತುಹೋಗುತ್ತಿತ್ತು! ಹೀಗೇಕೆ ಗಂಟು ಹಾಕಿಕೊಂಡಿರುವೆ ಎಂದು ನನಗೆ ನಾನೇ ಬೇಸರಪಟ್ಟುಕೊಂಡು ಅದನ್ನು ಬಿಚ್ಚುತ್ತಿದ್ದೆ. ನನ್ನ ತಂದೆ ಕೆಲಸ ಮಾಡುವ ಅಡತಿ ಅಂಗಡಿಗೆ ಹೋದಾಗ ಸೇಂಗಾ ಕೊಡಿಸಲು ಹೇಳುತ್ತಿದ್ದೆ.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಗೋಳಗುಮ್ಮಟದ ಸುತ್ತಮುತ್ತ

ಸೇಂಗಾ, ಹುರಿಗಡಲೆ, ಮಸಾಲೆವಠಾಣಿ, ಪೆಪ್ಪರಮೆಂಟ್ ಮುಂತಾದವುಗಳನ್ನು ಮಾರುವ ಮಧ್ಯ ವಯಸ್ಕನೊಬ್ಬ ಆ ಚಿಕ್ಕ ಕಟ್ಟಡದಲ್ಲಿ ಆರಂಭದಲ್ಲೇ, ನೆಲದ ಮೇಲೆ ಹಾಸಿಕೊಂಡು ಕುಳಿತಿರುತ್ತಿದ್ದ. ಆ ಬಡ ವ್ಯಕ್ತಿಯ ಬದುಕು ಆನಂದಮಯವಾಗಿತ್ತು. ಸದಾ ಹಸನ್ಮುಖಿಯಾಗಿ ಇರುತ್ತಿದ್ದ. ಖಾಕಿ ಹಾಫ್ ಪ್ಯಾಂಟ್ ಮತ್ತು ಹಾಪ್ ಷರ್ಟ್ ಆತನ ‘ಯೂನಿಫಾರ್ಮ್’ ಆಗಿತ್ತು. ಆ ಪುಟ್ಟ ವ್ಯಾಪಾರದಲ್ಲಿ ಎಷ್ಟು ಗಳಿಸುತ್ತಿದ್ದನೋ ದೇವರೇ ಬಲ್ಲ. ಆದರೆ ಆತನ ಜೀವನ್ಮುಖಿ ಬದುಕು ಆದರ್ಶಪ್ರಾಯವಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿ

Read More

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ