Advertisement

Tag: ರಘುನಾಥ ಚ.ಹ.

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ ಒಡಲ ಸಂಕಟವನ್ನು ಕಲೆಯಾಗಿಸುವುದು ಸಾಧ್ಯವಾಗಿರುವುದರಿಂದಲೇ, ಈ ಕಥೆಗಳು ಓದುಗರೊಳಗೆ ತಮ್ಮ ಕಂಪನಗಳನ್ನು ವಿಸ್ತರಿಸಿಕೊಳ್ಳುವ ಕಸುವು ಹೊಂದಿವೆ.
ಗೋವಿಂದರಾಜು ಎಂ ಕಲ್ಲೂರು ಕಥಾ ಸಂಕಲನ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ನೀರಿಗೊಡ್ಡಿದ ಗಾಳಿ-ಬೆಳಕು: ಆಲೂರು ದೊಡ್ಡನಿಂಗಪ್ಪ ಕಾದಂಬರಿಗೆ ರಘುನಾಥ ಚ.ಹ. ಮುನ್ನುಡಿ

ಮಹಾನ್ ಬಲಶಾಲಿ ಹಾಗೂ ಅಪ್ರತಿಮ ಸುಂದರಿಯ ಪ್ರೇಮ ಊರ ಕಣ್ಣಿಗೆ ದೈವಿಕವಾಗಿ ಕಾಣಿಸುತ್ತದೆ. ವಿವಾಹಬಾಹಿರ ಸಂಬಂಧ ಊರಕಣ್ಣಿಗೆ ಸ್ವೀಕಾರಾರ್ಹ ಅಚ್ಚರಿಯಾಗಿ ಕಾಣಿಸಲಿಕ್ಕೆ, ಪ್ರೇಮಿಗಳ ವ್ಯಕ್ತಿತ್ವವಷ್ಟೇ ಕಾರಣವಲ್ಲ; ಮಲ್ಲನ ಕೇಡಿಗತನದ ಬಗ್ಗೆ ಊರಿಗಿರುವ ಅಸಹನೆಯೂ ಕಾರಣ. ಆ ಅಸಹನೆ ಅಸಹಾಯಕತೆಯಾಗಿರುವಾಗ, ತಮ್ಮ ಸಿಟ್ಟನ್ನು ಕೊಂಚವಾದರೂ ಸಮಾಧಾನಗೊಳಿಸುವ ರೂಪದಲ್ಲಿ ಪ್ರೇಮಪ್ರಕರಣ ಅವರಿಗೆ ಒದಗಿಬಂದಿದೆ. ಈ ಪ್ರೇಮಪ್ರಕರಣ ಜಾತೀಯತೆಯನ್ನು ವಿರೋಧಿಸುವ ಪ್ರತಿಭಟನೆಯ ರೂಪದಂತೆಯೂ ಕಾದಂಬರಿ ಚಿತ್ರಿಸುತ್ತದೆ.
ಆಲೂರು ದೊಡ್ಡನಿಂಗಪ್ಪ ಕಾದಂಬರಿ “ಚಂದ್ರನ ಚೂರು” ಗೆ ರಘುನಾಥ ಚ.ಹ. ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಘುನಾಥ ಚ.ಹ. ಕತೆ

ಅಪ್ಪನ ನಂಬಿಕೆಗಳು ಬದಲಾಗಿದ್ದರೂ, ನೈತಿಕವಾಗಿ ಅವರು ಕುಸಿದಿದ್ದರೂ, ಅಪ್ಪ ಬ್ರಾಂದಿ ಅಂಗಡಿಯ ಗಲ್ಲಾದ ಮೇಲೆ ಕೂರುವ ಚಿತ್ರವನ್ನು ಕಲ್ಪಿಸಿಕೊಳ್ಳುವುದು ಮೋಹನನಿಗೆ ತೀರಾ ಅಸಹನೀಯವಾಗಿ ಕಂಡಿತು. ಬ್ರಾಂದಿ ಅಂಗಡಿಯ ಗುತ್ತಿಗೆ ಹಿಡಿದರೆ ಅಪ್ಪ ಇನ್ನೆಂದೂ ಮೊದಲಿನ ದಾರಿಗೆ ಬರುವುದಿಲ್ಲ ಎನ್ನಿಸಿ, ಅಪ್ಪನ ನಿರ್ಧಾರವನ್ನು ವಿರೋಧಿಸಲು ಮೋಹನ ನಿರ್ಧರಿಸಿದ.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ರಘುನಾಥ ಚ.ಹ. ಬರೆದ ಕತೆ “ಕಾಲ ದಾರಿಯಲಿ ಹುಲ್ಲು”

Read More

ಕನ್ನಡ ಪ್ರಬಂಧಲೋಕದ ಹೊಸ ಕಿಟಕಿ

ಪ್ರಬಂಧಕಾರರಾಗಿ ಯೋಗಿಂದ್ರರ ಅಲೆದಾಟಕ್ಕೆ ವೈಚಾರಿಕತೆಯ ನೆಲೆಗಟ್ಟು ಇರುವಂತೆ ಭಾವುಕತೆಯ ಸ್ಪರ್ಶವೂ ಇದೆ. ‘ಬೆಳಕಿನ ಹಬ್ಬಕ್ಕೆ ಊರಿಗೆ ಹೋದದ್ದು’ ಪ್ರಬಂಧ, ಏಕಕಾಲಕ್ಕೆ ಬ್ರಿಟನ್ನು ಮತ್ತು ಮರವಂತೆಯ ನಡುವೆ ಮನೋವ್ಯಾಪಾರ ಸಾಧ್ಯವಾಗಿರುವ ವಿಶಿಷ್ಟ ರಚನೆಯಿದು. ಲೇಖಕ ಊರಿನಲ್ಲಿ ಹೆಜ್ಜೆಯಿಟ್ಟಾಗ ಮುತ್ತಿಕೊಳ್ಳುವ ದೀಪಾವಳಿಯ ಸಹಸ್ರ ಸಹಸ್ರ ದೀಪಗಳಂಥ ನೆನಪುಗಳು ಪ್ರಬಂಧದಲ್ಲಿ ಬೆಳಗಿವೆ. ‘ನಮ್ಮೂರು ಕಟ್ಟುತ್ತಿರುವ ಬೆಳಕಿನ ಮನೆಯೊಳಗೆ ನಾನೂ ಅಲೆದಾಡುತ್ತಿದ್ದೇನೆ’ ಎನ್ನುವ ಪ್ರಬಂಧಕಾರರ ಅನಿಸಿಕೆ ಓದುಗನದೂ ಆಗುತ್ತದೆ.
ಯೋಗೀಂದ್ರ ಮರವಂತೆ ಪ್ರಬಂಧಗಳ ಸಂಕಲನ “ನನ್ನ ಕಿಟಕಿ”ಗೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಮೋಹಕ ಚಿತ್ರಕ ಶಕ್ತಿಯ ʻಪರವಶʼದ ಕತೆಗಳು

ಕುಮಾರ ಬೇಂದ್ರೆ ಅವರ ಕತೆಗಳ ವಿಶೇಷತೆ ಎಂದರೆ ಬಹಳ ಸುಲಭವಾಗಿ ಓದಿಸಿಕೊಳ್ಳುವಂತಹ ಗುಣ. ಓದುಗನಿಗೆ ಸಂವಹನದ ದೃಷ್ಟಿಯಿಂದ ಹೆಚ್ಚು ಸರಾಗವಾಗಿ, ಹೆಚ್ಚು ತೊಂದರೆ ಕೊಡದೇ ಓದಿಸಿಕೊಳ್ಳುವ ಗುಣ ಅವರ ಎಲ್ಲ ಕತೆಗಳಲ್ಲೂ ಇದೆ. ಇದನ್ನು ಒಂದು ಗುಣ ಎಂದೇ ಹೇಳಲು ನಾನು ಬಯಸುತ್ತೇನೆ. ಯಾಕೆಂದರೆ ಸರಳತೆ ಎನ್ನುವಂಥದ್ದು ಸುಲಭವಲ್ಲ, ಅದನ್ನು ಎಟಕಿಸಿಕೊಳ್ಳುವುದೂ ಕೂಡ ಸುಲಭವಲ್ಲ. ಸರಳವಾಗಿ ಬರೆಯುವುದು ಮತ್ತು ಸರಳವಾಗಿ ಸಂವಹನ ಮಾಡುವುದು ಯಾವಾಗಲೂ ಒಂದು ಸವಾಲು.
ಕುಮಾರ ಬೇಂದ್ರೆಯವರ “ಪರವಶ” ಕಥಾಸಂಕಲನದ ಕುರಿತು ರಘುನಾಥ ಚ.ಹ. ಅವರ ಮಾತುಗಳು

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ