Advertisement

Tag: ರೂಪಶ್ರೀ ಕಲ್ಲಿಗನೂರ್

ಕನ್ನಡಿಗರ ಕೈಯಲ್ಲಿರಲಿ ಒಂದು ಕನ್ನಡ ಪುಸ್ತಕ….

ಕನ್ನಡ ಭಾಷೆಯನ್ನು ಬಳಸುವುದೂ ಹಾಗೂ ಕನ್ನಡ ಕೃತಿಗಳನ್ನು ಓದುವುದೂ ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ, ಕನ್ನಡ ಭಾಷೆಗೆ ಹಾಗೂ ಅದರ ಓದಿಗೆ ಕನ್ನಡಿಗರನ್ನು ಸೆಳೆಯಲು “ವೀರಲೋಕ”‌ ಪ್ರಕಾಶನದ ಸಂಸ್ಥೆ ಹಲವು ವಿಶಿಷ್ಠ ಪ್ರಯತ್ನಗಳನ್ನು ಮಾಡುತ್ತಿದ್ದು, ಅದರ ಭಾಗವಾಗಿ ನವೆಂಬರ್ ೧೫,೧೬, ಮತ್ತು ೧೭ರಂದು ಬೆಂಗಳೂರಿನಲ್ಲಿ “ಪುಸ್ತಕ ಸಂತೆ”ಯನ್ನು ಆಯೋಜಿಸಿದೆ. ಇದರ ಕುರಿತು ವೀರಲೋಕದ ಪ್ರಕಾಶಕರಾದ ವೀರಕಪುತ್ರ ಶ್ರೀನಿವಾಸ್‌ ಅವರೊಂದಿಗೆ ರೂಪಶ್ರೀ ಕಲ್ಲಿಗನೂರ್‌ ನಡೆಸಿದ ಸಂದರ್ಶನ ನಿಮ್ಮ ಓದಿಗೆ…

Read More

ಬದುಕಿಗಿಷ್ಟು ಸಾಕೆಂದರೆ ಆಗುವುದಿಲ್ಲವೆ?: ರೂಪಶ್ರೀ ಕಲ್ಲಿಗನೂರ್‌ ಬರಹ

ನಾನು ನಾನೆಂದು ಬದುಕಿದ ನನ್ನ ಬದುಕು ಎಲ್ಲಿ ಹೋಗುತ್ತದೆ… ಸಿಟ್ಟಿಗೆ, ಸಂತೋಷಕ್ಕೆ, ತ್ಯಾಗಕ್ಕೆ, ಭೋಗಕ್ಕೆ… ಏನಾದರೂ ಅರ್ಥ ಉಳಿಯಬಹುದ? ಕೆಟ್ಟವನಾಗಿದ್ದರೆ ನಾಲ್ಕು ಜನರೊಂದಿಗೆ ಸಿಟ್ಟು, ಒಳ್ಳೆಯವನಾಗಿದ್ದರೆ ಅದೇ ನಾಲ್ಕು ಜನರೊಂದಿಗೆ ಪ್ರೀತಿ… ಅಷ್ಟೇ… ಇಷ್ಟು ಬದುಕಿನಲ್ಲಿ ನಮಗಾಗಿ ನಾವು ಏನು ಮಾಡಿಕೊಂಡರೂ, ಅದೂ ನಮ್ಮ ಜೀವಿತಾವಧಿಯ ನೆಮ್ಮದಿಗಾಗಿ ಅಷ್ಟೇ ಅಲ್ಲದೇ ಬೇರೇನೂ ಅಲ್ಲ.
ಬದುಕಿನ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಜೀವಕ್ಕೊಂದು ಜೀವ…. : ರೂಪಶ್ರೀ ಕಲ್ಲಿಗನೂರ್‌ ಬರಹ

ಈಗ ಆಂಟಿ ಮಿಕ್ಕಿಯನ್ನು ವಾಕಿಂಗಿಗೆ ಕರೆದುಕೊಂಡು ಹೋಗುವುದಿಲ್ಲ. ಅಂಕಲ್‌ ಸಮಯ ಮಾಡಿಕೊಂಡು ಬೇಗ ಬಂದು ಆ ಕೆಲಸವನ್ನು ತಾವೇ ಮಾಡುತ್ತಾರೆ. ಆದರೆ ಚಂದೂ ಆಂಟಿಯ ಪ್ರೀತಿಯಿಂದ ಮಾತ್ರ ಮಿಕ್ಕಿಗೆ ರಿಯಾಯಿತಿ ದೊರೆತಿಲ್ಲ… ಯಾಕೆಂದರೆ ನಾಯಿಗಾಗಲೀ, ಮನುಷ್ಯನಿಗಾಗಲಿ ಯಾವತ್ತೂ ಯಾರದ್ದಾದರೂ ಸಾಂಗತ್ಯ ಬೇಕೆಬೇಕು. ಈಗ ವಯಸ್ಸಾದ ಕಾಲಕ್ಕೆ ಆಂಟಿಯೊಟ್ಟಿಗೆ ಬಹುತೇಕ ಇರುವುದು ಆ ನಾಯಿಯೆ. ಆದರೆ ಈಗ ಆ ನಾಯಿಗೂ ವಯಸ್ಸಾಗುತ್ತಿದೆ ಎನ್ನುವಾಗ, ಅವರ ಕಣ್ಣಲ್ಲಿ ತೆಳುವಾಗಿ ನೀರ ಪರದೆ ಕಾಣುತ್ತದೆ.
ರೂಪಶ್ರೀ ಕಲ್ಲಿಗನೂರ್‌ ಬರಹ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ