Advertisement

Tag: ವಿಜಯಶ್ರೀ ಹಾಲಾಡಿ

ವಿಜಯಶ್ರೀ ಹಾಲಾಡಿ ಬರೆದ ಈ ಭಾನುವಾರದ ಕತೆ

ಹನ್ನೆರಡು ದಿನಗಳ ನಂತರ ಆಸ್ಪತ್ರೆಯಿಂದ ಮರಳಿ ಬಂದಾಗ ಲತಕ್ಕ ಹೇಳಿದಂತೆ ಹೊಸ ಬದುಕು ಶುರುವಾಯಿತು. ಸೌಮ್ಯಳಿಗೆ ನಿಶ್ಯಕ್ತಿ, ಜ್ವರವಿತ್ತು. ಅದಲ್ಲದೆ ಅವಳು ಯಾರಲ್ಲೂ ಒಂದಕ್ಷರವೂ ಮಾತಾಡುತ್ತಿರಲಿಲ್ಲ. ಏನು ಹೇಳಿದರೂ, ಕೇಳಿದರೂ ಒಂದೋ ಮುಖ ತಿರುಗಿಸಿಕೊಂಡು ಮಲಗಿ ಬಿಡುತ್ತಿದ್ದಳು ಅಥವಾ ಮನೆಯ ಜಂತಿ ಕಾಣುತ್ತ ಸುಮ್ಮನಿರುತ್ತಿದ್ದಳು. ಶಾಕ್ ಆಗಿದೆ ಅವಳಿಗೆ, ಕ್ರಮೇಣ ಸರಿಯಾತ್ತ್ ಅಂದಿದ್ದರು ಲತಕ್ಕ. ಹೊತ್ತು ಕಂತುವುದನ್ನೇ ಕಾದು ಕೂತು ಮಿಣ್ಕು ಸಾಸ್ಮೆ, ಉಪ್ಪು, ಬೆಳ್ಳುಳ್ಳಿ ಸಿಪ್ಪೆ, ಈರುಳ್ಳಿ ಸಿಪ್ಪೆ, ಒಣಮೆಣಸಿನ ಚೊಟ್ಟು, ಎಲ್ಲ ಒಟ್ಟು ಮಾಡಿಕೊಂಡು ಮೊಮ್ಮಗಳಿಗೆ ಸುಳಿದು ಒಲೆಗೆ ಹಾಕಿ ಚಟಪಟಗುಟ್ಟಿಸಿ ದೃಷ್ಟಿ ತೆಗೆಯುತ್ತಿದ್ದಳು.
ವಿಜಯಶ್ರೀ ಹಾಲಾಡಿ ಕಥಾ ಸಂಕಲನ “ಉಮ್ಮಲ್ತಿ ಗುಡಿಯ ಸಾಕ್ಷಿ”ಯ ಕತೆ “ಚನ್ನೆಮಣೆ”

Read More

ನಾಯಿಕುರ್ಕನ ನೆರಳಿನಲ್ಲಿ: ವಿಜಯಶ್ರೀ ಹಾಲಾಡಿ ಕೃತಿಯ ಒಂದು ಪ್ರಬಂಧ

ಎಲ್ಲರೂ ಒಟ್ಟಾಗಿ ಅನ್ನ, ತಿಂಡಿ ತಿನ್ನುವಾಗ ಕರಿಯನ ಗಲಾಟೆಯೇ ಗಲಾಟೆ. ಯಾರಿಗೂ ತಿನ್ನಲು ಬಿಡದೆ ತಾನೇ ಎಲ್ಲವನ್ನೂ ಮುಕ್ಕಬೇಕೆನ್ನುವುದು ಅವಳ ಆಸೆ. ಎಂಥಾ ಬೊಬ್ಬೆ! ನನಗೆ ಏನು ಮಾಡಬೇಕೆಂಬುದೇ ತಿಳಿಯುತ್ತಿರಲಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಡೆ ಊಟ ಹಾಕುವ ವ್ಯವಸ್ಥೆ ಮಾಡಿಕೊಂಡೆ. ಆದರೆ ಎಲ್ಲ ಕಡೆಯೂ ಹೋಗಿ ತಾನೇ ಬಾಯಿಹಾಕಿ ಯಾರಿಗೂ ಸರಿಯಾಗಿ ತಿನ್ನಲು ಬಿಡದೆ, ಕರಿಯ ಅವಸ್ಥೆ ಕೊಡುತ್ತಿದ್ದಳು. ಕೊನೆಕೊನೆಗೆ ಕೋಲು ಹಿಡಿದು ಊಟ ಹಾಕುವ ಪರಿಸ್ಥಿತಿ ಬಂದಿತು. ಈ ನಡುವೆ ಪಾಪದ್ದು ದಾಸುಮರಿ ತುಂಬಾ ಕಷ್ಟ ಅನುಭವಿಸಿತು. ಅದಕ್ಕೆ ಬೇಗ ಬೇಗ ತಿನ್ನಲು ಆಗುತ್ತಿರಲಿಲ್ಲ. ಎಲ್ಲವನ್ನೂ ಕರಿಯನೇ ತಿಂದುಹಾಕುತ್ತಿತ್ತು. ಇಷ್ಟೇ ಆಗಿದ್ದರೆ ಹೋಗಲಿ ಅನ್ನಬಹುದಿತ್ತು.
ವಿಜಯಶ್ರೀ ಹಾಲಾಡಿ ಪ್ರಬಂಧಗಳ ಸಂಕಲನ “ಕಾಡಿನ ಸಂಗೀತ” ಕೃತಿಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಪಪ್ಪುನಾಯಿ ಮತ್ತು ದೆಯ್ಯದ ಚಪ್ಪಲಿ: ವಿಜಯಶ್ರೀ ಹಾಲಾಡಿ ಪ್ರಬಂಧ

ಮಲೆನಾಡು, ಕರಾವಳಿ ಭಾಗದ ಹಳ್ಳಿಯ ಮನೆ ಮನೆಗಳಲ್ಲಿ ನಾಯಿಗಳಿರುವುದು ಕಡ್ಡಾಯ. ಕಾಡು, ಹಾಡಿ, ಗುಡ್ಡ, ಬಯಲುಗಳ ನಡುವೆ ಫರ್ಲಾಂಗುಗಳ ಅಂತರದಲ್ಲಿ ಅವಿತುಕೊಂಡಿರುವ ಮನೆಗಳ ರಕ್ಷಣೆಗೆ, ಜೀವಂತಿಕೆಗೆ ನಾಯಿಗಳು ಅನಿವಾರ್ಯ. ಕಳ್ಳಕಾಕರು, ಜೀವಾದಿಗಳು, ದೆವ್ವ-ಭೂತ-ಪೀಡೆ-ಕುಲೆಗಳನ್ನು ಕೂಡಾ ನಾಯಿಗಳು ದೂರವಿಡುತ್ತವೆಂಬ ನಂಬಿಕೆಯಿದೆ! ಮನುಷ್ಯರ ಕಣ್ಣಿಗೆ ಕಾಣದ ದೆವ್ವ ಭೂತಗಳು ನಾಯಿಗಳಿಗೆ ಕಾಣುತ್ತವಂತೆ, ಇದರಿಂದಾಗಿಯೇ ಅವು ರಾತ್ರಿಯಿಡೀ ಬೊಗಳುವುದಂತೆ! ನಮ್ಮ ಹಳ್ಳಿಯವರ ಈ ತರದ ಕಲ್ಪನೆಗಳಿಗೆ ಯಾವುದೇ ಆಧಾರವಿಲ್ಲವಾದರೂ ಇಂತವುಗಳನ್ನು ಕೇಳುವುದು ರೋಮಾಂಚನಕಾರಿಯಾಗಿತ್ತು.
ವಿಜಯಶ್ರೀ ಹಾಲಾಡಿ ಹೊಸ ಪ್ರಬಂಧ ಸಂಕಲನ “ಕಣ್ಣ ಕಾಡಿದ ಹಾಡು” ಒಂದು ಪ್ರಬಂಧ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರ ಕಥಾಲೋಕ…

“ಧಾರವಾಡದಲ್ಲಿ ಪಿಯುಸಿಯಲ್ಲಿದ್ದಾಗ ‘ಗಾಳಿಪಟ’ ಎಂಬ ಕತೆ ಬರೆದಿದ್ದೆ‌‌. ಅದಕ್ಕೂ ಮುನ್ನ ‘ಗೋಧಾವರಿ’ ಎಂಬ ಕತೆಯನ್ನು ಬರೆದು ಸ್ನೇಹಿತರ ಮುಂದೆ ಇಟ್ಟಾಗ, ಹಾಸ್ಟೇಲಿನ ದೋಸ್ತರೆಲ್ಲ ಅದನ್ನು ಓದಿ “ಚೊಲೋ ಬರ್ದಿ” ಎಂದು ಬೆನ್ನುತಟ್ಟಿದ್ದರು‌. ತುಷಾರ ಕಥಾ ಸ್ಪರ್ಧೆಗೆಂದು ಬರೆದಿದ್ದ ಕತೆ ಅದು. ಕೈಬರಹದಲ್ಲಿದ್ದ ಆ ಕತೆಯ ಪ್ರತಿಯನ್ನು, ಮತ್ತೊಮ್ಮೆ ಓದಿ ಕೊಡುವುದಾಗಿ ನನ್ನಿಂದು ಇಸಿದುಕೊಂಡು ಹೋದ ದೋಸ್ತ ಇನ್ನೂ ವಾಪಸ್ ಕೊಟ್ಟಿಲ್ಲ. ಮಂಜುನಾಯಕ ಚಳ್ಳೂರರ “ಫೂ” ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸಿಕ್ಕಿದ್ದು ಇದೇ ಸಂದರ್ಭದಲ್ಲಿ ಅವರ ಕಥಾಲೋಕದ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಕರುಣಾಳು ಬಾ ಇರುಳೇ

ಈಗ ಹಗಲಿನಲ್ಲಿ ಮತ್ತು ರಾತ್ರಿ ಕೂಡಾ ಜನನಿಬಿಡ ಪೇಟೆಯ ಮಧ್ಯೆ, ಝಗಮಗಿಸುವ ಕಾಂಕ್ರೀಟ್ ರಂಗಸ್ಥಳದಲ್ಲಿ ನಡೆಯುವ ಆಟಗಳು ಅಂಥಾ ತೀವ್ರ ಅನುಭವದಿಂದ ರೈಸುವುದೇ ಇಲ್ಲ. ಕತ್ತಲು ಮತ್ತು ಕಾಡುಮೇಡುಗಳ ಹಿನ್ನೆಲೆಯೇ ಯಕ್ಷಗಾನ, ಭೂತಕೋಲ, ನಾಗಮಂಡಲ ಮುಂತಾದವುಗಳಿಗೆ ಸೊಬಗಿನ ಮುಖವೊಂದನ್ನು ಒದಗಿಸುತ್ತದೆ. ಯಕ್ಷಗಾನಕ್ಕೆ ಹೋಗುವ ಮಾರ್ಗದಲ್ಲಿ ಕಾಡಿನ ದಾರಿಯಲ್ಲಿ ಸೂಡಿ ಬೀಸುತ್ತಾ, ಸುತ್ತಲೂ ಇರಬಹುದಾದ ಹಲವು ಜೀವಾದಿಗಳಿಗೆ ಹೆದರಿಸುವಂತೆ (ಅಥವಾ ತಾವೇ ಹೆದರಿ) ಗಟ್ಟಿ ಗಂಟಲಲ್ಲಿ ಹರಟುತ್ತಾ ಹಳ್ಳಿಗರು ನಡೆದುಹೋಗುವ ಹೊತ್ತು ರಸಗಳಿಗೆ. ವಿಜಯಶ್ರೀ ಹಾಲಾಡಿ ಬರಹ

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ