Advertisement

Tag: ವಿವೇಕ ಶಾನಭಾಗ

ಶಬ್ದ ಸಂವೇದನೆಯ ಒಳ ವಿನ್ಯಾಸ “ಘಾಚರ್ ಘೋಚರ್”: ದೇವಿಕಾ ನಾಗೇಶ್‌ ಬರಹ

“ಘಾಚರ್ ಘೋಚರ್” ಒಂದು ‘ನೀಳ್ಗತೆ ಎಂದು ಕೃತಿಯ ಲೇಖಕ ವಿವೇಕ ಶಾನಭಾಗ ಕರೆದರೂ ಇದು ಎರಡು ತಲೆಮಾರಿನ ಜೀವನಪಯಣದ ಓಟದಲ್ಲಿನ ಏಳುಬೀಳುಗಳನ್ನು ಪಲ್ಲಟವನ್ನೂ ಅಮೂಲಾಗ್ರವಾಗಿ ದಾಖಲಿಸುತ್ತದೆ. ‘ಘಾಚರ್ ಘೋಚರ್ʼ ಈ ಯುಗಳ ಪದ ನಮ್ಮ ಇಡೀ ಬದುಕೆ ಗೋಜಲಾಗಿರುವ ಕ್ರಮಕ್ಕೆ ಭಾವ ಪ್ರತಿನಿಧಿಯಂತೆ ಅನುರಣನಗೊಳ್ಳುತ್ತದೆ’ ಎಸ್. ಆರ್. ವಿಜಯಶಂಕರ್ ಮಾತಿದು. ಆದರೆ ಎಪ್ಪತ್ತು ಪುಟಗಳ ಕಿರು ಕಾದಂಬರಿ ಗಾತ್ರದ ಈ ಕಥೆಯ ಪಾತ್ರಗಳು ಒಂದು ಕುಟುಂಬದ ಭೂಮಿಕೆಯಿಂದ ಹೊರ ಜಗತ್ತಿಗೆ ವಿಸ್ತರಿಸಿಕೊಳ್ಳುತ್ತ ಸಾಗುವ ಚಲನೆ ಮೂಡಿಸುವ ತಲ್ಲಣ ದಂಗು ಬಡಿಸುವಂತಿದೆ.
ವಿವೇಕ ಶಾನಭಾಗ ಕಥಾಸಂಕಲನ “ಘಾಚರ್‌ ಘೋಚರ್”‌ ಕುರಿತು ದೇವಿಕಾ ನಾಗೇಶ್‌ ಬರಹ

Read More

ಶಾಂತಿನಾಥ ದೇಸಾಯಿಯವರ ಕೃತಿಗಳಲ್ಲಿ ವ್ಯಕ್ತಿಸ್ವಾತಂತ್ರ್ಯದ ಬಿಕ್ಕಟ್ಟುಗಳು

ಆಧುನಿಕತೆಯು ನಮ್ಮ ಮನಸ್ಸಿಗೆ ಇತ್ತ ಸ್ವಾತಂತ್ರ್ಯವನ್ನು ಮೊಟ್ಟಮೊದಲ ಬಾರಿಗೆ ಕನ್ನಡ ಗದ್ಯ ಸಾಹಿತ್ಯದಲ್ಲಿ ಸ್ಪಷ್ಟವಾಗಿ ಗ್ರಹಿಸಿದವರು ದೇಸಾಯರು. ಅವರ ಪಾತ್ರಗಳು ಈ ಸ್ವಾತಂತ್ರ್ಯವನ್ನು ನಿಭಾಯಿಸಲಾಗದ ತಮ್ಮ ವೈಫಲ್ಯದಿಂದ ಕಂಗೆಡುವಂಥವರು. ಸಂಪೂರ್ಣ ಸ್ವಾತಂತ್ರ್ಯವನ್ನು ಭರಿಸುವುದು ಎಷ್ಟು ಕ್ಲಿಷ್ಟಕರವಾದದ್ದು ಮತ್ತು ಈ ಹಾದಿ ಹೆಜ್ಜೆಹೆಜ್ಜೆಗೂ ಎಂಥ ವೈಫಲ್ಯಗಳಿಂದ ಕೂಡಿದ್ದು ಎಂಬುದು ಅವರ ಕಥೆಗಳ ಅಂತರಂಗವನ್ನು ಪ್ರವೇಶಿಸಿದಾಗಲೇ ಗೊತ್ತಾಗುವ ಸಂಗತಿ.
ಕುವೆಂಪು ವಿಶ್ವವಿದ್ಯಾಲಯ ಪ್ರಕಟಿಸಿರುವ “ಶಾಂತಿನಾಥ ದೇಸಾಯಿ ಸಾಹಿತ್ಯ-ವ್ಯಕ್ತಿತ್ವ” ಕೃತಿಯಲ್ಲಿನ ಕಥೆಗಾರ ವಿವೇಕ ಶಾನಭಾಗ ಬರೆದ ಲೇಖನ ನಿಮ್ಮ ಓದಿಗೆ

Read More

ಸಕೀನಾಳ ಮುತ್ತು: ರಮ್ಯತೆಯ ಹಿಂದಿನ ಅಸಂಗತತೆ

ಮನುಷ್ಯ ಭೂತ ಮತ್ತು ಭವಿಷ್ಯದ ಸಂಗತಿಗಳ ನಡುವೆ ಪಕ್ವವಾಗುವ ವರ್ತಮಾನದ ಹಾದಿಯಲ್ಲಿ ಸಾಗಬೇಕಾಗಿರುವುದು. ಕಾಲದ ಸಮಗ್ರತೆಯಲ್ಲಿ ಮನುಷ್ಯನ ಅರ್ಥವಾಗಿಯೂ ಅರ್ಥವಾಗದ ಸ್ವಭಾವಗಳು, ಕ್ಲೀಷೆಯೆನಿಸುವ ವ್ಯಕ್ತಿತ್ವಗಳನ್ನು ಅರ್ಥೈಸಿಕೊಳ್ಳುವುದು ಕೆಲವೊಮ್ಮೆ ಸುಲಭ, ಇನ್ನು ಕೆಲವೊಮ್ಮೆ ಅಷ್ಟೇ ಕಷ್ಟಕರವೂ ಆಗಿ ಪರಿಣಮಿಸುತ್ತದೆ. ಘಟಿಸಿಹೋದ ಸಂಗತಿಗಳಿಂದ ಕಲಿತ ಚಿಕ್ಕ ಪುಟ್ಟ ಅನುಭವಗಳು, ವಿಚಾರಗಳು ನಮ್ಮ ಭವಿಷ್ಯದ ನೆಲೆಯಲ್ಲಿ ವರ್ತಮಾನದ ವರ್ತನೆಗಳನ್ನು ಹೇಗೆ ನಿಯಂತ್ರಿಸುತ್ತವೆ ಎಂಬುದು ಅಷ್ಟೇ ಗಮನಾರ್ಹ.
ವಿವೇಕ ಶಾನಭಾಗ ಬರೆದ “ಸಕೀನಾಳ ಮುತ್ತು” ಕಾದಂಬರಿಯ ಕುರಿತು ನಾಗರೇಖಾ ಗಾಂವಕರ ಬರಹ

Read More

ಅಬ್ದುಲ್ ರಶೀದ್ ಕಥಾಸಂಕಲನಕ್ಕೆ ವಿವೇಕ ಶಾನಭಾಗ ಬರೆದ ಮುನ್ನುಡಿ

ಕತೆ ಜರುಗುವ ಆವರಣವು ಅನುಭವದ ಅವಿಭಾಜ್ಯ ಎಂಬುದನ್ನು ಅರಿತು ಅದನ್ನು ಸಹಜ ಸರಾಗತೆಯಲ್ಲಿ ಸಿದ್ಧಿಸಿಕೊಂಡವರು ರಶೀದ್. ಅವರ ಮೊದಲ ಕತೆಯಿಂದಲೂ ಇದನ್ನು ಕಾಣಬಹುದು. ಇಲ್ಲಿಯ ‘ಮೋಹಕ ದ್ವೀಪದ ಮೂಗಿನ ತುದಿ’ ಕತೆಯೊಳಗೆ ಬರುವ ವಿವರಗಳು, ಘಟನೆಗಳು, ಮಾತುಗಳು ಆ ಆವರಣದಲ್ಲಿ ಅಲ್ಲದೇ ಬೇರೆಲ್ಲೂ ಘಟಿಸಲು ಅಸಾಧ್ಯವೆನ್ನುವ ಹಾಗೆ ಸಂಯೋಜನೆಗೊಂಡಿವೆ.
ಕತೆಗಾರ ಅಬ್ದುಲ್‌ ರಶೀದ್‌ ಹೊಸ ಕಥಾ ಸಂಕಲನ “ಲಾರ್ಡ್ ಕಾರ್ನ್‌ವಾಲೀಸ್ ಮತ್ತು ಕ್ವೀನ್‌ ಎಲಿಜಬೆತ್‌” ಗೆ ವಿವೇಕ ಶಾನಭಾಗ ಬರೆದ ಮಾತುಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ