Advertisement

Tag: ಶಶಿಧರ ಹಾಲಾಡಿ

ಸ್ವಾತಂತ್ರ್ಯ ಪೂರ್ವೋತ್ತರದ ಸಂಘರ್ಷ: ಬಿ. ಕೆ. ಮೀನಾಕ್ಷಿ ಬರಹ

ಒಂದು ಸ್ಥಳದಿಂದ ನಿರ್ಗತಿಕರಾಗಿ ಓಡಿಬಂದವರಿಗೆ ಅನ್ನ ಆಶ್ರಯ ನೀಡಿ ಬದುಕು ಕೊಟ್ಟವರ, ಬದುಕನ್ನೇ ಬುಡಮೇಲು ಮಾಡುವ ಕೆಲಸಗಾರರ ಚಿತ್ರಣ, ಅದಕ್ಕೆ ಕುಮ್ಮಕ್ಕು ನೀಡಿ ಜಮೀನನ್ನೆಲ್ಲ ತಮ್ಮ ವಶ ಮಾಡಿಕೊಳ್ಳುವ ಕೆಲಸಗಾರರ ದಬ್ಬಾಳಿಕೆ, ನಿಯತ್ತಿಗೆ ಹೊರತಾದ ಅವರ ಕಾರ್ಯಭಾರವೆಲ್ಲದರ ಚಿತ್ರಣ ಗಮನಿಸಿದರೆ, ದ್ರೋಹವೆಂಬುದು ಸಾರ್ವಕಾಲಿಕವಾದದ್ದು, ಮನುಷ್ಯನ ಕುಟಿಲತೆ, ನೀಚ ಪ್ರವೃತ್ತಿ ಸಾವಿರ ವರ್ಷ ಕಳೆದರೂ ಬದಲಾಗದಂತಹುದು ಎಂಬುದು ಕಠೋರ ಸತ್ಯವಾಗಿ ಮನಸ್ಸನ್ನು ಆವರಿಸುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ನದಿ ದಾಟಿ ಬಂದವರು” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಪರಿಸರದ ಪಾಠಕ್ಕೆ ಇದೇ ಸೂಕ್ತ ತಾಣ!

ಪ್ರಕೃತಿಯ ಮೊದಲ ಪಾಠಗಳನ್ನು ನಾನು ಕಲಿತದ್ದು ಆ ಹಕ್ಕಲಿನಲ್ಲಿ ಎಂದು ಹೇಳಿದರೆ ತಪ್ಪಾಗದು. ಹಾಗೆ ನೋಡಿದರೆ, ನಮ್ಮ ಹಳ್ಳಿಯ ಮನೆಯ ಪರಿಸರವೇ ಒಂದು ಒಳ್ಳೆಯ ಪಾಠಶಾಲೆ. ಮನೆ ಎದುರು ಗದ್ದೆ, ಮನೆ ಸುತ್ತಲೂ ಮರಗಳು, ಮನೆಯ ಛಾವಣಿಯ ಮೇಲೆ ಚಾಚಿಕೊಂಡ ಭಾರೀ ಗಾತ್ರದ ಹಲಸಿನ ಮರ, ಇಪ್ಪತ್ತು ಅಡಿ ದೂರದಲ್ಲಿರುವ ಬೃಹತ್ ಗಾತ್ರದ ಎರಡು ತಾಳೆ ಮರಗಳ ಒಣಗಿದ ಎಲೆಗಳು ಮಾಡುವ ಬರಬರ ಸದ್ದು, ಅಂಗಳದ ಅಂಚಿನ ಹೂಗಿಡಗಳು, ಬಳ್ಳಿಗಳು, ದಾಸವಾಳ, ಬೆಟ್ಟ ತಾವರೆ – ಪಟ್ಟಿ ಮಾಡುತ್ತಾ ಹೋದರೆ ಬೇಗನೆ ಮುಗಿಯದು. ಜತೆಗೆ ನಾವು ಶಾಲೆಗೆ ಹೋಗುತ್ತಿದ್ದ ದಾರಿಯೂ ಇನ್ನೊಂದು ಪಾಠಶಾಲೆ.
ಇತ್ತೀಚೆಗಷ್ಟೇ ಬಿಡುಗಡೆಯಾದ ಶಶಿಧರ ಹಾಲಾಡಿಯವರ “ನಾ ಸೆರೆಹಿಡಿದ ಕನ್ಯಾಸ್ತ್ರೀ” ಪ್ರಬಂಧ ಸಂಕಲನದ ಒಂದು ಬರಹ ನಿಮ್ಮ ಓದಿಗೆ

Read More

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ