Advertisement

Tag: ಸಣ್ಣಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ

ಇದೇ ಗುಣವಿಶೇಷಣಗಳೂ ಹಾಗೂ ಅವನ ಅಯಸ್ಕಾಂತದಂತಹ ನಗುವೆ ಸಿಂಧೂಳನ್ನು ಅವನಿಗೆ ಕಚ್ಚಿಕೊಳ್ಳುವಂತೆ ಮಾಡಿದ್ದು. ಮ್ಯಾಗ್ನೆಟ್ಟಿನ ಎರಡು ಧ್ರುವಗಳು ಪರಸ್ಪರ ಆಕರ್ಷಣೆ, ವಿಕರ್ಷಣೆಗೊಳ್ಳುವಂತೆ ಒಮ್ಮೆ ಅವನಿಂದ ವಿಮುಖಗೊಂಡರೆ ಮತ್ತೊಮ್ಮೆ ಅವನನ್ನರಸಿ ಸೆಳೆತ ತೀವ್ರವಾಗಿ ಬಳಿಗೋಡುತ್ತಿದ್ದಳು. ಅವನಿಗೂ ಸಿಂಧುವಿನ ಅಗತ್ಯವಿಲ್ಲವೇನಂತಿಲ್ಲ. ಭೌತಿಕ ಅಗತ್ಯಗಳ ಜೊತೆಗೆ ಮಾನಸಿಕವಾಗಿಯೂ ಸಾಥಿಯವಳು. ಅವರಿಬ್ಬರಿಗೂ ತಮ್ಮ ಬೌದ್ಧಿಕ ಮಟ್ಟಕ್ಕೆ ಸಾಟಿಯಾಗುವಂತಹ ಗೆಳೆಯರು ಇಂತಹ ಊರಿನಲ್ಲೆಲ್ಲಿ ಸಿಗಬೇಕು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಮತಾ ಅರಸೀಕೆರೆ ಕತೆ

Read More

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ