Advertisement

Tag: ಸಾಹಿತ್ಯ

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ನುಡಿ ರಂಗವಲ್ಲಿ: ಶ್ರುತಿ ಬಿ.ಆರ್.‌ ಕಥಾಸಂಕಲನಕ್ಕೆ ಡಾ. ರಾಜೇಂದ್ರ ಚೆನ್ನಿ ಮುನ್ನುಡಿ

‘ಎಲ್ಲೆಗಳ ದಾಟಿದವಳು’ ಯಶಸ್ವಿಯಾದ ಕತೆಯಾಗಿದೆ. ಕತೆಯ ಪ್ರವೇಶದ ಭಾಗವು ಅಜ್ಜಿ ಮತ್ತು ಮೊಮ್ಮಗಳ ಪ್ರೀತಿ ಹಾಗೂ ತುಂಟತನದ ಸಂಬಂಧವನ್ನು ಕತೆಯ ಅರ್ಥಪೂರ್ಣ ಭಾಗವನ್ನಾಗಿಸುತ್ತದೆ. ಏಕೆಂದರೆ ಕತೆಯ ಮುಖ್ಯ ಭಾಗವನ್ನು ನಿರೂಪಿಸುವ ಅಜ್ಜಿ ಕೂಡ ಎಲ್ಲೆಗಳ ದಾಟದವಳು. ತನ್ನ ಸ್ವಂತ ವ್ಯಕ್ತಿತ್ವ, ಸ್ವಾತಂತ್ರ್ಯಗಳನ್ನು ಬಿಟ್ಟುಕೊಡಲು ಸಿದ್ಧವಿಲ್ಲದ ಹಟಮಾರಿ, ಹಾಗೆ ನೋಡಿದರೆ ಗಂಡಾಳ್ವಿಕೆ, ಕುಟುಂಬದೊಳಗಿನ ಕ್ರೌರ್ಯ ಇವೆಲ್ಲವುಗಳ ನಿರಂತರತೆಯ ನಡುವೆ ಹೆಣ್ಣು ಕೇವಲ ಗುಲಾಮಳಲ್ಲವೆನ್ನುವುದನ್ನು ಕತೆಯು ಪ್ರತಿಪಾದಿಸುತ್ತದೆ.
ಶ್ರುತಿ ಬಿ.ಆರ್.‌ ಕಥಾಸಂಕಲನ “ಎಲ್ಲೆಗಳ ದಾಟಿದವಳು” ಕೃತಿಗೆ ಡಾ. ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ ಇಲ್ಲಿದೆ

Read More

ಗೌತಮ ಜ್ಯೋತ್ಸ್ನಾ ಬರೆದ ಈ ಭಾನುವಾರದ ಕತೆ

ವತ್ಸನ ಹೊಟ್ಟೆಯೊಳಗೆ ಏನೋ ಚುಚ್ಚಿದ ಹಾಗೆ ನೋವು, ಇಡೀ ಶರೀರ ಬಿಗಿಯಾಗುತ್ತಿದ್ದ ಭಾವ. ಆ ಬಾರಿನ ದೀಪದ ಬುರುಡೆಗಳು ಈಗ ದಟ್ಟ ಹಳದಿ ಪ್ರಭೆಯಲ್ಲಿ ಧಗಧಗಿಸುತ್ತಿದ್ದವು, ಯಾವುದೋ ಅನ್ಯ ಗ್ರಹದಲ್ಲಿ ಗ್ರಹಣವಾದಾಗ ಮಬ್ಬಾಗಿ ಬೆಳಕಾದಂತೆ.
ಗೌತಮ ಜ್ಯೋತ್ಸ್ನಾ ಹೊಸ ಕಥಾ ಸಂಕಲನ “ಜಕ್ಕಿಣಿ” ಬಿಡುಗಡೆಯಾಗುತ್ತಿದ್ದು, ಈ ಸಂಕಲನದ ಒಂದು ಕತೆ “ಮಾರೀಚ
ಅಥವಾ ಒಂದು ಅಪಾಯಕಾರಿ ಮನಸ್ಸಿನ ಪ್ರಣಯ ಪ್ರಸಂಗ” ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ