Advertisement

Tag: ಸಾಹಿತ್ಯ

ಪ್ರಸ್ತುತ ಕಾಲಘಟ್ಟ ಮತ್ತು “ಬೆಂಕಿಯ ನೆರಳು”: ಎನ್.ಎಸ್. ಚಿದಂಬರರಾವ್ ಕಾದಂಬರಿಯ ಕುರಿತು ಸಿಂಧೂರಾವ್‌ ಟಿ. ಬರಹ

ಎಲ್ಲಾ ಕಾಲದಲ್ಲೂ ತಮ್ಮ ತಮ್ಮ ಪರಿಸ್ಥಿತಿಗಳಲ್ಲಿ ಸ್ವತಂತ್ರ ಆಲೋಚನೆ ಮತ್ತು ನಡವಳಿಕೆ ತೋರುವುದಕ್ಕೆ ಎಲ್ಲ ಯುವಜನಾಂಗವೂ ಆಶಿಸುತ್ತಲೆ ಇರುತ್ತದೆ. ಅದು ಸಹಜ ಮತ್ತು ಹಾಗೇ ಇರಬೇಕಾದ್ದು. ಕಾಲಕ್ಕೆ ತಕ್ಕಂತೆ ಅವರ ಅಭಿವ್ಯಕ್ತಿಗಳಿಗೆ ನಡವಳಿಕೆಗಳಿಗೆ ಕಡಿವಾಣಗಳು ಬಿಗಿಯಾಗಿ, ಸಡಿಲಾಗಿ, ಉದುರಿಹೋಗಿ ಎಲ್ಲಾ ಆಗಿದೆ. ಈ ಸ್ಥಿತ್ಯಂತರದ ಕಾಲವನ್ನು ಅವರು ಆತ್ಮವಿಶ್ವಾಸ, ಓದು, ಆರ್ಥಿಕ ಸ್ವಾತಂತ್ರ್ಯ ಇದ್ದಾಗ ಹೇಗೆ ನಿಭಾಯಿಸುತ್ತಾರೆ ಎಂಬುದು ಯಶಸ್ಸು ಅಥವಾ ದುರಂತದ ಪರಿಣಾಮವನ್ನು ತಂದಿಡುತ್ತದೆ. ಓದು ಬರಿದೆ ಡಿಗ್ರಿಗಳಾದಾಗ, ಕೆಲಸದ ಪದಕಗಳಾದಾಗ ಏನಾಗುತ್ತದೆ ಎಂಬ ಪರಿಣಾಮವನ್ನು ನೋಡುತ್ತಲೇ ಇದ್ದೇವೆ.
ದಿವಂಗತ ಎನ್.ಎಸ್. ಚಿದಂಬರರಾವ್ ಅವರ “ಬೆಂಕಿಯ ನೆರಳು” ಕಾದಂಬರಿಯನ್ನು ಪುಸ್ತಕ ಮನೆ ಪ್ರಕಾಶನ ಮರುಮುದ್ರಿಸಿದ್ದು, ಈ ಕೃತಿಯ ಕುರಿತು ಸಿಂಧುರಾವ್‌ ಟಿ. ಬರಹ ನಿಮ್ಮ ಓದಿಗೆ

Read More

ಆರ್.‌ ಪವನ್‌ ಕುಮಾರ್‌ ಬರೆದ ಈ ಭಾನುವಾರದ ಕತೆ “ಗುರುತು”

ಸರೋಜಮ್ಮ ಇದನ್ನು ಸರಿ ತಪ್ಪು ಎಂದು ತರ್ಕ ಮಾಡಲು ಹೋಗಲಿಲ್ಲ. ಅವಳೊಳಗೆ ಹೆಣ್ಣಿನ ಅಂತರಂಗದ ತುಮುಲಗಳ ಬಗ್ಗೆ ಗೌರವವಿದ್ದು, ಅದಕ್ಕೆ ಗಂಡು ಸೂಕ್ತವಾಗಿ ಪ್ರತಿಕ್ರಿಯಿಸದೆ ಹೋದರೆ ಇಂಥವೆಲ್ಲಾ ಘಟಿಸಿ ಹೋಗುತ್ತವೆ ಎಂದುಕೊಂಡಿದ್ದಳು. ತನ್ನ ಮಗ ಇದರಲ್ಲಿ ಸಂಪೂರ್ಣ ಸೋತವನೆಂದು ಅರಿವಾಗಿತ್ತು. ಇನ್ನೂ ಮಗನೂ ಅಷ್ಟೇ ತನ್ನ ಚಟಗಳಿಗೆ ಇದನ್ನೆ ಮತ್ತೊಂದು ನೆಪ ಮಾಡಿಕೊಂಡವನು ಮನೆ ಮರೆತು ತನಗೆ ಅನುಕೂಲವಾದ ಕಡೆ ತಿರುಗುತ್ತ ಎಂದಾದರೊಮ್ಮೆ ಮನೆಗೆ ಬರುತ್ತಿದ್ದ.
ಆರ್.‌ ಪವನ್‌ ಕುಮಾರ್‌ ಬರೆದ ಕತೆ “ಗುರುತು” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮೆಕ್ಸಿಕೋ ದೇಶದ ಕವಿ ವಿಕ್ಟರ್ ಡಿ ಲಾ ಕ್ರೂಜ಼್ ಕಾವ್ಯ ಪರಿಚಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಜ಼ಪೊಟೆಕ್‌-ನಲ್ಲಿ ಅವರ ಭಾಷೆಯನ್ನು ‘ಡೈಡ್ಕ್ಸಾಜಾ’ (Diidxazá) ಎಂದು ಕರೆಯಲಾಗುತ್ತದೆ, ಇದು “ನಾಲಿಗೆ” ಮತ್ತು “ಮೋಡ” ಪದಗಳನ್ನು ಸಂಯೋಜಿಸಿ “ಮೋಡಗಳ ಭಾಷೆ” ಎಂಬ ಅರ್ಥ ಬರುವ ಪದವಾಗಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಮೆಕ್ಸಿಕೋ (Mexico) ದೇಶದ ಜ಼ಪೊಟೆಕ್ ಮೂಲಜನಾಂಗಕ್ಕೆ ಸೇರಿದ ಜ಼ಪೊಟೆಕೋ (Zapoteco) ಭಾಷಾ ಕವಿ ವಿಕ್ಟರ್ ಡಿ ಲಾ ಕ್ರೂಜ಼್-ರವರ (Victor De La Cruz, 1948-2015) ಕಾವ್ಯದ ಕುರಿತ ಬರಹ

Read More

ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ

ಈಗ ಮಾತಿಗೆ ಬರಗಾಲ ಬಂದಂತೆ ಪ್ರತಿ ಸಂತೆಯ ವಾತಾವರಣಗಳು ನಿರ್ಮಾಣವಾಗುತ್ತಿದ್ದವು. ಇದೇಕೆಂದು ಅವನಿಗೆ ಈ ಕ್ಷಣಕ್ಕೂ ಅರ್ಥವಾಗಿರಲಿಲ್ಲ. ಜನರೇಕೇ ತನ್ನನ್ನೂ ಆಗುಂತುಕನಂತೆ ಕಂಡು ತನ್ನಿಂದ ಅಂತರ ಕಾಯ್ದುಕೊಳ್ಳುತ್ತಿರುವರೆಂದು ಆಗಾಗ ಯೋಚಿಸುತ್ತಿದ್ದನಾದರು ಅದಕ್ಕೆ ಪೂರಕವೆನಿಸುವ ಉತ್ತರಗಳು ಸಿಗುತ್ತಿರಲಿಲ್ಲ. ಸಂತೆ ಮುಗಿಸಿ ಬರುವಾಗ ಕಾಸೀಂ ಇವತ್ತು ವ್ಯಾಪಾರ ಅಂಥದ್ದು ಏನಿಲ್ಲವಾದರು, ತನಗೆ ಅಪಾರ ಮೀನು ತಿನ್ನುವ ಬಯಕೆಯಾಗಿದೆ. ತನ್ನ ಪೈಜಾಮಾದ ಕಳ್ಳ ಜೇಬಿನೊಳಗೆ ಮುದುರಿ ಮಡಿಸಿಟ್ಟಿದ್ದ ನೂರರ ಒಂದು ನೋಟು ತಗೆದು ಸಂಜೆಯಷ್ಟೇ ಹಿಡಿದು ರಸ್ತೆ ಬದಿಯಲ್ಲಿ ನಿಂತು ಮಾರುತ್ತಿದ್ದ ಜಿಲೇಬಿ ಮೀನುಗಳ ಜತೆ ಬಂದಿದ್ದ. ಈ ಮಾತುಕತೆಯಲ್ಲಿ ಇಬ್ಬರಿಗೂ ಅದರ ಕಡೆ ಗಮನವಿರಲಿಲ್ಲ.
ಆರ್. ಪವನ್‌ ಕುಮಾರ್ ಬರೆದ ಈ ಭಾನುವಾರದ ಕತೆ “ಕಾರ್ಮೋಡ” ನಿಮ್ಮ ಓದಿಗೆ

Read More

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ