Advertisement

Tag: ಸಾಹಿತ್ಯ

ಕಣ್ಣೊರಿಸಿಕೊಂಡ ಪುಟ್ಟ ದೇವರು…

ತರಗತಿಯಿಂದ ತರಗತಿಗೆ ಹಾರಿ ಅದೇ ಶಾಲೆಯಲ್ಲಿ ಕೂತವರಿಗೆ ಒಂದು ರೂಮಿನ ಬದಲಾವಣೆ ಅಷ್ಟೇ.. ತರಗತಿಯಿಂದ ಉಸಿರು ಬಿಗಿ ಹಿಡಿದು ಹಾರಿ ಜಿಗಿದು ಮತ್ತೆಲ್ಲೊ ಮತ್ಯಾವ ಶಾಲೆ, ಕಾಲೇಜಿನ ರೂಮಿನಲ್ಲೊ ಇಲ್ಲಿ ಕಿತ್ತುಕೊಂಡು ಬಂದ ಓದಿನ ಗಿಡವನ್ನು ಅಲ್ಲಿ ನೆಟ್ಟು ಪೋಷಿಸಬೇಕು. ಕಿತ್ತು ನಡೆಯುವ ಹೊತ್ತಲ್ಲಿ ಗಂಟಲಿಗೆ ಬಂದು ಆತು ಕೂತುಕೊಳ್ಳುತ್ತಲ್ಲಾ ಆ ದುಃಖ ಮತ್ತು ಅದನ್ನು ನುಂಗಿ ಸಾಯಿಸಿ ಸಾಯಿಸಿ ನಗಬೇಕಲ್ಲ ಆ ಸಂಕಟ, ಮತ್ತು ಪಿಳಿಪಿಳಿ ಕಣ್ಣುಗಳಿಂದ ಬಂದೇ ಬಿಡುತ್ತಲ್ಲ ಆ ಪವಿತ್ರ ಕಣ್ಣೀರು.. ಓ ಎಂತ ಪಾಪಿಷ್ಟ ಗಳಿಗೆ ಅದು.
ಸದಾಶಿವ ಸೊರಟೂರು ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ಕಪ್ಪುಬಿಳುಪಿನ ಉತ್ತರ ಕೊಡಲಾಗದ ಪ್ರಶ್ನೆಗಳು

ಬಸ್ಸಿನ ಕಿಟಕಿ ಸರಿಸಿದೆ. ಮಳೆಯ ಬಿಡಿಬಿಡಿ ಹನಿ ಈ ಬಾರಿ ಅಷ್ಟು ಕಿರಿಕಿರಿಗೊಳಿಸಲಿಲ್ಲ. ಆದರೂ ಗಂಡನ ಗೆಳೆಯ ಮತ್ತು ಆ ಮಂಗಳಮುಖಿಯ ಬಗ್ಗೆ ಯಾವುದೋ ಅವ್ಯಕ್ತ ಭಯ ಆಳದಲ್ಲಿತ್ತು. ಗಂಡ ನೂತನನಿಗೆ ಬೇರೆ ಯಾವ ಆಯ್ಕೆಗಳೂ ಇರಲಿಲ್ಲವಾ? ನೂತನ್ ನನ್ನನ್ನು ನಿಜಕ್ಕೂ ಇಷ್ಟ ಪಡುತ್ತಿದ್ದಾನಾ? ಅಥವಾ ಕೇವಲ ತನ್ನ ಕರ್ತವ್ಯವನ್ನಷ್ಟೇ ನಿಭಾಯಿಸುತ್ತಿದ್ದಾನಾ? ಎಲ್ಲವೂ ಗೋಜಲು ಗೋಜಲಿಗೆ ಇಟ್ಟುಕೊಂಡಿತು. ನನ್ನ ಗಂಡ ಬೈಸೆಕ್ಷುಯಲ್ ಅನ್ನುವುದನ್ನು ಒಪ್ಪಿಕೊಳ್ಳುವುದಕ್ಕೆ ಯಾಕಿಷ್ಟು ಭಯಪಟ್ಟುಕೊಳ್ಳುತ್ತಿದ್ದೇನೆ? ಯಾವುದೇ ಭಿಡೆಯಿಲ್ಲದೆ ಮುಕ್ತವಾಗಿ ಪ್ರಶ್ನೆಗಳಿಗೆ ಉತ್ತರಿಸುವ ನಾನು ಇರುವುದನ್ನು ಇರುವ ಹಾಗೆ ಒಪ್ಪಿಕೊಳ್ಳಲು ಯಾಕಿಷ್ಟು ಭಯ ಪಟ್ಟುಕೊಳ್ಳುತ್ತಿದ್ದೇನೆ?
ದಾದಾಪೀರ್‌ ಜೈಮನ್‌ ಬರೆಯುವ “ಜಂಕ್ಷನ್‌ ಪಾಯಿಂಟ್” ಅಂಕಣದಲ್ಲಿ ಹೊಸ ಬರಹ

Read More

ಡಾ. ಜ್ಯೋತಿ ಬರೆದ ಈ ಭಾನುವಾರದ ಕತೆ

ನಾನು, ಮಕ್ಕಳೊಂದಿಗೆ ಕಾಡು ಮೇಡು ಸುತ್ತುತ್ತಾ ಕಷ್ಟನಷ್ಟ ಅನುಭವಿಸುವಾಗ ಜೊತೆಗಿದ್ದು, ಅಂತೂ ಈಗ ಗದ್ದುಗೆ ಸಿಕ್ಕ ಮೇಲೆ ವೈರಾಗ್ಯ ಮೂಡಿ, ಅಕ್ಕ ಭಾವನ ಹಿಂದೆ ಹೆಜ್ಜೆಯಿಡುವ ನಿರ್ಧಾರ ಮಾಡಿ, ಕಾಡಿನತ್ತ ಮುಖ ಮಾಡಿದೆ. ನನ್ನ ಮಕ್ಕಳಿಗೆ ತಕ್ಷಣ ನಂಬಲಾಗಲಿಲ್ಲ. ಮೊದಲು ನಾನೂ ಹಾಗೆಯೇ ಅಂದುಕೊಂಡಿದ್ದೆ. ಆದರೆ ಕುರುಕ್ಷೇತ್ರ ಯುದ್ಧರಂಗ ನೋಡಿದ ಮೇಲೆ ನನಗೆ ವೈರಾಗ್ಯ ಮೂಡಿತು. ಈ ವೈಭೋಗ, ಒಣ ಪ್ರತಿಷ್ಠೆ ಯಾವುದೂ ನನಗೆ ಬೇಕಿಲ್ಲವೆನಿಸಿತು. -ಡಾ.ಜ್ಯೋತಿ ಬರೆದ ಕತೆ ‘ಕುಂತಿಯ ಮುಸ್ಸಂಜೆ ಮಾತು’ ಇಂದಿನ ಓದಿಗಾಗಿ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ