“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿ ಬರಹ
ಹಾಗಾದರೆ ಉಳಿದಲ್ಲಿ ಏನಾದೀತು? ‘ಗ್ಲೋಬಲ್ ವಾರ್ಮಿಂಗ್’ನಿಂದಾಗಿ ಕಡಲು ಹೆಚ್ಚು ಬಿಸಿಯಾಗುವುದರಿಂದ, ಹೆಚ್ಚು ಮೋಡಗಳುಂಟಾಗಿ, ಆಕಾಶದಲ್ಲಿ ಹೆಚ್ಚು ಮೋಡ ಶೇಖರಣೆಯಾಗಿ ಹೆಚ್ಚು ಮಳೆ ಸುರಿಯುತ್ತದೆ, ಹೆಚ್ಚು ಸಿಡಿಲು ಮಿಂಚು ಭೂಮಿಗೆ ಬಡಿಯುತ್ತದೆ. ಹಾಗಾದರೆ ಎತ್ತರದಲ್ಲಿ ಮನೆ ಕಟ್ಟಿ, ಮನೆಗೆ ಭದ್ರವಾದ ಗೋಡೆ ಕಟ್ಟಿ, ಹೆಚ್ಚು ಅರ್ಥಿಂಗ್ ಮತ್ತು ಲೈಟ್ನಿಂಗ್ ಅರೆಸ್ಟರ್ ಹಾಕಿಕೊಂಡು ಬಚಾವಾಗಬಹುದೆ? ಆಗಬಹುದೇನೊ ಸ್ವಲ್ಪ ಕಾಲ! ಆದರೆ ಜಾಗತಿಕ ತಾಪಮಾನ ಇನ್ನೂ ಕೆಲವು ಡಿಗ್ರಿ ಮೇಲಕ್ಕೆ ಹೋದರೆ?
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕೆ.ಟಿ. ಗಟ್ಟಿಯವರ ಬರಹ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ
ಅಂಗಡಿ ಎಂದರೆ ಒಂದು ಗುಡಿಸಲು. ಅದಕ್ಕೆ ಸಿನಿಮಾ ಟಿಕೇಟ್ ಕೌಂಟರ್ನಂಥ ಒಂದೇ ಕಿಟಕಿ. ಅದರ ಹಿಂದೆ ಮೆಕ್ಸಿಕೊ ದೇಶದವರಂಥ ಕಟೆದು ಮಾಡಿದಂತಹ ಮುಖದ ಗಿರಿಜಾ ಮೀಸೆಯ ಒಬ್ಬನು ಕುಳಿತಿದ್ದ. ಅವನು ಮಾತೇ ಆಡುತ್ತಿರಲಿಲ್ಲ. ಮುಖದ ಮೇಲೆ ಯಾವ ಭಾವವೂ ಇರಲಿಲ್ಲ. ಬೆರಳಿನಲ್ಲೇ ಇಷ್ಟು ರೂಪಾಯಿ ಎಂದು ತೋರಿಸುತ್ತಿದ್ದ. ಅಷ್ಟು ರೂಪಾಯಿ ಕಿಟಕಿಯಲ್ಲಿ ತೂರಿದರೆ ಆ ಕಡೆಯಿಂದ ಒಂದು ಗ್ಲಾಸ್ ನಲ್ಲಿ ಬಿಳಿ ಬಣ್ಣದ ದ್ರವವನ್ನು ಸುರಿದುಕೊಡುತ್ತಿದ್ದ. ಷೇಕ್ಸಪೀಯರ್ ಹೆಸರಿನಲ್ಲಿ ಅದನ್ನು ಗುಟುಕರಿಸಿದೆವು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ರಾಜೇಂದ್ರ ಚೆನ್ನಿ ಬರಹ
ಅಡಿಗರ ‘ವರ್ಧಮಾನ’ ಮತ್ತು ಭಾರತದ ವರ್ತಮಾನ: ಡಾ. ವಿಶ್ವನಾಥ ನೇರಳಕಟ್ಟೆ ಬರಹ
ಕವಿತೆಯ ಕೊನೆಯ ಭಾಗ ಭೌತಿಕ ನೆಲೆಯ ಇಲ್ಲವೇ ಮೂರ್ತ ರೂಪದ ವಿಕಾಸ ಕ್ರಮವನ್ನು ಮೀರಿದ ಆಂತರಂಗಿಕವಾದ ಬೆಳವಣಿಗೆಯ ಕಡೆಗೆ ಬೆರಳು ತೋರುತ್ತದೆ. ವ್ಯಕ್ತಿತ್ವದೊಳಗಿನ ಹಲವು ಅಂಶಗಳು ಸಂಘರ್ಷಕ್ಕೆ ಒಳಗಾಗುತ್ತಲೇ ಕೆಡುಕನ್ನು ಕಳಚಿಕೊಂಡು ಒಳಿತಿನ ಬೆಳಕು ಉದಯಿಸುವುದರ ಕಡೆಗೆ ಕವಿತೆ ತುಡಿಯುತ್ತದೆ. ಬಾಹ್ಯ ಗೋಚರವೆನಿಸಿಕೊಳ್ಳಬಹುದಾದ ಬದುಕಿನ ಸಾಧನೆ ಆಂತರಂಗಿಕವಾದ ಪರಿಧಿಯಲ್ಲಿ ಪ್ರಕಟಗೊಂಡು ಜೀವನ ವಿಕಾಸಕ್ಕೆ ನೆಲೆಯಾಗುವ ಬಗೆ ಇಲ್ಲಿ ಗೋಚರವಾಗುತ್ತದೆ.
ಗೋಪಾಲಕೃಷ್ಣ ಅಡಿಗರ ‘ವರ್ಧಮಾನ’ ಕವಿತೆಯ ಕುರಿತು ಡಾ. ವಿಶ್ವನಾಥ ನೇರಳಕಟ್ಟೆ ಬರಹ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ ಬರಹ
ಹಂದಿ ಹಾವಳಿಯಿಂದ ಬೇಸತ್ತ ಹೆಗಡೇರು, ಈಗ ಹದಿನೈದು ದಿನದಿಂದ ತೋಟದ ಸುತ್ತ ಇರೋ ಮರಗಿಡ ಕಡಿಸಿ, ಐಬೆಕ್ಸ್ ಬೇಲಿ ಎಳೆಸಿ, ಅಲ್ಲೇ ಹತ್ತಿರ ಇರುವ ಕರೆಂಟು ಕಂಬದಿಂದ ರಾತ್ರಿ ಹೊತ್ತು ಬೇಲಿಗೆ ಕರೆಂಟು ಹರಿಸುವ ವ್ವವಸ್ಥೆ ಮಾಡಿಕೊಂಡಿದ್ದಾರೆ. ಕರೆಂಟು ತಾಗಿಯೋ, ಹೇಗೋ, ಅವರ ಬೇಲಿ ಹಾರಿಸಿದ್ದೆ ದಿನಾ ಮೂರು ನಾಕು ಮಂಗ ಸತ್ತು ಬೀಳತೊಡಗಿದವು. ಮೂವತ್ತು ಕೆ.ಜಿ. ಹತ್ತಿರವಿರುವ ಒಳ್ಳೆ ಗಟ್ಟಿಮುಟ್ಟಾದ ಮಂಗಗಳು! ಐಬೆಕ್ಸ್ ಬೇಲಿ ತಾಗಿಸಿಕೊಳ್ಳುವಷ್ಟು ದಡ್ಡ ಪ್ರಾಣಿಗಳೆಲ್ಲ ಮಂಗಗಳು ಎಂದುಕೊಳ್ಳುತ್ತಿರುವಾಗಲೇ, ಹೆಗಡೇರಿಗೆ ವಿಪರೀತ ಜ್ವರ ಬಂತು. ಕಂಗಾಲಾಗುತ್ತಾಳೆಂದು ಮೊದಲು ಹೆಂಡತಿಗೆ ಹೇಳದೇ, ಮನೆಯಲ್ಲಿದ್ದ ಕ್ರೋಸಿನ್, ವಿಕ್ಸ್ ಆಕ್ಷನ್ ನುಂಗುತ್ತ ಉಳಿದರು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಡಾ. ಎಚ್.ಎಸ್. ಅನುಪಮಾ ಬರಹ
ಮರೆವು ಎಂಬ ಅದ್ಭುತ ಅಸ್ತ್ರ: ವಿನಾಯಕ ಎಸ್. ನಾಯಕ ಬರಹ
ಹದಿಹರೆಯದವರನ್ನೊಮ್ಮೆ ಮಾತನಾಡಿಸಿ ಅವರ ಮಾತಿನ ಮಧ್ಯೆ ಹಲವಾರು ಸಾರಿ ಆದರು ನನಗೆ ನೆನಪೆ ಇಲ್ಲ ಎಂಬ ಶಬ್ಧ ಪುನರಾವರ್ತಿತವಾಗುತ್ತಾ ಇರುತ್ತದೆ. ಇದು ಯಾವ ಜಾಣ ಕುರುಡು ಅಲ್ಲ ಹಾಗೆ ವಿಷಯದ ತಿರುಚುವಿಕೆಯೂ ಅಲ್ಲ ಇಲ್ಲಿ ಕೇವಲ ಮಾತಿನ ನುಣುಚುವಿಕೆ ಅಷ್ಟೆ. ಹಳೆ ರೋಗಿಗೆ ವೈದ್ಯರ ಚೀಟಿ ಮರೆತು ಬಂದೆನೆಂಬುದು ಆ ಕ್ಷಣದ ಸಬೂಬು ವೈದ್ಯರ ಸಿಡುಕಿನಿಂದ ತಪ್ಪಿಸಿಕೊಳ್ಳಲು. ಎಲ್ಲಾ ವೃತ್ತಿಯವರಲ್ಲು ತಮ್ಮ ವೃತ್ತಿಗೆ ಸಂಬಂದಪಟ್ಟಂತೆ ಕಾರ್ಯಕಾರಣ ಮರೆವು ಸಂದರ್ಭಕ್ಕೆ ಅನುಗುಣವಾಗಿ ಸರ್ವೆಸಾಮಾನ್ಯ ಇದಕ್ಕೆ ಉಪಶಮನದ ಅವಶ್ಯಕತೆಯು ಇಲ್ಲಾ. ಇದು ರೋಗವು ಅಲ್ಲ.
ವಿನಾಯಕ ಎಸ್. ನಾಯಕ ಬರೆದ ಪ್ರಬಂಧ ನಿಮ್ಮ ಓದಿಗೆ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ವೈದೇಹಿ ಬರಹ
ಏನು ಕಾರಣವೋ, ಮದುವೆಯಾಗಿಯೂ ಒಬ್ಬಂಟಿಯಿದ್ದರು. ಬರೆಯುತ್ತಿದ್ದಂತೆ, ಉಸಿರನ್ನು ನಡುನಡುವೆ ಸಶಬ್ದ ಒಳಗೆಳೆದುಕೊಂಡು ಸೇಂಕಿ ಮಾತಾಡುವ ಅವರ ಪರಿ ಅಚ್ಚ ನೆನಪಿನಿಂದ ಹೇಗೆ ಎದ್ದು ಬರುತ್ತಿದೆ! ಹೋಗಲಿ, ಹೊಲಿಗೆ ದುಡ್ಡು ಇಷ್ಟಾಯಿತು ಅಂತ ಹೇಳುವುದರಲ್ಲಾದರೂ ಸಂಕೋಚ ಬಿಡುವರೆ? ಇಲ್ಲ. ಹೇಳಿದ ಮೇಲೆ ಈಗ ಇಟ್ಟುಬಿಡಿ ಅಂತ ಅಂದವರೂ ಅಲ್ಲ. ಸ್ವಲ್ಪ ಕೊಟ್ಟು ಉಳಿದದ್ದು ಎರಡುದಿನ ಬಿಟ್ಟು ಕಳಿಸಿಕೊಡುತ್ತೇನೆ ಎಂದರೆ ‘ಆಯಿತಪ್ಪ, ಅಡ್ಡಿಲ್ಲ ಅಡ್ಡಿಲ್ಲ’. ಕೊಟ್ಟ ದುಡ್ಡನ್ನು ಎದುರೇ ಎಣಿಸಿದವರೂ ಅಲ್ಲ. ನನಗೆ ತಿಳಿದಂತೆ ದುಡ್ಡಿನ ಮಟ್ಟಿಗೆ ಅವರಿಗೆ ಮೋಸಮಾಡಿದ ಮನೆಗಳೂ ಇಲ್ಲ. ಬಿಡಿ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಕನ್ನಡದ ಅನುಪಮ ಲೇಖಕಿ ವೈದೇಹಿ ಬರಹ
ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಅಬ್ದುಲ್ ರಶೀದ್ ಭಾಷಣ
ಇವತ್ತು ಇಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಈ ಬಿರುಬಿಸಿಲ ಹೊತ್ತು ಅವರು ಯಾರೂ ಇಲ್ಲಿ ಇಲ್ಲ. ಆದರೆ ಅವರ ಹಾಗಿರುವ ಹಲವು ಹಾಡುಗಾರರೂ ಇಲ್ಲೇ ಅಕ್ಕಪಕ್ಕ ತೋಟದಲ್ಲಿ ಕೆಲಸ ಮಾಡುತ್ತಿರಬಹುದು. ಅಥವಾ ಅವರ ಜಾಗವನ್ನು ಅಸ್ಸಾಮಿನಿಂದ ಬಂಗಾಳದಿಂದ ಬಂದ ಕೆಲಸಗಾರರು ವಹಿಸಿಕೊಂಡಿರಬಹುದು. ಅವರಲ್ಲೂ ಇಂತಹ ಕಥೆಗಾರರಿರಬಹುದು. ಸುಮಾರು ಐವತ್ತು ವರ್ಷಗಳ ಹಿಂದೆ ಅಸ್ಸಾಮಿನಿಂದ ಜೇನುಪೆಟ್ಟಿಗೆಗಳನ್ನು ಇಡಲು ದಾಸ್ ಎಂಬ ಯುವಕ ಬಂದಿದ್ದ. ಅವನೂ ಆಗ ಬಾಲಕನಾಗಿದ್ದ ನನಗೆ ಕಥೆಗಳನ್ನು ಹೇಳುತ್ತಿದ್ದ. ಈಗ ಬಹುಶಃ ಆತ ಎಲ್ಲಿರಬಹುದೋ ಗೊತ್ತಿಲ್ಲ. ಆದರೆ ಆತ ನನ್ನ ಕಥಾ ಪಾತ್ರವಾದ.
ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನಡೆದ “ಕೊಡಗು ಜಿಲ್ಲಾ ಹದಿನೇಳನೆಯ ಕನ್ನಡ ಸಾಹಿತ್ಯ ಸಮ್ಮೇಳನ”ನ ಅಧ್ಯಕ್ಷರಾದ ಅಬ್ದುಲ್ ರಶೀದ್ ಭಾಷಣ ನಿಮ್ಮ ಓದಿಗೆ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್ ತರೀಕೆರೆ ಬರಹ
ಆದರೆ ಆ ಕುಣಿತದಲ್ಲಿ ದಲಿತ ತರುಣರು ಭಾಗವಹಿಸಿರಲಿಲ್ಲ. ಕುಣಿಯುವಾಗ ಮೈಕೈ ತಾಗುತ್ತದೆಯೆಂದೇ? ಇಡೀ ಊರು ಒಟ್ಟಾಗಿ ಸಂಭ್ರಮದಿಂದ ಹಬ್ಬ ಆಚರಿಸುತ್ತದೆ ಎಂಬುದು ಅರೆಸತ್ಯವಲ್ಲವೆ? ಊರ ಹೋಟೆಲು, ಗುಡಿಗಳಲ್ಲಿ ಇರುವಂತೆ ಮೊಹರಂ ಮಸೂತಿಯಲ್ಲೂ ಅವರಿಗೆ ಒಳಗಿನತನಕ ಪ್ರವೇಶವಿರಲಿಲ್ಲ. ಒಂದು ಅಂತರದಲ್ಲಿ ನಿಂತು ಎಡೆ ಮಾಡಿಸಿಕೊಂಡು ಹೋಗುತಿದ್ದರು. ಹಿಂದೆ ದಲಿತರು ಹೋಟೆಲುಗಳಲ್ಲಿ ತಮಗೂ ಸರಿಸಮವಾಗಿ ಚಹ ತಿಂಡಿ ಕೊಡಬೇಕೆಂದು ಒತ್ತಾಯಿಸಿದ್ದರು. ಅದು ಸಾಧ್ಯವಾಗಿರಲಿಲ್ಲ. ನಮಗೆ ಸಮಾನತೆ ಇಲ್ಲದಿದ್ದರೆ, ನಾವು ತಮಟೆ ಬಾರಿಸುವುದಿಲ್ಲ ಎಂದು ಅವರು ನಿರಾಕರಿಸಿದ್ದರಿಂದ, ಬಳ್ಳಾರಿ ಜಿಲ್ಲೆಯ ಮೂವತ್ತಕ್ಕೂ ಹೆಚ್ಚಿನ ಊರುಗಳಲ್ಲಿ ಮೊಹರಂ ಸಂಭ್ರಮ ಕಡಿಮೆಯಾಗಿದೆ.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ರಹಮತ್ ತರೀಕೆರೆ ಬರಹ
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್. ಶ್ರೀರಾಮ್ ಬರಹ
ಮೊದಲಿಗೆ ಬ್ರಿಟಿಷ್ ರಾಜನ ಚಿತ್ರದ ಜಾಗದಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರವನ್ನು ಹಾಕಬೇಕೆಂದು ಯೋಜನೆ ತಯಾರಿಸಿದರೂ ಹಾಕಿದ್ದು ಅಶೋಕನ ಸಿಂಹಗಳನ್ನು! ಆ ನಂತರ ತಂಜಾವೂರಿನ ದೇವಸ್ಥಾನದ ಚಿತ್ರದ ಸಾವಿರ ರೂಪಾಯಿನ ನೋಟು, ಗೇಟ್ವೇ ಚಿತ್ರವಿದ್ದ ಐದು ಸಾವಿರ ರೂಪಾಯಿನ ನೋಟನ್ನು ಛಾಪಿಸಲಾಯಿತು. ಮಹಾತ್ಮಾ ಗಾಂಧಿಯ ಚಿತ್ರ ಹಾಕಿ ನೋಟುಗಳನ್ನು ಮೊದಲ ಬಾರಿಗೆ ಛಾಪಿಸಿದಾಗ ಅನೇಕರು ಅದನ್ನು ನಿಜವಾದ ರೂಪಾಯಿಗಳೆಂದು ಒಪ್ಪಲಿಲ್ಲವಂತೆ! ಅದು ನಿಜಕ್ಕೂ ಜಾಲಿ ನೋಟಲ್ಲ ಎನ್ನುವ ಪ್ರಚಾರವನ್ನು ಸರಕಾರ ಕೈಗೊಳ್ಳಬೇಕಾಯಿತು.
“ಹಳೆಯ ಪುಟಗಳಿಂದ…” ಸರಣಿಯಲ್ಲಿ ಎಂ.ಎಸ್. ಶ್ರೀರಾಮ್ ಬರಹ










